<p><strong>ತುಮಕೂರು:</strong> ಅಕಾಲಿಕ ಮಳೆ ಕಾರಣ ಜ. 9 ಮತ್ತು 10 ನಡೆಯಬೇಕಿದ್ದ ಗೂಳೂರು ಗಣೇಶ ಜಾತ್ರೆಯನ್ನು ಮುಂದೂಡಲಾಗಿದೆ.</p>.<p>ಗೂಳೂರಿನ ಗಣೇಶ ದೇವಾಲಯದಲ್ಲಿ ಶುಕ್ರವಾರ ಗ್ರಾಮದ 18 ಕೋಮಿನ ಜನರು ಸಭೆಸೇರಿ ಮಳೆ ಆಗುತ್ತಿರುವುದರಿಂದ ಜಾತ್ರೆಗೆ ಅಡಚಣೆ ಆಗುತ್ತದೆ ಎಂದು ಜ. 23 ಮತ್ತು 24ಕ್ಕೆ ಮುಂದೂಡಲು ತೀರ್ಮಾನಿಸಿದರು.</p>.<p>ಪ್ರಸಕ್ತ ವರ್ಷ ಎರಡನೇ ಬಾರಿ ಜಾತ್ರೆಯನ್ನು ಮುಂದೂಡಲಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಕಾರಣ ಡಿಸೆಂಬರ್ನಲ್ಲಿ ನಿಗದಿಯಾಗಿದ್ದ ಜಾತ್ರೆಯನ್ನು ಜ. 9 ಮತ್ತು 10ಕ್ಕೆ ಮುಂದೂಡಲಾಗಿತ್ತು ಎಂದು ಗೂಳೂರು ಗಣೇಶ ಭಕ್ತಮಂಡಳಿ ಅಧ್ಯಕ್ಷರೂ ಆದ ಜಿ.ಪಂ ಸದಸ್ಯ ಶಿವಕುಮಾರ್ ಸಭೆಯಲ್ಲಿ ತಿಳಿಸಿದರು.</p>.<p>ಅಕಾಲಿಕ ಮಳೆಯಿಂದಾಗಿ ಗಣೇಶೋತ್ಸವದ ರಥ ಗ್ರಾಮದಿಂದ ಕೆರೆ ಅಂಗಳಕ್ಕೆ ಹೋಗಲು ಸಾಧ್ಯವಿಲ್ಲ. ಹೊಲಗಳಲ್ಲಿ ರಥ ಸಾಗುವುದಿಲ್ಲ. ಹಾಗಾಗಿ ಜಾತ್ರೆಯನ್ನು ಮುಂದೂಡಲಾಗಿದೆ ಎಂದು ಹೇಳಿದರು.</p>.<p>ಜ. 23ರ ರಾತ್ರಿ 10ಕ್ಕೆ ಗಣೇಶ ಮೂರ್ತಿಯನ್ನು ದೇವಾಲಯದಿಂದ ಹೊರಗೆ ತರಲಾಗುವುದು. ಮಧ್ಯರಾತ್ರಿ<br />ವರೆಗೂ ಮೆರವಣಿಗೆ ನಡೆಸಲಾಗುವುದು. 24ರ ಮಧ್ಯಾಹ್ನ 12ಕ್ಕೆ ಮತ್ತೆ ಮೆರವಣಿಗೆ ಆರಂಭವಾಗಲಿದೆ. ಸಂಜೆ ಕೆರೆಯಲ್ಲಿ ಆಕರ್ಷಕ ಮದ್ದುಗುಂಡಿನ ಪ್ರದರ್ಶನದೊಂದಿಗೆ ವಿಸರ್ಜನಾ ಮಹೋತ್ಸವ ನಡೆಯಲಿದೆ ಎಂದರು.</p>.<p>ಸಭೆಯಲ್ಲಿ ಗ್ರಾ.ಪಂ ಸದಸ್ಯ ಕೃಷ್ಣೇಗೌಡ, ಗೂಳೂರು ಸಿದ್ದರಾಜು, ಜಿ.ಎಲ್.ಕುಮಾರ್, ನವೀನ್, ಚಿಕ್ಕ<br />ರಂಗಪ್ಪ, ನಂಜುಂಡಶಾಸ್ತ್ರಿ, ಚಂದ್ರಶೇಖರ್, ಬಿ.ಕೆ.