<p><strong>ಗುಬ್ಬಿ</strong>: ಸಮುದಾಯದಲ್ಲಿ ಒಗ್ಗಟ್ಟು ರೂಢಿಸಿಕೊಂಡಾಗ ಮಾತ್ರ ಸಮುದಾಯಕ್ಕೆ ಅಗತ್ಯ ಸೌಲಭ್ಯಗಳನ್ನು ಪಡೆಯಲು ಸಾಧ್ಯ ಎಂದು ನರಸಿಂಹರಾಜಾಪುರದ ಸಿಂಹನಗದ್ದೆ ಲಕ್ಷ್ಮಿಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಹೇಳಿದರು.</p>.<p>ಚೇಳೂರು ಹೋಬಳಿ ಬಿದರೆ ಗ್ರಾಮದ ಸುಪಾಶ್ವನಾಥ ಜೈನ ಮಂದಿರದಲ್ಲಿ ಭಾನುವಾರ ನಡೆದ ಧಾರ್ಮಿಕ ಸಮಾರಂಭದಲ್ಲಿ ಮಾತನಾಡಿದರು.</p>.<p>ಬಿದರೆ ಗ್ರಾಮದಲ್ಲಿರುವ ಜಿನಮಂದಿರ ಪ್ರಾಚೀನ ಇತಿಹಾಸ ಹೊಂದಿದೆ. ಇದರ ಮಹತ್ವವನ್ನು ಎಲ್ಲರಿಗೂ ತಿಳಿಸಿಕೊಡುವ ನಿಟ್ಟಿನಲ್ಲಿ ಸಮುದಾಯ ಮುಂದಾಗಬೇಕಿದೆ. ಈ ಭಾಗದಲ್ಲಿ ಸಮುದಾಯದವರು ಅಲ್ಪಸಂಖ್ಯೆಯಲ್ಲಿದ್ದರೂ ಉತ್ತಮ ಧಾರ್ಮಿಕ ಕಾರ್ಯಗಳನ್ನು ಮಾಡುತ್ತಿರುವುದು ಪ್ರಶಂಸನೀಯ ಎಂದು ಹೇಳಿದರು.</p>.<p>ಪುರಾತನ ಜಿನಮಂದಿರವಾಗಿರುವ ಇಲ್ಲಿಗೆ ಭಕ್ತರು ಬಂದು ಹೋಗಲು ಸಾರಿಗೆ ಸೌಕರ್ಯದ ಕೊರತೆ ಇರುವುದರಿಂದ ಸಂಸದರು ಹಾಗೂ ಶಾಸಕರು ಅಗತ್ಯವಿರುವ ಸಾರಿಗೆ ಸೌಕರ್ಯ ಒದಗಿಸಿಕೊಟ್ಟಲ್ಲಿ ಅನುಕೂಲವಾಗುವುದು ಎಂದು ತಿಳಿಸಿದರು.</p>.<p>ಶಾಸಕ ಎಸ್.ಆರ್. ಶ್ರೀನಿವಾಸ್ ಮಾತನಾಡಿ, ಧಾರ್ಮಿಕ ಆಚರಣೆಯ ಜೊತೆಗೆ ತಂದೆ ತಾಯಿಗಳಿಗೂ ಗೌರವ ಕೊಡುವುದನ್ನು ರೂಢಿಸಿಕೊಂಡಾಗ ಮನುಷ್ಯ ಉನ್ನತಮಟ್ಟ ತಲುಪಲು ಸಾಧ್ಯ. ಮಾತಿಗಿಂತ ಮಾಡುವ ಕೆಲಸದಲ್ಲಿ ಶ್ರದ್ಧೆ ತೋರಿದಲ್ಲಿ ಬದುಕನ್ನು ಸಾರ್ಥಕ ಪಡಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.</p>.<p>ಸುಪಾಶ್ವನಾಥ ಸ್ವಾಮಿ ಮೂರ್ತಿಯನ್ನು ಗ್ರಾಮದಲ್ಲಿ ಮೆರವಣಿಗೆ ಮಾಡಲಾಯಿತು. ಸಮುದಾಯದ ಮಹಿಳೆಯರು ಪೂರ್ಣಕುಂಭ ಹೊತ್ತು ದೇವರ ಮೂರ್ತಿ ಜೊತೆ ಹೆಜ್ಜೆ ಹಾಕಿದರು.</p>.