<p><strong>ತುಮಕೂರು:</strong> ಹವ್ಯಕ ಬ್ರಾಹ್ಮಣ ಸಮುದಾಯದ ಕಲೆ, ಸಂಸ್ಕೃತಿ, ಧಾರ್ಮಿಕ ಆಚರಣೆಗಳನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು ಎಂದು ಜಿಲ್ಲಾ ಹವ್ಯಕ ಸಮುದಾಯದ ಅಧ್ಯಕ್ಷೆ ಮುಕ್ತಾ ಹೆಗಡೆ ಸಲಹೆ ಮಾಡಿದರು.</p>.<p>ನಗರದ ಶಂಕರಮಠದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಹವ್ಯಕ ಸಮುದಾಯದ ರಜತ ಮಹೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಸಮುದಾಯದವರು ತಮ್ಮ ಸಾಮರ್ಥ್ಯ, ಪರಿಶ್ರಮ, ಪ್ರತಿಭೆಯಿಂದ ವಿವಿಧ ಕ್ಷೇತ್ರಗಳಲ್ಲಿ ಛಾಪು ಮೂಡಿಸಿದ್ದಾರೆ. ಯಕ್ಷಗಾನ, ಕಲೆ, ಸಾಹಿತ್ಯ, ತಾಳಮದ್ದಳೆ, ನೃತ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಪರಿಣತಿ ಸಾಧಿಸಿದ್ದಾರೆ. ಇಂತಹ ಶ್ರೀಮಂತ ಹವ್ಯಕ ಸಮುದಾಯದ ಆಚಾರ, ವಿಚಾರಗಳನ್ನು ಉಳಿಸಿ, ಬೆಳೆಸಬೇಕು ಎಂದು ಹೇಳಿದರು.</p>.<p>ಜಿಲ್ಲಾ ಬ್ರಾಹ್ಮಣ ಸಭಾ ಅಧ್ಯಕ್ಷ ಎಚ್.ಎನ್.ಚಂದ್ರಶೇಖರ್, ‘ಸಾಮಾಜಿಕ, ಸಾಂಸ್ಕೃತಿಕ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಹವ್ಯಕ ಸಮುದಾಯ ಶ್ರೀಮಂತ ಪರಂಪರೆ ಹೊಂದಿದೆ. ಇದೇ ರೀತಿ ಬ್ರಾಹ್ಮಣ ಸಮುದಾಯಕ್ಕೆ ಸಂಘಟನೆ ಅನಿವಾರ್ಯವಾಗಿದ್ದು ಎಲ್ಲ ಉಪಪಂಗಡಗಳು ಒಗ್ಗೂಡಬೇಕು’ ಎಂದು ತಿಳಿಸಿದರು.</p>.<p>ಕಾರ್ಯದರ್ಶಿ ಪ್ರಶಾಂತ್ ಭಟ್ ಇತರರು ಭಾಗವಹಿಸಿದ್ದರು. ತಜ್ಞ ವೈದ್ಯರಾದ ಡಾ.ಲಲಿತಾ ಅವಧಾನಿ ಅವರನ್ನು ಸನ್ಮಾನಿಸಲಾಯಿತು. ಹವ್ಯಕ ಸಮುದಾಯ 25 ವರ್ಷ ಪೂರೈಸಿದ ನೆನಪಿಗೆ ‘ರಜತ ರಥ’ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಹವ್ಯಕ ಬ್ರಾಹ್ಮಣ ಸಮುದಾಯದ ಕಲೆ, ಸಂಸ್ಕೃತಿ, ಧಾರ್ಮಿಕ ಆಚರಣೆಗಳನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು ಎಂದು ಜಿಲ್ಲಾ ಹವ್ಯಕ ಸಮುದಾಯದ ಅಧ್ಯಕ್ಷೆ ಮುಕ್ತಾ ಹೆಗಡೆ ಸಲಹೆ ಮಾಡಿದರು.</p>.<p>ನಗರದ ಶಂಕರಮಠದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಹವ್ಯಕ ಸಮುದಾಯದ ರಜತ ಮಹೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಸಮುದಾಯದವರು ತಮ್ಮ ಸಾಮರ್ಥ್ಯ, ಪರಿಶ್ರಮ, ಪ್ರತಿಭೆಯಿಂದ ವಿವಿಧ ಕ್ಷೇತ್ರಗಳಲ್ಲಿ ಛಾಪು ಮೂಡಿಸಿದ್ದಾರೆ. ಯಕ್ಷಗಾನ, ಕಲೆ, ಸಾಹಿತ್ಯ, ತಾಳಮದ್ದಳೆ, ನೃತ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಪರಿಣತಿ ಸಾಧಿಸಿದ್ದಾರೆ. ಇಂತಹ ಶ್ರೀಮಂತ ಹವ್ಯಕ ಸಮುದಾಯದ ಆಚಾರ, ವಿಚಾರಗಳನ್ನು ಉಳಿಸಿ, ಬೆಳೆಸಬೇಕು ಎಂದು ಹೇಳಿದರು.</p>.<p>ಜಿಲ್ಲಾ ಬ್ರಾಹ್ಮಣ ಸಭಾ ಅಧ್ಯಕ್ಷ ಎಚ್.ಎನ್.ಚಂದ್ರಶೇಖರ್, ‘ಸಾಮಾಜಿಕ, ಸಾಂಸ್ಕೃತಿಕ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಹವ್ಯಕ ಸಮುದಾಯ ಶ್ರೀಮಂತ ಪರಂಪರೆ ಹೊಂದಿದೆ. ಇದೇ ರೀತಿ ಬ್ರಾಹ್ಮಣ ಸಮುದಾಯಕ್ಕೆ ಸಂಘಟನೆ ಅನಿವಾರ್ಯವಾಗಿದ್ದು ಎಲ್ಲ ಉಪಪಂಗಡಗಳು ಒಗ್ಗೂಡಬೇಕು’ ಎಂದು ತಿಳಿಸಿದರು.</p>.<p>ಕಾರ್ಯದರ್ಶಿ ಪ್ರಶಾಂತ್ ಭಟ್ ಇತರರು ಭಾಗವಹಿಸಿದ್ದರು. ತಜ್ಞ ವೈದ್ಯರಾದ ಡಾ.ಲಲಿತಾ ಅವಧಾನಿ ಅವರನ್ನು ಸನ್ಮಾನಿಸಲಾಯಿತು. ಹವ್ಯಕ ಸಮುದಾಯ 25 ವರ್ಷ ಪೂರೈಸಿದ ನೆನಪಿಗೆ ‘ರಜತ ರಥ’ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>