ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುಪ್ರಸಾದ್ ಕಂಟಲಗೆರೆಗೆ ಅನನ್ಯ ಸಾಹಿತ್ಯ ಪ್ರಶಸ್ತಿ

Last Updated 18 ಡಿಸೆಂಬರ್ 2018, 10:41 IST
ಅಕ್ಷರ ಗಾತ್ರ

ತುಮಕೂರು: ಅನನ್ಯ ಪ್ರಕಾಶನವು ನೀಡುವ 2017ನೇ ಸಾಲಿನ ದಿ.ಕೆ.ಸಾಂಬಶಿವಪ್ಪ ಸ್ಮಾರಕ ಸಾಹಿತ್ಯ ಪ್ರಶಸ್ತಿಗೆ ಯುವಲೇಖಕ ಚಿಕ್ಕನಾಯಕನಹಳ್ಳಿಯ ಗುರುಪ್ರಸಾದ್ ಕಂಟಲಗೆರೆ ಅವರ ‘ಗೋವಿನ ಹಾಡು’ ಕಥಾ ಸಂಕಲನ ಆಯ್ಕೆಯಾಗಿದೆ.

ಪ್ರಶಸ್ತಿಯು ₹ 5 ಸಾವಿರ ನಗದು, ಪುರಸ್ಕಾರ, ಸ್ಮರಣಿಕೆ ಒಳಗೊಂಡಿರುತ್ತದೆ. ರಾಜ್ಯದ ವಿವಿಧ ಲೇಖಕರ ಕೃತಿಗಳು ಪ್ರಶಸ್ತಿಗೆ ಬಂದಿದ್ದವು. ಚ.ಹ.ರಘುನಾಥ್ ಹಾಗೂ ನಿರ್ಮಲ ಎಲಿಗಾರ್ ಅವರ ಆಯ್ಕೆ ಸಮಿತಿ ‘ಗೋವಿನ ಹಾಡು’ ಕಥಾ ಸಂಕಲನವನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.

‘ಡಿ.25 ರಂದು ತುಮಕೂರಿನ ಸಿದ್ಧಗಂಗಾ ಮಹಿಳಾ ಕಾಲೇಜಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಅನನ್ಯ ಪ್ರಕಾಶನದ ಅಧ್ಯಕ್ಷೆ ಎಂ.ಸಿ.ಲಲಿತಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT