<p>ಗುಬ್ಬಿ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಇದೇ 20ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಇಲ್ಲಿನ ತಾಲ್ಲೂಕು ಆಡಳಿತ ಸೌಧದಲ್ಲಿ ಬಿಎಲ್ಒ ಮೇಲ್ವಿಚಾರಕರು ಮತ್ತು ಬಿಎಲ್ಒಗಳಿಗೆ ತರಬೇತಿ ಕಾರ್ಯಾಗಾರವನ್ನು ಮಂಗಳವಾರ ಆಯೋಜಿಸಲಾಯಿತು.</p>.<p>ಚುನಾವಣೆ ಶಿರಸ್ತೇದಾರ್ ಗುರುಪ್ರಸಾದ್ ಮಾತನಾಡಿ, ‘ಮತದಾರರ ಪಟ್ಟಿಯನ್ನು ಸಮರ್ಪಕವಾಗಿ ಪರಿಶೀಲನೆ ನಡೆಸಿ, ಎಲ್ಲ ಅರ್ಹರಿಗೂ ಮತದಾನದ ಹಕ್ಕು ಸಿಗುವಂತೆ ನೋಡಿಕೊಳ್ಳಬೇಕು’ ಎಂದು ಬಿಎಲ್ಒ ಮತ್ತು ಬಿಎಲ್ಒ ಮೇಲ್ವಿಚಾರಕರಿಗೆ ಸಲಹೆ ನೀಡಿದರು.</p>.<p>ಚುನಾವಣೆಗಳು ಸುಸೂತ್ರವಾಗಿ ನಡೆಯಲು ಪಾರದರ್ಶಕ ಮತ್ತು ದೋಷಮುಕ್ತ ಚುನಾವಣಾ ಪಟ್ಟಿ ಅಗತ್ಯ. ಇದರಿಂದ ಪ್ರಜಾಪ್ರಭುತ್ವದ ಆಶಯಗಳನ್ನು ಪಾಲಿಸಲು ಸಾಧ್ಯವಾಗಲಿದೆ ಎಂದರು.</p>.<p>ಪ್ರತಿ ಬಾರಿಯೂ ಚುನಾವಣಾ ಪಟ್ಟಿ ಸಿದ್ಧಪಡಿಸಿದಾಗ ಅನೇಕ ಲೋಪ, ದೋಷಗಳು ಕಂಡು ಬರುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಯಾವುದೇ ಅರ್ಹ ಮತದಾರ ಮತದಾನದಿಂದ ವಂಚಿತರಾಗದಂತೆ ಅಧಿಕಾರಿಗಳು ನಿಗಾವಹಿಸಿ ಪಟ್ಟಿ ತಯಾರಿಸಬೇಕು ಎಂದು ತಿಳಿಸಿದರು.</p>.<p>ಸಂಪನ್ಮೂಲ ವ್ಯಕ್ತಿ ಯತೀಶ್ ಮಾತನಾಡಿ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) 2026ರ ಅಭಿಯಾನದ ಯಶಸ್ವಿಗಾಗಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು. ಈ ಪರಿಷ್ಕರಣೆ ಪ್ರಕ್ರಿಯೆಯು ಜೂನ್ 20ರಿಂದ ಅಕ್ಟೋಬರ್ 7ರವರೆಗೆ ವಿವಿಧ ಹಂತಗಳಲ್ಲಿ ನಡೆಯಲಿದೆ. ಮತಗಟ್ಟೆ ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಬೇಕು ಎಂದು ತಿಳಿಸಿದರು.</p>.<p>ತರಬೇತಿದಾರ ಲೋಕೇಶ್ ಮಾತನಾಡಿ, ಬೀಗ ಹಾಕಿದ ಮನೆಗಳು ಅಥವಾ ಮೊದಲ ಭೇಟಿಯಲ್ಲಿ ಸಿಗದ ಮತದಾರರನ್ನು ತಲುಪಲು ಬಿಎಲ್ಒಗಳು ಕನಿಷ್ಠ 3 ಬಾರಿ ಭೇಟಿ ನೀಡಬೇಕು ಎಂದು ಹೇಳಿದರು.</p>.<p>ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿ ವಾಸುದೇವ, ಪ್ರಶಾಂತ್,ಬಿಎಲ್ಒ ಮೇಲ್ವಿಚಾರಕರು ಹಾಗೂ ಬಿಎಲ್ಒಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-17-1501864654</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಬ್ಬಿ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಇದೇ 20ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಇಲ್ಲಿನ ತಾಲ್ಲೂಕು ಆಡಳಿತ ಸೌಧದಲ್ಲಿ ಬಿಎಲ್ಒ ಮೇಲ್ವಿಚಾರಕರು ಮತ್ತು ಬಿಎಲ್ಒಗಳಿಗೆ ತರಬೇತಿ ಕಾರ್ಯಾಗಾರವನ್ನು ಮಂಗಳವಾರ ಆಯೋಜಿಸಲಾಯಿತು.</p>.<p>ಚುನಾವಣೆ ಶಿರಸ್ತೇದಾರ್ ಗುರುಪ್ರಸಾದ್ ಮಾತನಾಡಿ, ‘ಮತದಾರರ ಪಟ್ಟಿಯನ್ನು ಸಮರ್ಪಕವಾಗಿ ಪರಿಶೀಲನೆ ನಡೆಸಿ, ಎಲ್ಲ ಅರ್ಹರಿಗೂ ಮತದಾನದ ಹಕ್ಕು ಸಿಗುವಂತೆ ನೋಡಿಕೊಳ್ಳಬೇಕು’ ಎಂದು ಬಿಎಲ್ಒ ಮತ್ತು ಬಿಎಲ್ಒ ಮೇಲ್ವಿಚಾರಕರಿಗೆ ಸಲಹೆ ನೀಡಿದರು.</p>.<p>ಚುನಾವಣೆಗಳು ಸುಸೂತ್ರವಾಗಿ ನಡೆಯಲು ಪಾರದರ್ಶಕ ಮತ್ತು ದೋಷಮುಕ್ತ ಚುನಾವಣಾ ಪಟ್ಟಿ ಅಗತ್ಯ. ಇದರಿಂದ ಪ್ರಜಾಪ್ರಭುತ್ವದ ಆಶಯಗಳನ್ನು ಪಾಲಿಸಲು ಸಾಧ್ಯವಾಗಲಿದೆ ಎಂದರು.</p>.<p>ಪ್ರತಿ ಬಾರಿಯೂ ಚುನಾವಣಾ ಪಟ್ಟಿ ಸಿದ್ಧಪಡಿಸಿದಾಗ ಅನೇಕ ಲೋಪ, ದೋಷಗಳು ಕಂಡು ಬರುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಯಾವುದೇ ಅರ್ಹ ಮತದಾರ ಮತದಾನದಿಂದ ವಂಚಿತರಾಗದಂತೆ ಅಧಿಕಾರಿಗಳು ನಿಗಾವಹಿಸಿ ಪಟ್ಟಿ ತಯಾರಿಸಬೇಕು ಎಂದು ತಿಳಿಸಿದರು.</p>.<p>ಸಂಪನ್ಮೂಲ ವ್ಯಕ್ತಿ ಯತೀಶ್ ಮಾತನಾಡಿ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) 2026ರ ಅಭಿಯಾನದ ಯಶಸ್ವಿಗಾಗಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು. ಈ ಪರಿಷ್ಕರಣೆ ಪ್ರಕ್ರಿಯೆಯು ಜೂನ್ 20ರಿಂದ ಅಕ್ಟೋಬರ್ 7ರವರೆಗೆ ವಿವಿಧ ಹಂತಗಳಲ್ಲಿ ನಡೆಯಲಿದೆ. ಮತಗಟ್ಟೆ ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಬೇಕು ಎಂದು ತಿಳಿಸಿದರು.</p>.<p>ತರಬೇತಿದಾರ ಲೋಕೇಶ್ ಮಾತನಾಡಿ, ಬೀಗ ಹಾಕಿದ ಮನೆಗಳು ಅಥವಾ ಮೊದಲ ಭೇಟಿಯಲ್ಲಿ ಸಿಗದ ಮತದಾರರನ್ನು ತಲುಪಲು ಬಿಎಲ್ಒಗಳು ಕನಿಷ್ಠ 3 ಬಾರಿ ಭೇಟಿ ನೀಡಬೇಕು ಎಂದು ಹೇಳಿದರು.</p>.<p>ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿ ವಾಸುದೇವ, ಪ್ರಶಾಂತ್,ಬಿಎಲ್ಒ ಮೇಲ್ವಿಚಾರಕರು ಹಾಗೂ ಬಿಎಲ್ಒಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-17-1501864654</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>