<p>ಗುಬ್ಬಿ: ಪಟ್ಟಣದಲ್ಲಿ ಪಾದಚಾರಿ ಮಾರ್ಗ ಹಾಗೂ ಚರಂಡಿ ನಿರ್ಮಿಸಲು ರಸ್ತೆಯನ್ನು ಮತ್ತಷ್ಟು ವಿಸ್ತರಣೆ ಮಾಡಬೇಕಾದ ಅಗತ್ಯವಿದೆ. ವಿಸ್ತರಣೆಗೆ ವರ್ತಕರು ಒಪ್ಪುತ್ತಿಲ್ಲ. ಸಾರ್ವಜನಿಕರು ಮತ್ತು ವರ್ತಕರ ಸಭೆ ಕರೆದು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ಹೇಳಿದರು.</p>.<p>‘ಪಟ್ಟಣದಲ್ಲಿ ಚರಂಡಿಗಳನ್ನು ನಿರ್ಮಿಸದೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ವೈಟ್ಟಾಪಿಂಗ್ ಕಾಮಗಾರಿ’ ಬಗ್ಗೆ ಸೋಮವಾರ ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ವರದಿಗೆ ಅವರು ಪ್ರತಿಕ್ರಿಯಿಸಿದರು.</p>.<p>ಹೆದ್ದಾರಿ ಪ್ರಾಧಿಕಾರದ ನಿಯಮಾನುಸಾರ ಕ್ರಮ ಕೈಗೊಂಡಲ್ಲಿ ಸದ್ಯ ರಸ್ತೆ ಬದಿ ಇರುವ ಎಲ್ಲ ಅಂಗಡಿಗಳನ್ನು ಒಡೆಯ ಬೇಕಾಗುತ್ತದೆ. ವರ್ತಕರ ಜೊತೆಗೆ ಸಾರ್ವಜನಿಕರ ಅನುಕೂಲ ಗಮನದಲ್ಲಿಟ್ಟುಕೊಳ್ಳಬೇಕಿದೆ. ಮಂದಗತಿಯಲ್ಲಿ ಸಾಗುತ್ತಿರುವ ಕಾಮಗಾರಿ ಬಗ್ಗೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿ ತುರ್ತಾಗಿ ಮುಗಿಸುವಂತೆ ಸೂಚಿಸಲಾಗುವುದು ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಟಿಎಚ್ಒ ಬಿಂದು ಮಾಧವ, ವೈದ್ಯ ಆರ್ಯನ್, ಚೇತನ್ ಕುಮಾರ್, ದರ್ಶನ್, ರಮೇಶ್, ನರಸಿಂಹಮೂರ್ತಿ ಹಾಗೂ ಗ್ರಾಮಸ್ಥರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-17-2048898210</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಬ್ಬಿ: ಪಟ್ಟಣದಲ್ಲಿ ಪಾದಚಾರಿ ಮಾರ್ಗ ಹಾಗೂ ಚರಂಡಿ ನಿರ್ಮಿಸಲು ರಸ್ತೆಯನ್ನು ಮತ್ತಷ್ಟು ವಿಸ್ತರಣೆ ಮಾಡಬೇಕಾದ ಅಗತ್ಯವಿದೆ. ವಿಸ್ತರಣೆಗೆ ವರ್ತಕರು ಒಪ್ಪುತ್ತಿಲ್ಲ. ಸಾರ್ವಜನಿಕರು ಮತ್ತು ವರ್ತಕರ ಸಭೆ ಕರೆದು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ಹೇಳಿದರು.</p>.<p>‘ಪಟ್ಟಣದಲ್ಲಿ ಚರಂಡಿಗಳನ್ನು ನಿರ್ಮಿಸದೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ವೈಟ್ಟಾಪಿಂಗ್ ಕಾಮಗಾರಿ’ ಬಗ್ಗೆ ಸೋಮವಾರ ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ವರದಿಗೆ ಅವರು ಪ್ರತಿಕ್ರಿಯಿಸಿದರು.</p>.<p>ಹೆದ್ದಾರಿ ಪ್ರಾಧಿಕಾರದ ನಿಯಮಾನುಸಾರ ಕ್ರಮ ಕೈಗೊಂಡಲ್ಲಿ ಸದ್ಯ ರಸ್ತೆ ಬದಿ ಇರುವ ಎಲ್ಲ ಅಂಗಡಿಗಳನ್ನು ಒಡೆಯ ಬೇಕಾಗುತ್ತದೆ. ವರ್ತಕರ ಜೊತೆಗೆ ಸಾರ್ವಜನಿಕರ ಅನುಕೂಲ ಗಮನದಲ್ಲಿಟ್ಟುಕೊಳ್ಳಬೇಕಿದೆ. ಮಂದಗತಿಯಲ್ಲಿ ಸಾಗುತ್ತಿರುವ ಕಾಮಗಾರಿ ಬಗ್ಗೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿ ತುರ್ತಾಗಿ ಮುಗಿಸುವಂತೆ ಸೂಚಿಸಲಾಗುವುದು ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಟಿಎಚ್ಒ ಬಿಂದು ಮಾಧವ, ವೈದ್ಯ ಆರ್ಯನ್, ಚೇತನ್ ಕುಮಾರ್, ದರ್ಶನ್, ರಮೇಶ್, ನರಸಿಂಹಮೂರ್ತಿ ಹಾಗೂ ಗ್ರಾಮಸ್ಥರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-17-2048898210</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>