ಅತಿಥಿ ಉಪನ್ಯಾಸಕರು ತಮ್ಮ ಕೆಲಸವನ್ನು ಕಾಯಂಗೊಳಿಸುವಂತೆ ದೀರ್ಘಕಾಲದ ಬೇಡಿಕೆಯೊಂದಿಗೆ ಹೋರಾಟಕ್ಕೆ ಇಳಿದಿದ್ದಾರೆ. ಅತಿಥಿ ಉಪನ್ಯಾಸಕರು ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಕಳೆದ ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರೂ ಕಾಯಂ ಮಾಡಿಲ್ಲ. ನಿಗದಿತ ವೇತನ ಸಹ ಜಾರಿಯಾಗಿಲ್ಲ. ಅವರಿಗೆ ಸೇವಾ ಭದ್ರತೆ ಕಲ್ಪಿಸಬೇಕು’ ಎಂದು ಸಂಘಟನೆ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಒತ್ತಾಯಿಸಿದ್ದಾರೆ.