ಕೃಷ್ಣಮೂರ್ತಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಅಕಾಲಿಕ ಮಳೆ ಕಾರಣ ಜ. 9 ಮತ್ತು 10 ನಡೆಯಬೇಕಿದ್ದ ಗೂಳೂರು ಗಣೇಶ ಜಾತ್ರೆಯನ್ನು ಮುಂದೂಡಲಾಗಿದೆ.</p>.<p>ಗೂಳೂರಿನ ಗಣೇಶ ದೇವಾಲಯದಲ್ಲಿ ಶುಕ್ರವಾರ ಗ್ರಾಮದ 18 ಕೋಮಿನ ಜನರು ಸಭೆಸೇರಿ ಮಳೆ ಆಗುತ್ತಿರುವುದರಿಂದ ಜಾತ್ರೆಗೆ ಅಡಚಣೆ ಆಗುತ್ತದೆ ಎಂದು ಜ. 23 ಮತ್ತು 24ಕ್ಕೆ ಮುಂದೂಡಲು ತೀರ್ಮಾನಿಸಿದರು.</p>.<p>ಪ್ರಸಕ್ತ ವರ್ಷ ಎರಡನೇ ಬಾರಿ ಜಾತ್ರೆಯನ್ನು ಮುಂದೂಡಲಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಕಾರಣ ಡಿಸೆಂಬರ್ನಲ್ಲಿ ನಿಗದಿಯಾಗಿದ್ದ ಜಾತ್ರೆಯನ್ನು ಜ. 9 ಮತ್ತು 10ಕ್ಕೆ ಮುಂದೂಡಲಾಗಿತ್ತು ಎಂದು ಗೂಳೂರು ಗಣೇಶ ಭಕ್ತಮಂಡಳಿ ಅಧ್ಯಕ್ಷರೂ ಆದ ಜಿ.ಪಂ ಸದಸ್ಯ ಶಿವಕುಮಾರ್ ಸಭೆಯಲ್ಲಿ ತಿಳಿಸಿದರು.</p>.<p>ಅಕಾಲಿಕ ಮಳೆಯಿಂದಾಗಿ ಗಣೇಶೋತ್ಸವದ ರಥ ಗ್ರಾಮದಿಂದ ಕೆರೆ ಅಂಗಳಕ್ಕೆ ಹೋಗಲು ಸಾಧ್ಯವಿಲ್ಲ. ಹೊಲಗಳಲ್ಲಿ ರಥ ಸಾಗುವುದಿಲ್ಲ. ಹಾಗಾಗಿ ಜಾತ್ರೆಯನ್ನು ಮುಂದೂಡಲಾಗಿದೆ ಎಂದು ಹೇಳಿದರು.</p>.<p>ಜ. 23ರ ರಾತ್ರಿ 10ಕ್ಕೆ ಗಣೇಶ ಮೂರ್ತಿಯನ್ನು ದೇವಾಲಯದಿಂದ ಹೊರಗೆ ತರಲಾಗುವುದು. ಮಧ್ಯರಾತ್ರಿ<br />ವರೆಗೂ ಮೆರವಣಿಗೆ ನಡೆಸಲಾಗುವುದು. 24ರ ಮಧ್ಯಾಹ್ನ 12ಕ್ಕೆ ಮತ್ತೆ ಮೆರವಣಿಗೆ ಆರಂಭವಾಗಲಿದೆ. ಸಂಜೆ ಕೆರೆಯಲ್ಲಿ ಆಕರ್ಷಕ ಮದ್ದುಗುಂಡಿನ ಪ್ರದರ್ಶನದೊಂದಿಗೆ ವಿಸರ್ಜನಾ ಮಹೋತ್ಸವ ನಡೆಯಲಿದೆ ಎಂದರು.</p>.<p>ಸಭೆಯಲ್ಲಿ ಗ್ರಾ.ಪಂ ಸದಸ್ಯ ಕೃಷ್ಣೇಗೌಡ, ಗೂಳೂರು ಸಿದ್ದರಾಜು, ಜಿ.ಎಲ್.ಕುಮಾರ್, ನವೀನ್, ಚಿಕ್ಕ<br />ರಂಗಪ್ಪ, ನಂಜುಂಡಶಾಸ್ತ್ರಿ, ಚಂದ್ರಶೇಖರ್, ಬಿ.ಕೆ.ಕೃಷ್ಣಮೂರ್ತಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>