ಈ ವೇಳೆ ಹಾಜರಿದ್ದ ಸಂಸದ ಜಿ.ಎಸ್.ಬಸವರಾಜ್, ‘ನಗರದಲ್ಲಿ 24*7 ಕುಡಿಯುವ ನೀರು ಸೌಲಭ್ಯಕ್ಕೆ ಹೆಚ್ಚುವರಿ ಸುಧಾರಣೆಗಾಗಿ ಹೇಮಾವತಿ ನೀರನ್ನು ಅಮಾನಿಕೆರೆಗೆ ತುಂಬಿಸಲಾಗುತ್ತಿದೆ. ಸ್ಮಾರ್ಟ್ಸಿಟಿ ಅನುದಾನದ ₹ 32.38 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಯೋಜನೆ ಅನುಷ್ಠಾನ ಜವಾಬ್ದಾರಿಯನ್ನು ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಗೆ ನೀಡಲಾಗಿದೆ’ ಎಂದು ಹೇಳಿದರು.