ಪರಮೇಶ್ವರ ಅವರನ್ನು ಸೋಲಿಸಿದ್ದ ಸಿದ್ದರಾಮಯ್ಯ
‘2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬಹುಮತ ಬರದಿದ್ದಾಗ ಕಾಂಗ್ರೆಸ್ನವರು ಮೈತ್ರಿ ಸರ್ಕಾರ ರಚಿಸಲು ದೇವೇಗೌಡರ ಮನೆ ಬಾಗಿಲಿಗೆ ಬಂದಿದ್ದರು. ಆಗ ದೇವೇಗೌಡರು ನನ್ನ ಮಗನಿಗೆ ಸಿಎಂ ಪಟ್ಟ ಬೇಡ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ನೀಡಿ ಎಂದು ಹೇಳಿದ್ದರು. ಇದು ದೇವೇಗೌಡರಿಗೆ ಇದ್ದ ದಲಿತಪರ ಕಾಳಜಿ. ಆದರೆ ಸಿದ್ದರಾಮಯ್ಯ 2013ರ ಚುನಾವಣೆಯಲ್ಲಿ ಸಿಎಂ ಸ್ಥಾನಕ್ಕೆ ಅಡ್ಡಿಯಾಗಬಹುದು ಎಂದು ಕೊರಟಗೆರೆಯಲ್ಲಿ ಜಿ.ಪರಮೇಶ್ವರ ಅವರನ್ನು ಸೋಲಿಸಿದರು’ ಎಂದು ಟೀಕಿಸಿದರು.