<p><strong>ತುಮಕೂರು</strong>: ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆ ಮಾಡಿರುವುದನ್ನು ಖಂಡಿಸಿ ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ಧಿ ಸಂಘದಿಂದ ಜ. 6ರಂದು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.</p>.<p>‘ಸರ್ಕಾರ ಕೋರ್ಟ್ಗೆ ನೀಡಿದ ಮೌಖಿಕ ಭರವಸೆ ಹುಸಿಗೊಳಿಸಿದೆ. 20 ವರ್ಷಗಳ ಸೇವೆ ಪರಿಗಣಿಸದೆ, ಅನರ್ಹ ಎಂಬ ಹಣೆಪಟ್ಟಿ ಕಟ್ಟಿ ಸುಮಾರು 6 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ. ಎರಡು ದಶಕಗಳಿಂದ ಸೇವೆ ಪಡೆದು, ಈಗ ಕೆಲಸದಿಂದ ತೆಗೆಯಲಾಗಿದೆ’ ಎಂದು ಸಂಘದ ಅಧ್ಯಕ್ಷ ಪಿ.ಸಿ.ಲೋಕೇಶ್ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಅತಿಥಿ ಉಪನ್ಯಾಸಕ ಮಂಜುನಾಥ್ ಜೋಗಿ, ‘ಅತಿಥಿ ಉಪನ್ಯಾಸಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುತ್ತಿಲ್ಲ. ಸತತ 10 ವರ್ಷ ಕಾರ್ಯ ನಿರ್ವಹಿಸಿದ ಉಪನ್ಯಾಸಕರನ್ನು ಕಾಯಂ ಮಾಡಬೇಕು ಎಂಬ ಆದೇಶ ಪಾಲಿಸುತ್ತಿಲ್ಲ’ ಎಂದು ದೂರಿದರು.</p>.<p>ಸಂಘದ ಪದಾಧಿಕಾರಿಗಳಾದ ಎಸ್.ಮನೋಹರ್, ರಂಗಸ್ವಾಮಿ ಗೋಷ್ಠಿಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆ ಮಾಡಿರುವುದನ್ನು ಖಂಡಿಸಿ ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ಧಿ ಸಂಘದಿಂದ ಜ. 6ರಂದು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.</p>.<p>‘ಸರ್ಕಾರ ಕೋರ್ಟ್ಗೆ ನೀಡಿದ ಮೌಖಿಕ ಭರವಸೆ ಹುಸಿಗೊಳಿಸಿದೆ. 20 ವರ್ಷಗಳ ಸೇವೆ ಪರಿಗಣಿಸದೆ, ಅನರ್ಹ ಎಂಬ ಹಣೆಪಟ್ಟಿ ಕಟ್ಟಿ ಸುಮಾರು 6 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ. ಎರಡು ದಶಕಗಳಿಂದ ಸೇವೆ ಪಡೆದು, ಈಗ ಕೆಲಸದಿಂದ ತೆಗೆಯಲಾಗಿದೆ’ ಎಂದು ಸಂಘದ ಅಧ್ಯಕ್ಷ ಪಿ.ಸಿ.ಲೋಕೇಶ್ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಅತಿಥಿ ಉಪನ್ಯಾಸಕ ಮಂಜುನಾಥ್ ಜೋಗಿ, ‘ಅತಿಥಿ ಉಪನ್ಯಾಸಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುತ್ತಿಲ್ಲ. ಸತತ 10 ವರ್ಷ ಕಾರ್ಯ ನಿರ್ವಹಿಸಿದ ಉಪನ್ಯಾಸಕರನ್ನು ಕಾಯಂ ಮಾಡಬೇಕು ಎಂಬ ಆದೇಶ ಪಾಲಿಸುತ್ತಿಲ್ಲ’ ಎಂದು ದೂರಿದರು.</p>.<p>ಸಂಘದ ಪದಾಧಿಕಾರಿಗಳಾದ ಎಸ್.ಮನೋಹರ್, ರಂಗಸ್ವಾಮಿ ಗೋಷ್ಠಿಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>