<p>ಸಮುದಾಯದ ಮುಖಂಡರು, ಭಕ್ತರು, ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ಸಮುದಾಯದಲ್ಲಿ ಒಗ್ಗಟ್ಟು ರೂಢಿಸಿಕೊಂಡಾಗ ಮಾತ್ರ ಸಮುದಾಯಕ್ಕೆ ಅಗತ್ಯ ಸೌಲಭ್ಯಗಳನ್ನು ಪಡೆಯಲು ಸಾಧ್ಯ ಎಂದು ನರಸಿಂಹರಾಜಾಪುರದ ಸಿಂಹನಗದ್ದೆ ಲಕ್ಷ್ಮಿಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಹೇಳಿದರು.</p>.<p>ಚೇಳೂರು ಹೋಬಳಿ ಬಿದರೆ ಗ್ರಾಮದ ಸುಪಾಶ್ವನಾಥ ಜೈನ ಮಂದಿರದಲ್ಲಿ ಭಾನುವಾರ ನಡೆದ ಧಾರ್ಮಿಕ ಸಮಾರಂಭದಲ್ಲಿ ಮಾತನಾಡಿದರು.</p>.<p>ಬಿದರೆ ಗ್ರಾಮದಲ್ಲಿರುವ ಜಿನಮಂದಿರ ಪ್ರಾಚೀನ ಇತಿಹಾಸ ಹೊಂದಿದೆ. ಇದರ ಮಹತ್ವವನ್ನು ಎಲ್ಲರಿಗೂ ತಿಳಿಸಿಕೊಡುವ ನಿಟ್ಟಿನಲ್ಲಿ ಸಮುದಾಯ ಮುಂದಾಗಬೇಕಿದೆ. ಈ ಭಾಗದಲ್ಲಿ ಸಮುದಾಯದವರು ಅಲ್ಪಸಂಖ್ಯೆಯಲ್ಲಿದ್ದರೂ ಉತ್ತಮ ಧಾರ್ಮಿಕ ಕಾರ್ಯಗಳನ್ನು ಮಾಡುತ್ತಿರುವುದು ಪ್ರಶಂಸನೀಯ ಎಂದು ಹೇಳಿದರು.</p>.<p>ಪುರಾತನ ಜಿನಮಂದಿರವಾಗಿರುವ ಇಲ್ಲಿಗೆ ಭಕ್ತರು ಬಂದು ಹೋಗಲು ಸಾರಿಗೆ ಸೌಕರ್ಯದ ಕೊರತೆ ಇರುವುದರಿಂದ ಸಂಸದರು ಹಾಗೂ ಶಾಸಕರು ಅಗತ್ಯವಿರುವ ಸಾರಿಗೆ ಸೌಕರ್ಯ ಒದಗಿಸಿಕೊಟ್ಟಲ್ಲಿ ಅನುಕೂಲವಾಗುವುದು ಎಂದು ತಿಳಿಸಿದರು.</p>.<p>ಶಾಸಕ ಎಸ್.ಆರ್. ಶ್ರೀನಿವಾಸ್ ಮಾತನಾಡಿ, ಧಾರ್ಮಿಕ ಆಚರಣೆಯ ಜೊತೆಗೆ ತಂದೆ ತಾಯಿಗಳಿಗೂ ಗೌರವ ಕೊಡುವುದನ್ನು ರೂಢಿಸಿಕೊಂಡಾಗ ಮನುಷ್ಯ ಉನ್ನತಮಟ್ಟ ತಲುಪಲು ಸಾಧ್ಯ. ಮಾತಿಗಿಂತ ಮಾಡುವ ಕೆಲಸದಲ್ಲಿ ಶ್ರದ್ಧೆ ತೋರಿದಲ್ಲಿ ಬದುಕನ್ನು ಸಾರ್ಥಕ ಪಡಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.</p>.<p>ಸುಪಾಶ್ವನಾಥ ಸ್ವಾಮಿ ಮೂರ್ತಿಯನ್ನು ಗ್ರಾಮದಲ್ಲಿ ಮೆರವಣಿಗೆ ಮಾಡಲಾಯಿತು. ಸಮುದಾಯದ ಮಹಿಳೆಯರು ಪೂರ್ಣಕುಂಭ ಹೊತ್ತು ದೇವರ ಮೂರ್ತಿ ಜೊತೆ ಹೆಜ್ಜೆ ಹಾಕಿದರು.</p>.<p>ಸಮುದಾಯದ ಮುಖಂಡರು, ಭಕ್ತರು, ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>