ಪ್ರಮುಖ ರಸ್ತೆಗಳ ಚರಂಡಿಗಳು ಕಟ್ಟಿಕೊಂಡಿವೆ. ಸ್ವಲ್ಪ ಮಳೆ ಬಂದರೆ ನೀರು ರಸ್ತೆಯಲ್ಲಿಯೇ ಹರಿಯುತ್ತದೆ. ಕೆಲವೆಡೆ ಚರಂಡಿ ಮಣ್ಣನ್ನು
ರಸ್ತೆಗೆ ಸುರಿಯಲಾಗಿದೆ. ಇದರಿಂದಾಗಿ ಜನಸಾಮಾನ್ಯರಿಗೆ ತೊಂದರೆ ಯಾಗುತ್ತಿದೆ. ಪಟ್ಟಣದ ವಿವೇಕಾನಂದ ರಸ್ತೆ ತಿರುವು, ಕೋರ್ಟ್ ಮುಂಭಾಗ, ಎಂ.ಜಿ ರಸ್ತೆ, ತೋಟದ ಸಾಲಿನಲ್ಲಿ ಮಳೆ ನೀರು ರಸ್ತೆಯಲ್ಲಿಯೇ ಹರಿಯುತ್ತದೆ ಎನ್ನುತ್ತಾರೆ ಸಾರ್ವಜನಿಕರು.