ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

DCC ಬ್ಯಾಂಕ್ ಅನ್ನು ಅಪ್ಪನ ಮನೆ ಆಸ್ತಿಯನ್ನಾಗಿ ಮಾಡಿಕೊಂಡ ರಾಜಣ್ಣ: HDK ವಾಗ್ದಾಳಿ

Published : 19 ಏಪ್ರಿಲ್ 2024, 15:03 IST
Last Updated : 19 ಏಪ್ರಿಲ್ 2024, 15:03 IST
ಫಾಲೋ ಮಾಡಿ
Comments
ಪರಮೇಶ್ವರ ಅವರನ್ನು ಸೋಲಿಸಿದ್ದ ಸಿದ್ದರಾಮಯ್ಯ
‘2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಬರದಿದ್ದಾಗ ಕಾಂಗ್ರೆಸ್‌ನವರು ಮೈತ್ರಿ ಸರ್ಕಾರ ರಚಿಸಲು ದೇವೇಗೌಡರ ಮನೆ ಬಾಗಿಲಿಗೆ ಬಂದಿದ್ದರು. ಆಗ ದೇವೇಗೌಡರು ನನ್ನ ಮಗನಿಗೆ ಸಿಎಂ ಪಟ್ಟ ಬೇಡ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ನೀಡಿ ಎಂದು ಹೇಳಿದ್ದರು. ಇದು ದೇವೇಗೌಡರಿಗೆ ಇದ್ದ ದಲಿತಪರ ಕಾಳಜಿ. ಆದರೆ ಸಿದ್ದರಾಮಯ್ಯ 2013ರ ಚುನಾವಣೆಯಲ್ಲಿ ಸಿಎಂ ಸ್ಥಾನಕ್ಕೆ ಅಡ್ಡಿಯಾಗಬಹುದು ಎಂದು ಕೊರಟಗೆರೆಯಲ್ಲಿ ಜಿ.ಪರಮೇಶ್ವರ ಅವರನ್ನು ಸೋಲಿಸಿದರು’ ಎಂದು ಟೀಕಿಸಿದರು.
ಗೆದ್ದರೆ ಕೃಷಿ ಸಚಿವ: ಎಚ್‌ಡಿಕೆ ಸುಳಿವು
ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಇಚ್ಛೆ ಇರಲಿಲ್ಲ. ಕಾರ್ಯಕರ್ತರು ಒತ್ತಡ ಹಾಕಿ ಮಂಡ್ಯ ಕ್ಷೇತ್ರದಿಂದ ನಿಲ್ಲಿಸಿದ್ದಾರೆ. ಗೆದ್ದರೆ ಕೃಷಿ ಸಚಿವನಾಗಿ ಗ್ರಾಮೀಣ ಭಾಗದಲ್ಲಿ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಲಾಗುವುದು. ಇನ್ನೊಂದು ವರ್ಷದಲ್ಲಿ ಕುಂಚಿಟಿಗ ಮತ್ತು ಕಾಡುಗೊಲ್ಲರಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT