ಕೊರೊನಾ ಕಾರಣ ಅತಿಥಿ ಉಪನ್ಯಾಸಕರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ತುರ್ತಾಗಿ ವೇತನ ನೀಡಬೇಕು. ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರು ಸೆಪ್ಟೆಂಬರ್ ವೇತನ ನೀಡಲು ಹೇಳಿದ್ದಾರೆ. ಆದರೇ ವಿ.ವಿ ವೇತನ ನೀಡಿಲ್ಲ. ಇದರಿಂದ ಅತಿಥಿ ಉಪನ್ಯಾಸಕರ ಉತ್ಸಾಹ ಕುಂದುತ್ತದೆ. ಜತೆಗೆ ಶೈಕ್ಷಣಿಕ ಹಿನ್ನಡೆ ಆಗುತ್ತದೆ. ಸೆಪ್ಟೆಂಬರ್ ತಿಂಗಳ ವೇತನವನ್ನು ನೀಡುವ ಮೂಲಕ ಅತಿಥಿ ಉಪನ್ಯಾಸಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಕೋರಿದರು.