<p><strong>ತುಮಕೂರು:</strong> ‘ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ ಎಲ್ಲ ಶಾಲೆಗಳ ಆವರಣದಲ್ಲೂ ಶಿಕ್ಷಕರು ಕಡ್ಡಾಯವಾಗಿ ಕೈತೋಟ ಬೆಳೆಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎಂ.ಆರ್.ಕಾಮಾಕ್ಷಿ ಸೂಚಿಸಿದರು.</p>.<p>ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ, ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ತುಮಕೂರು ದಕ್ಷಿಣ ಜಿಲ್ಲಾ ಘಟಕವು ಮಂಗಳವಾರ ಡಯಟ್ನಲ್ಲಿ ಆಯೋಜಿಸಿದ್ಧ ಜಿಲ್ಲಾ ವೃತ್ತಿ ಶಿಕ್ಷಣ ಶಿಕ್ಷಕರ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>‘ಶಾಲೆಗಳಲ್ಲಿ ಶಿಕ್ಷಕರು ಪಠ್ಯೇತರ ಚಟುವಟಿಕೆಗಳನ್ನು ಹೆಚ್ಚು ಹಮ್ಮಿಕೊಳ್ಳಬೇಕು. ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಕೈ ತೋಟ ಬೆಳೆಸುವ ಮೂಲಕ ಗಿಡಗಳ ಸಂರಕ್ಷಣೆ, ಪರಿಸರ ಜಾಗೃತಿ ಮೂಡಿಸಬೇಕು’ ಎಂದರು.</p>.<p>ಡಯಟ್ ಉಪನಿರ್ದೇಶಕಿ ನಾಗಮಣಿ, ‘ಶಿಕ್ಷಕರು ಮಕ್ಕಳ ಜೀವನ ಪರಿವರ್ತಿಸಬೇಕು. ಮಕ್ಕಳಲ್ಲಿ ಚಿಂತನೆ ಮೂಡಿಸುವ ಶಿಕ್ಷಣವನ್ನು ಶಿಕ್ಷಕರು ನೀಡಬೇಕು’ ಎಂದು ತಿಳಿಸಿದರು</p>.<p>ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಎಚ್.ಸಿ.ಸತ್ಯಪ್ರಕಾಶ್, ‘ವೃತ್ತಿ ಶಿಕ್ಷಕರು ಮಕ್ಕಳು ಶಿಕ್ಷಣದ<br />ಜೊತೆಗೆ ತೋಟಗಾರಿಕೆ, ಸಂಗೀತ, ಚಿತ್ರಕಲೆ, ಹೊಲಿಗೆ, ಕೃಷಿ ಸೇರಿದಂತೆ ಮತ್ತಿತರೆ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಪ್ರೇರೇಪಿಸಬೇಕು’ ಎಂದು ತಿಳಿಸಿದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಶಿವಾನಂದ, ‘ವೃತ್ತಿ ಶಿಕ್ಷಕರನ್ನು ಹೆಚ್ಚಾಗಿ ಎಲ್ಲ ವಿದ್ಯಾರ್ಥಿಗಳು ಪ್ರೀತಿಸುತ್ತಾರೆ. ಯಾಕೆಂದರೆ ವಿದ್ಯಾರ್ಥಿಗಳು ಮೆಚ್ಚುವ ಹಲವು ಹವ್ಯಾಸಗಳನ್ನು, ಜೀವನಕೌಶಲಗಳನ್ನು ಕಲಿಸುವವರು ವೃತ್ತಿ ಶಿಕ್ಷಕರು’ ಎಂದರು.</p>.<p>ಸಂಪನ್ಮೂಲ ವ್ಯಕ್ತಿಗಳಾದ ಕುಂ.ಸಿ.ಸದಾಶಿವಯ್ಯ, ನಯಾಜ್ ಅಹಮ್ಮದ್ ಮಾತನಾಡಿದರು. ನಿವೃತ್ತ ಮುಖ್ಯ ಶಿಕ್ಷಕ ಮಂಜುನಾಥ್, ಡಿಡಿಪಿಐ ಕಚೇರಿಯ ವಿಷಯ ಪರಿವೀಕ್ಷಕ ಎಲ್.ವೆಂಕಟೇಶ್, ಸಂಘದ ಮಾಜಿ ಅಧ್ಯಕ್ಷ ಮಂಜುನಾಥ್, ರಾಜ್ಯ ಪ್ರತಿನಿಧಿ ಆರ್.ಬೋರಪ್ಪ, ಜಿ.ಡಿ.ಗಂಗಾಧರ್, ಎಚ್.ಇ.ವಿಜಯ್, ಎಚ್.ಎನ್.ವಿಮಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ‘ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ ಎಲ್ಲ ಶಾಲೆಗಳ ಆವರಣದಲ್ಲೂ ಶಿಕ್ಷಕರು ಕಡ್ಡಾಯವಾಗಿ ಕೈತೋಟ ಬೆಳೆಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎಂ.ಆರ್.ಕಾಮಾಕ್ಷಿ ಸೂಚಿಸಿದರು.</p>.<p>ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ, ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ತುಮಕೂರು ದಕ್ಷಿಣ ಜಿಲ್ಲಾ ಘಟಕವು ಮಂಗಳವಾರ ಡಯಟ್ನಲ್ಲಿ ಆಯೋಜಿಸಿದ್ಧ ಜಿಲ್ಲಾ ವೃತ್ತಿ ಶಿಕ್ಷಣ ಶಿಕ್ಷಕರ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>‘ಶಾಲೆಗಳಲ್ಲಿ ಶಿಕ್ಷಕರು ಪಠ್ಯೇತರ ಚಟುವಟಿಕೆಗಳನ್ನು ಹೆಚ್ಚು ಹಮ್ಮಿಕೊಳ್ಳಬೇಕು. ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಕೈ ತೋಟ ಬೆಳೆಸುವ ಮೂಲಕ ಗಿಡಗಳ ಸಂರಕ್ಷಣೆ, ಪರಿಸರ ಜಾಗೃತಿ ಮೂಡಿಸಬೇಕು’ ಎಂದರು.</p>.<p>ಡಯಟ್ ಉಪನಿರ್ದೇಶಕಿ ನಾಗಮಣಿ, ‘ಶಿಕ್ಷಕರು ಮಕ್ಕಳ ಜೀವನ ಪರಿವರ್ತಿಸಬೇಕು. ಮಕ್ಕಳಲ್ಲಿ ಚಿಂತನೆ ಮೂಡಿಸುವ ಶಿಕ್ಷಣವನ್ನು ಶಿಕ್ಷಕರು ನೀಡಬೇಕು’ ಎಂದು ತಿಳಿಸಿದರು</p>.<p>ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಎಚ್.ಸಿ.ಸತ್ಯಪ್ರಕಾಶ್, ‘ವೃತ್ತಿ ಶಿಕ್ಷಕರು ಮಕ್ಕಳು ಶಿಕ್ಷಣದ<br />ಜೊತೆಗೆ ತೋಟಗಾರಿಕೆ, ಸಂಗೀತ, ಚಿತ್ರಕಲೆ, ಹೊಲಿಗೆ, ಕೃಷಿ ಸೇರಿದಂತೆ ಮತ್ತಿತರೆ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಪ್ರೇರೇಪಿಸಬೇಕು’ ಎಂದು ತಿಳಿಸಿದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಶಿವಾನಂದ, ‘ವೃತ್ತಿ ಶಿಕ್ಷಕರನ್ನು ಹೆಚ್ಚಾಗಿ ಎಲ್ಲ ವಿದ್ಯಾರ್ಥಿಗಳು ಪ್ರೀತಿಸುತ್ತಾರೆ. ಯಾಕೆಂದರೆ ವಿದ್ಯಾರ್ಥಿಗಳು ಮೆಚ್ಚುವ ಹಲವು ಹವ್ಯಾಸಗಳನ್ನು, ಜೀವನಕೌಶಲಗಳನ್ನು ಕಲಿಸುವವರು ವೃತ್ತಿ ಶಿಕ್ಷಕರು’ ಎಂದರು.</p>.<p>ಸಂಪನ್ಮೂಲ ವ್ಯಕ್ತಿಗಳಾದ ಕುಂ.ಸಿ.ಸದಾಶಿವಯ್ಯ, ನಯಾಜ್ ಅಹಮ್ಮದ್ ಮಾತನಾಡಿದರು. ನಿವೃತ್ತ ಮುಖ್ಯ ಶಿಕ್ಷಕ ಮಂಜುನಾಥ್, ಡಿಡಿಪಿಐ ಕಚೇರಿಯ ವಿಷಯ ಪರಿವೀಕ್ಷಕ ಎಲ್.ವೆಂಕಟೇಶ್, ಸಂಘದ ಮಾಜಿ ಅಧ್ಯಕ್ಷ ಮಂಜುನಾಥ್, ರಾಜ್ಯ ಪ್ರತಿನಿಧಿ ಆರ್.ಬೋರಪ್ಪ, ಜಿ.ಡಿ.ಗಂಗಾಧರ್, ಎಚ್.ಇ.ವಿಜಯ್, ಎಚ್.ಎನ್.ವಿಮಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>