<p>ಗುಬ್ಬಿ: ಹೈನುಗಾರಿಕೆಯಿಂದ ಉದ್ಯೋಗ ಸೃಷ್ಟಿಯಾಗಿ, ಆರ್ಥಿಕ ಮಟ್ಟ ಹೆಚ್ಚಲಿದೆ ಎಂದು ಕೆಎಸ್ಆರ್ಟಿಸಿ ನಿಗಮದ ಅಧ್ಯಕ್ಷ, ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದರು.</p>.<p>ಪಟ್ಟಣದ ತಾ.ಪಂ ಆವರಣದಲ್ಲಿ ಸೋಮವಾರ ತುಮುಲ್ ವತಿಯಿಂದ ಆಯೋಜಿಸಿದ್ದ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಶೇಖರಣ ಸಾಮಗ್ರಿ ವಿತರಿಸಿ ಮಾತನಾಡಿದರು.</p>.<p>ಸರ್ಕಾರದ ಸವಲತ್ತುಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಲಾಗುವುದು. ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ ತೊಂದರೆ ಆಗಬಾರದು ಎಂದು ಆಯಾ ಗ್ರಾಮಗಳಲ್ಲಿಯೇ ಹಾಲು ಉತ್ಪಾದಕರ ಸಂಘ ಆರಂಭಿಸಲಾಗುತ್ತಿದೆ. ಮುಂದಿನ ದಿನದಲ್ಲಿ ಪ್ರತಿ ಗ್ರಾಮದಲ್ಲಿ ಸಂಘ ಶುರು ಮಾಡಲಾಗುವುದು ಎಂದರು.</p>.<p>ಹಾಲು ಶೇಖರಣೆ, ಪರೀಕ್ಷಾ ಸಾಮಗ್ರಿ ಸೇರಿ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತದೆ. ಪ್ರತಿಯೊಂದು ಸಂಘಕ್ಕೆ ಎಚ್ಎಎಲ್ ಕಾರ್ಖಾನೆಯ ಸಿಎಸ್ಆರ್ ಹಣದಿಂದ ಸೌಕರ್ಯ ಒದಗಿಸಲಾಗುವುದು ಎಂದು ತಿಳಿಸಿದರು.</p>.<p>ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಆರ್.ವೆಂಕಟೇಶ್ ತುಳಸಿದಾಸ್, ಮುಖಂಡರಾದ ಬಾಲಕೃಷ್ಣ, ಮಧು, ಶ್ರೀನಿವಾಸ್, ಉಂಡೆ ರಾಮಣ್ಣ, ಚಿದಾನಂದ, ಕೆ.ಎ.ಶಂಕರನಾಗ್ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-17-1296981421</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಬ್ಬಿ: ಹೈನುಗಾರಿಕೆಯಿಂದ ಉದ್ಯೋಗ ಸೃಷ್ಟಿಯಾಗಿ, ಆರ್ಥಿಕ ಮಟ್ಟ ಹೆಚ್ಚಲಿದೆ ಎಂದು ಕೆಎಸ್ಆರ್ಟಿಸಿ ನಿಗಮದ ಅಧ್ಯಕ್ಷ, ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದರು.</p>.<p>ಪಟ್ಟಣದ ತಾ.ಪಂ ಆವರಣದಲ್ಲಿ ಸೋಮವಾರ ತುಮುಲ್ ವತಿಯಿಂದ ಆಯೋಜಿಸಿದ್ದ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಶೇಖರಣ ಸಾಮಗ್ರಿ ವಿತರಿಸಿ ಮಾತನಾಡಿದರು.</p>.<p>ಸರ್ಕಾರದ ಸವಲತ್ತುಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಲಾಗುವುದು. ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ ತೊಂದರೆ ಆಗಬಾರದು ಎಂದು ಆಯಾ ಗ್ರಾಮಗಳಲ್ಲಿಯೇ ಹಾಲು ಉತ್ಪಾದಕರ ಸಂಘ ಆರಂಭಿಸಲಾಗುತ್ತಿದೆ. ಮುಂದಿನ ದಿನದಲ್ಲಿ ಪ್ರತಿ ಗ್ರಾಮದಲ್ಲಿ ಸಂಘ ಶುರು ಮಾಡಲಾಗುವುದು ಎಂದರು.</p>.<p>ಹಾಲು ಶೇಖರಣೆ, ಪರೀಕ್ಷಾ ಸಾಮಗ್ರಿ ಸೇರಿ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತದೆ. ಪ್ರತಿಯೊಂದು ಸಂಘಕ್ಕೆ ಎಚ್ಎಎಲ್ ಕಾರ್ಖಾನೆಯ ಸಿಎಸ್ಆರ್ ಹಣದಿಂದ ಸೌಕರ್ಯ ಒದಗಿಸಲಾಗುವುದು ಎಂದು ತಿಳಿಸಿದರು.</p>.<p>ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಆರ್.ವೆಂಕಟೇಶ್ ತುಳಸಿದಾಸ್, ಮುಖಂಡರಾದ ಬಾಲಕೃಷ್ಣ, ಮಧು, ಶ್ರೀನಿವಾಸ್, ಉಂಡೆ ರಾಮಣ್ಣ, ಚಿದಾನಂದ, ಕೆ.ಎ.ಶಂಕರನಾಗ್ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-17-1296981421</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>