<p><strong>ಹಾಗಲವಾಡಿ (ಗುಬ್ಬಿ):</strong> ಜಾತ್ರೆಯಾದರೆ ಚರ್ಮವಾದ್ಯ, ಅರೆವಾದ್ಯ, ವೀರಗಾಸೆ. ಮದುವೆ, ಗೃಹಪ್ರವೇಶಗಳಾದರೆ ನಾದಸ್ವರ. ಮೆರವಣಿಗೆಗಳಲ್ಲಾದರೆ ಕಹಳೆ, ಚಿಟ್ಟಿಮೇಳ, ನಾಸಿಕ್ ಡೋಲು...</p>.<p>ಹೀಗೆ ಎಲ್ಲ ಬಗೆಯ ಸಮಾರಂಭಗಳಿಗೂ ಒಗ್ಗುವ ಜನಪದ ಕಲೆಗಳನ್ನು ಕರಗತ ಮಾಡಿಕೊಂಡು ಕಲಾ ಸೇವೆಯಲ್ಲಿ ತೊಡಗಿಕೊಂಡವರು ನರಸಿಂಹಮೂರ್ತಿ.</p>.<p>ಗುಬ್ಬಿ ತಾಲ್ಲೂಕು ಹಾಗಲವಾಡಿ ಹೋಬಳಿಯ ಅಳಿಲುಘಟ್ಟ ಗ್ರಾಮದ ನರಸಿಂಹಮೂರ್ತಿ ಅವರಿಗೆ ಪರಂಪರಾಗತವಾಗಿಯೇ ಕಲೆ ಒಲಿದು ಬಂದಿದೆ. ಬಾಲ್ಯದಲ್ಲಿಯೇ ತಾತ, ಮುತ್ತಾತರಿಂದ ಈ ಕಲೆಗಳನ್ನು ಕಲಿತುಕೊಂಡಿದ್ದಾರೆ. 6ನೇ ತರಗತಿಯಲ್ಲಿ ಓದುವಾಗಲೇ ತಂದೆ ಜೊತೆಗೆ ಅರೆವಾದ್ಯ, ಕಹಳೆ, ನಾದಸ್ವರ ಕಲಿಯಲು ಆರಂಭಿಸಿದ್ದರು.</p>.<p>ಮೊದಮೊದಲು ತಂದೆ ಜೊತೆ ಮದುವೆ ಸಮಾರಂಭಗಳಲ್ಲಿ ಕೇವಲ ಇಪ್ಪತ್ತು, ಮೂವತ್ತು ರೂಪಾಯಿಗೆ ನಾದಸ್ವರ ನುಡಿಸಿದ್ದನ್ನು ನೆನಪಿಸಿಕೊಳ್ಳುವ ನರಸಿಂಹಮೂರ್ತಿ, ಈಗಲೂ ಅನೇಕ ಗ್ರಾಮದೇವರ ಜಾತ್ರೆಗಳಲ್ಲಿ ಎರಡರಿಂದ ಮೂರು ದಿನ ಇಬ್ಬರು ಅರೆವಾದ್ಯ ನುಡಿಸಿ ಕೇವಲ ಎರಡು ಕ್ವಿಂಟಲ್ ರಾಗಿಯನ್ನು ಸಂಭಾವನೆಯಾಗಿ ಪಡೆಯುತ್ತಾರೆ.</p>.<p>ಇಪ್ಪತ್ತು ಕಲಾವಿದರನ್ನೊಳಗೊಂಡ ಜನಪದ ಕಲಾ ಸಂಘವೊಂದನ್ನು ಕಟ್ಟಿಕೊಂಡು ಈಗಲೂ ಊರೂರು ಸುತ್ತವ ನರಸಿಂಹಮೂರ್ತಿ ಜಾತ್ರೆ, ಮದುವೆ, ದಸರಾದಂತಹ ಹತ್ತಾರು ಸಮಾರಂಭಗಳಲ್ಲಿ ಕಾರ್ಯಕ್ರಮ ನೀಡುತ್ತಿದ್ದಾರೆ. ಮೈಸೂರು, ಬೆಂಗಳೂರು, ವಿಜಯಪುರ, ಹಿಂದೂಪುರ ಸೇರಿದಂತೆ ದೂರದೂರುಗಳಲ್ಲಿ ಕಲೆಯನ್ನು ಪ್ರದರ್ಶಿಸಿದ್ದಾರೆ.</p>.<p>ಕಲಾಸೇವೆಯಿಂದ ಬಂದ ಸಂಭಾವನೆಯಲ್ಲಿಯೇ ಜೀವನ ನಡೆಸುತ್ತಿರುವ ಇವರು, ಇಬ್ಬರು<br />ಹೆಣ್ಣು ಮಕ್ಕಳಿಗೆ ಮದುವೆ ಮಾಡಿದ್ದಾರೆ. ತನ್ನ ನಂತರ ಮಗ ನಾಗರಾಜ ಅವರನ್ನು ಜನಪದ ಸೇವೆಯಲ್ಲಿಯೇ ಮುಂದುವರೆಸುವುದಾಗಿ ಹೆಮ್ಮೆಯಿಂದ ನುಡಿಯುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಗಲವಾಡಿ (ಗುಬ್ಬಿ):</strong> ಜಾತ್ರೆಯಾದರೆ ಚರ್ಮವಾದ್ಯ, ಅರೆವಾದ್ಯ, ವೀರಗಾಸೆ. ಮದುವೆ, ಗೃಹಪ್ರವೇಶಗಳಾದರೆ ನಾದಸ್ವರ. ಮೆರವಣಿಗೆಗಳಲ್ಲಾದರೆ ಕಹಳೆ, ಚಿಟ್ಟಿಮೇಳ, ನಾಸಿಕ್ ಡೋಲು...</p>.<p>ಹೀಗೆ ಎಲ್ಲ ಬಗೆಯ ಸಮಾರಂಭಗಳಿಗೂ ಒಗ್ಗುವ ಜನಪದ ಕಲೆಗಳನ್ನು ಕರಗತ ಮಾಡಿಕೊಂಡು ಕಲಾ ಸೇವೆಯಲ್ಲಿ ತೊಡಗಿಕೊಂಡವರು ನರಸಿಂಹಮೂರ್ತಿ.</p>.<p>ಗುಬ್ಬಿ ತಾಲ್ಲೂಕು ಹಾಗಲವಾಡಿ ಹೋಬಳಿಯ ಅಳಿಲುಘಟ್ಟ ಗ್ರಾಮದ ನರಸಿಂಹಮೂರ್ತಿ ಅವರಿಗೆ ಪರಂಪರಾಗತವಾಗಿಯೇ ಕಲೆ ಒಲಿದು ಬಂದಿದೆ. ಬಾಲ್ಯದಲ್ಲಿಯೇ ತಾತ, ಮುತ್ತಾತರಿಂದ ಈ ಕಲೆಗಳನ್ನು ಕಲಿತುಕೊಂಡಿದ್ದಾರೆ. 6ನೇ ತರಗತಿಯಲ್ಲಿ ಓದುವಾಗಲೇ ತಂದೆ ಜೊತೆಗೆ ಅರೆವಾದ್ಯ, ಕಹಳೆ, ನಾದಸ್ವರ ಕಲಿಯಲು ಆರಂಭಿಸಿದ್ದರು.</p>.<p>ಮೊದಮೊದಲು ತಂದೆ ಜೊತೆ ಮದುವೆ ಸಮಾರಂಭಗಳಲ್ಲಿ ಕೇವಲ ಇಪ್ಪತ್ತು, ಮೂವತ್ತು ರೂಪಾಯಿಗೆ ನಾದಸ್ವರ ನುಡಿಸಿದ್ದನ್ನು ನೆನಪಿಸಿಕೊಳ್ಳುವ ನರಸಿಂಹಮೂರ್ತಿ, ಈಗಲೂ ಅನೇಕ ಗ್ರಾಮದೇವರ ಜಾತ್ರೆಗಳಲ್ಲಿ ಎರಡರಿಂದ ಮೂರು ದಿನ ಇಬ್ಬರು ಅರೆವಾದ್ಯ ನುಡಿಸಿ ಕೇವಲ ಎರಡು ಕ್ವಿಂಟಲ್ ರಾಗಿಯನ್ನು ಸಂಭಾವನೆಯಾಗಿ ಪಡೆಯುತ್ತಾರೆ.</p>.<p>ಇಪ್ಪತ್ತು ಕಲಾವಿದರನ್ನೊಳಗೊಂಡ ಜನಪದ ಕಲಾ ಸಂಘವೊಂದನ್ನು ಕಟ್ಟಿಕೊಂಡು ಈಗಲೂ ಊರೂರು ಸುತ್ತವ ನರಸಿಂಹಮೂರ್ತಿ ಜಾತ್ರೆ, ಮದುವೆ, ದಸರಾದಂತಹ ಹತ್ತಾರು ಸಮಾರಂಭಗಳಲ್ಲಿ ಕಾರ್ಯಕ್ರಮ ನೀಡುತ್ತಿದ್ದಾರೆ. ಮೈಸೂರು, ಬೆಂಗಳೂರು, ವಿಜಯಪುರ, ಹಿಂದೂಪುರ ಸೇರಿದಂತೆ ದೂರದೂರುಗಳಲ್ಲಿ ಕಲೆಯನ್ನು ಪ್ರದರ್ಶಿಸಿದ್ದಾರೆ.</p>.<p>ಕಲಾಸೇವೆಯಿಂದ ಬಂದ ಸಂಭಾವನೆಯಲ್ಲಿಯೇ ಜೀವನ ನಡೆಸುತ್ತಿರುವ ಇವರು, ಇಬ್ಬರು<br />ಹೆಣ್ಣು ಮಕ್ಕಳಿಗೆ ಮದುವೆ ಮಾಡಿದ್ದಾರೆ. ತನ್ನ ನಂತರ ಮಗ ನಾಗರಾಜ ಅವರನ್ನು ಜನಪದ ಸೇವೆಯಲ್ಲಿಯೇ ಮುಂದುವರೆಸುವುದಾಗಿ ಹೆಮ್ಮೆಯಿಂದ ನುಡಿಯುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>