<p>ಗುಬ್ಬಿ: ಅಹಿಂಸೆ ಮತ್ತು ಶಾಂತಿಯ ಪಥದಲ್ಲಿ ಸಾಗಿದಲ್ಲಿ ಸಾಮರಸ್ಯದ ಸಮಾಜ ಕಟ್ಟಲು ಸಾಧ್ಯ ಎನ್ನುವುದನ್ನು ಭಗವಾನ್ ಮಹಾವೀರರು ತೋರಿಸಿ ಕೊಟ್ಟಿದ್ದಾರೆ ಎಂದು ತಹಶೀಲ್ದಾರ್ ಆರತಿ ಬಿ ಹೇಳಿದರು.</p>.<p>ಸೋಮವಾರ ತಾಲ್ಲೂಕು ಆಡಳಿತ ಸೌಧದಲ್ಲಿ ಏರ್ಪಡಿಸಿದ್ದ ಮಹಾವೀರ ಜಯಂತಿಯಲ್ಲಿ ಮಾತನಾಡಿದರು.</p>.<p>ಮಹಾವೀರರು ಸಮಾಜದಲ್ಲಿನ ತಾರತಮ್ಯ ಹೋಗಲಾಡಿಸಲು ನಿರಂತರ ಪ್ರಯತ್ನ ನಡೆಸಿದರು. ಅವರ ತತ್ವ, ಆದರ್ಶ, ಸಿದ್ಧಾಂತಗಳು ಇಂದಿನ ಸಮಾಜಕ್ಕೆ ದಾರಿ ದೀಪ. ಮಹಾವೀರರು ತೋರಿಸಿರುವ ಮಾರ್ಗದಲ್ಲಿ ನಡೆದಲ್ಲಿ ಪ್ರಪಂಚದಲ್ಲಿ ಯುದ್ಧದ ಸನ್ನಿವೇಶವೇ ಉದ್ಭವವಾಗುವುದಿಲ್ಲ ಎಂದರು.</p>.<p>ಬದುಕಿ ಮತ್ತು ಬದುಕಲು ಬಿಡಿ ಎಂಬ ತತ್ವವನ್ನು ಮನುಕುಲಕ್ಕೆ ತಿಳಿಸುವ ಮೂಲಕ ವಿಶ್ವ ಮಾನವೀಯತೆಯ ಸಂದೇಶವನ್ನು ಇಡಿ ಜಗತ್ತಿಗೆ ತಿಳಿಸಿದ ಮಹಾನ್ ತೀರ್ಥಂಕರರಾಗಿದ್ದಾರೆ. ಅವರ ಅಹಿಂಸಾ ಮಾರ್ಗದಲ್ಲಿ ಸಾಗಿ ಅಸೂಯೆ ಮುಕ್ತ ಸಮಾಜ ಕಟ್ಟೋಣ ಎಂದರು.</p>.<p>ಸಮುದಾಯದ ಸಾಧಕರನ್ನು ಗೌರವಿಸಲಾಯಿತು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿಂದು ಮಾಧವ, ಇಸಿಒ ನಿಜಾನಂದ ಮೂರ್ತಿ, ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-17-631896881</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಬ್ಬಿ: ಅಹಿಂಸೆ ಮತ್ತು ಶಾಂತಿಯ ಪಥದಲ್ಲಿ ಸಾಗಿದಲ್ಲಿ ಸಾಮರಸ್ಯದ ಸಮಾಜ ಕಟ್ಟಲು ಸಾಧ್ಯ ಎನ್ನುವುದನ್ನು ಭಗವಾನ್ ಮಹಾವೀರರು ತೋರಿಸಿ ಕೊಟ್ಟಿದ್ದಾರೆ ಎಂದು ತಹಶೀಲ್ದಾರ್ ಆರತಿ ಬಿ ಹೇಳಿದರು.</p>.<p>ಸೋಮವಾರ ತಾಲ್ಲೂಕು ಆಡಳಿತ ಸೌಧದಲ್ಲಿ ಏರ್ಪಡಿಸಿದ್ದ ಮಹಾವೀರ ಜಯಂತಿಯಲ್ಲಿ ಮಾತನಾಡಿದರು.</p>.<p>ಮಹಾವೀರರು ಸಮಾಜದಲ್ಲಿನ ತಾರತಮ್ಯ ಹೋಗಲಾಡಿಸಲು ನಿರಂತರ ಪ್ರಯತ್ನ ನಡೆಸಿದರು. ಅವರ ತತ್ವ, ಆದರ್ಶ, ಸಿದ್ಧಾಂತಗಳು ಇಂದಿನ ಸಮಾಜಕ್ಕೆ ದಾರಿ ದೀಪ. ಮಹಾವೀರರು ತೋರಿಸಿರುವ ಮಾರ್ಗದಲ್ಲಿ ನಡೆದಲ್ಲಿ ಪ್ರಪಂಚದಲ್ಲಿ ಯುದ್ಧದ ಸನ್ನಿವೇಶವೇ ಉದ್ಭವವಾಗುವುದಿಲ್ಲ ಎಂದರು.</p>.<p>ಬದುಕಿ ಮತ್ತು ಬದುಕಲು ಬಿಡಿ ಎಂಬ ತತ್ವವನ್ನು ಮನುಕುಲಕ್ಕೆ ತಿಳಿಸುವ ಮೂಲಕ ವಿಶ್ವ ಮಾನವೀಯತೆಯ ಸಂದೇಶವನ್ನು ಇಡಿ ಜಗತ್ತಿಗೆ ತಿಳಿಸಿದ ಮಹಾನ್ ತೀರ್ಥಂಕರರಾಗಿದ್ದಾರೆ. ಅವರ ಅಹಿಂಸಾ ಮಾರ್ಗದಲ್ಲಿ ಸಾಗಿ ಅಸೂಯೆ ಮುಕ್ತ ಸಮಾಜ ಕಟ್ಟೋಣ ಎಂದರು.</p>.<p>ಸಮುದಾಯದ ಸಾಧಕರನ್ನು ಗೌರವಿಸಲಾಯಿತು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿಂದು ಮಾಧವ, ಇಸಿಒ ನಿಜಾನಂದ ಮೂರ್ತಿ, ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-17-631896881</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>