<p><strong>ಗುಬ್ಬಿ:</strong> ತಾಲ್ಲೂಕಿನ ನಿಟ್ಟೂರು ಹೋಬಳಿ ಬೆಣಚಿಗೆರೆ ಸಮೀಪ ನಿರ್ಮಾಣ ಮಾಡಲು ಉದ್ದೇಶಿಸಿರುವ ರೈಲ್ವೆ ಮೇಲ್ಸೇತುವೆ ಸ್ಥಳಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ರೈತರ ಜಮೀನುಗಳನ್ನು ಸ್ವಾಧೀನ ಮಾಡಬೇಕಾಗಿರುವುದರಿಂದ ರೈತರ ಜೊತೆ ಚರ್ಚೆ ನಡೆಸಿದರು.<br> ಸರ್ಕಾರದ ನಿಯಮಾನುಸಾರ ರೈತರಿಗೆ ಪರಿಹಾರದ ಹಣ ನೀಡಲಾಗುವುದು. ರೈತರು ಸಹಕರಿಸಿದಲ್ಲಿ ಕಾಮಗಾರಿಯನ್ನು ಶೀಘ್ರವೇ ಆರಂಭಿಸಲಾಗುವುದು ಎಂದು ತಿಳಿಸಿದರು.</p>.<p>ಶೀಘ್ರವೇ ಜಂಟಿ ಸರ್ವೆ ನಡೆಸಿ ಭೂಸ್ವಾಧೀನ ಪ್ರಕ್ರಿಯೆಗೆ ಮುಂದಾಗಬೇಕು. ತಾಲ್ಲೂಕಿನಲ್ಲಿ ಮೂರು ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಅನುಮೋದನೆ ದೊರಕಿದೆ. ಶೀಘ್ರವೇ ಕಾರ್ಯ ಆರಂಭ ಮಾಡಲಾಗುವುದು. ರೈಲ್ವೆ ಮೇಲ್ಸೇತುವೆ ನಿರ್ಮಾಣದಿಂದ ಸಾರ್ವಜನಿಕರಿಗೆ ಹಾಗೂ ಸ್ಥಳೀಯರಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.</p>.<p>ಜಂಟಿ ಸರ್ವೆ ನಡೆಸಿದ ತಕ್ಷಣವೇ ಸಂಬಂಧಿಸಿದ ರೈತರಿಗೆ ನೋಟಿಸ್ ನೀಡಿ ಪರಿಹಾರದ ಹಣ ನೀಡಲಾಗುವುದು. ರೈತರು ತಕರಾರು ಮಾಡಿದಲ್ಲಿ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಟ್ಟು ಕಾಮಗಾರಿಗೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<p>ಭೂಸ್ವಾಧೀನ ಪಡಿಸಿಕೊಳ್ಳುತ್ತಿರುವ ರೈತರ ಜಮೀನುಗಳಿಗೆ ವೈಜ್ಞಾನಿಕ ಮತ್ತು ಸ್ಥಳೀಯ ಮಾರುಕಟ್ಟೆ ದರದಂತೆ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕುವರು. ರೈತರ ಕಷ್ಟಗಳನ್ನು ಅರ್ಥೈಸಿಕೊಂಡು ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.</p>.<p>ತಹಶೀಲ್ದಾರ್ ಆರತಿ ಬಿ, ಎಡಿಎಲ್ಆರ್ ತಿಮ್ಮಯ್ಯ, ಕಂದಾಯ ಅಧಿಕಾರಿಗಳು, ರೈಲ್ವೆ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ತಾಲ್ಲೂಕಿನ ನಿಟ್ಟೂರು ಹೋಬಳಿ ಬೆಣಚಿಗೆರೆ ಸಮೀಪ ನಿರ್ಮಾಣ ಮಾಡಲು ಉದ್ದೇಶಿಸಿರುವ ರೈಲ್ವೆ ಮೇಲ್ಸೇತುವೆ ಸ್ಥಳಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ರೈತರ ಜಮೀನುಗಳನ್ನು ಸ್ವಾಧೀನ ಮಾಡಬೇಕಾಗಿರುವುದರಿಂದ ರೈತರ ಜೊತೆ ಚರ್ಚೆ ನಡೆಸಿದರು.<br> ಸರ್ಕಾರದ ನಿಯಮಾನುಸಾರ ರೈತರಿಗೆ ಪರಿಹಾರದ ಹಣ ನೀಡಲಾಗುವುದು. ರೈತರು ಸಹಕರಿಸಿದಲ್ಲಿ ಕಾಮಗಾರಿಯನ್ನು ಶೀಘ್ರವೇ ಆರಂಭಿಸಲಾಗುವುದು ಎಂದು ತಿಳಿಸಿದರು.</p>.<p>ಶೀಘ್ರವೇ ಜಂಟಿ ಸರ್ವೆ ನಡೆಸಿ ಭೂಸ್ವಾಧೀನ ಪ್ರಕ್ರಿಯೆಗೆ ಮುಂದಾಗಬೇಕು. ತಾಲ್ಲೂಕಿನಲ್ಲಿ ಮೂರು ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಅನುಮೋದನೆ ದೊರಕಿದೆ. ಶೀಘ್ರವೇ ಕಾರ್ಯ ಆರಂಭ ಮಾಡಲಾಗುವುದು. ರೈಲ್ವೆ ಮೇಲ್ಸೇತುವೆ ನಿರ್ಮಾಣದಿಂದ ಸಾರ್ವಜನಿಕರಿಗೆ ಹಾಗೂ ಸ್ಥಳೀಯರಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.</p>.<p>ಜಂಟಿ ಸರ್ವೆ ನಡೆಸಿದ ತಕ್ಷಣವೇ ಸಂಬಂಧಿಸಿದ ರೈತರಿಗೆ ನೋಟಿಸ್ ನೀಡಿ ಪರಿಹಾರದ ಹಣ ನೀಡಲಾಗುವುದು. ರೈತರು ತಕರಾರು ಮಾಡಿದಲ್ಲಿ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಟ್ಟು ಕಾಮಗಾರಿಗೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<p>ಭೂಸ್ವಾಧೀನ ಪಡಿಸಿಕೊಳ್ಳುತ್ತಿರುವ ರೈತರ ಜಮೀನುಗಳಿಗೆ ವೈಜ್ಞಾನಿಕ ಮತ್ತು ಸ್ಥಳೀಯ ಮಾರುಕಟ್ಟೆ ದರದಂತೆ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕುವರು. ರೈತರ ಕಷ್ಟಗಳನ್ನು ಅರ್ಥೈಸಿಕೊಂಡು ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.</p>.<p>ತಹಶೀಲ್ದಾರ್ ಆರತಿ ಬಿ, ಎಡಿಎಲ್ಆರ್ ತಿಮ್ಮಯ್ಯ, ಕಂದಾಯ ಅಧಿಕಾರಿಗಳು, ರೈಲ್ವೆ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>