ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಬಳ ಕೊಟ್ಟು ಕಳ್ಳತನಕ್ಕೆ ಇಟ್ಟುಕೊಂಡಿದ್ದ!

ಕಾಮಾಕ್ಷಿಪಾಳ್ಯದಲ್ಲಿ ಮೂವರು ಕೇಬಲ್ ಕಳ್ಳರ ಬಂಧನ
Published 18 ಮೇ 2024, 20:18 IST
Last Updated 18 ಮೇ 2024, 20:18 IST
ಅಕ್ಷರ ಗಾತ್ರ

ಕೊರಟಗೆರೆ: ಬೆಂಗಳೂರಿನ ಬಸವೇಶ್ವರ ನಗರದ ವೆಂಕಟೇಶ್‌ ಎಂಬಾತ ತಿಂಗಳಿಗೆ ₹20 ಸಾವಿರ ಸಂಬಳ ಕೊಟ್ಟು ಕಳ್ಳತನಕ್ಕೆ ವ್ಯಕ್ತಿಯೊಬ್ಬನನ್ನು ಇಟ್ಟುಕೊಂಡಿದ್ದ!

ಕೊರಟಗೆರೆ ತಾಲ್ಲೂಕಿನ ವಿವಿಧೆಡೆ ಕೊಳವೆಬಾವಿ ಕೇಬಲ್ ಕಳ್ಳತನ ಮಾಡುತ್ತಿದ್ದ ಮೂವರನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದಾಗ ಈ ವಿಷಯ ಗೊತ್ತಾಗಿದೆ.

ಬೆಂಗಳೂರು ಬಸವೇಶ್ವರ ನಗರ ನಿವಾಸಿಗಳಾದ ವೆಂಕಟೇಶ, ರಾಘವೇಂದ್ರ, ವಿನೇಶ್ ಪಾಟೀಲ ಎಂಬುವರನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಆರೋಪಿ ವೆಂಕಟೇಶ, ಪ್ರತಿ ತಿಂಗಳು ₹20 ಸಾವಿರ ಸಂಬಳ ಕೊಟ್ಟು ರಾಘವೇಂದ್ರ ಎಂಬಾತನನ್ನು ಕಳ್ಳತನ ಮಾಡುವ ಕೆಲಸಕ್ಕೆ ಇಟ್ಟುಕೊಂಡಿದ್ದ. ಕದ್ದ ವಸ್ತುಗಳನ್ನು ವಿನೇಶ್ ಪಾಟೀಲ ಖರೀದಿ ಮಾಡಿ ಮಾರಾಟ ಮಾಡುತ್ತಿದ್ದ ಎಂದು ತನಿಖೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಐದಾರು ತಿಂಗಳಿನಿಂದ ತಾಲ್ಲೂಕಿನ ಹಲವು ಭಾಗಗಳಲ್ಲಿ ರೈತರ ಕೊಳವೆ ಬಾವಿಗೆ ಹಾಕಲಾಗಿದ್ದ ಕೇಬಲ್‌ಗಳನ್ನು ಕಳ್ಳತನ ಮಾಡುತ್ತಿದ್ದರು.

ಈ ಬಗ್ಗೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಸಾಕಷ್ಟು ಪ್ರಕರಣ ದಾಖಲಾಗಿದ್ದವು. ಒಂದು ತಿಂಗಳಲ್ಲಿ ಐದಾರು ಕೇಬಲ್ ಕಳ್ಳತನ ಪ್ರಕರಣ ದಾಖಲಾಗುತ್ತಿರುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು.

ವಡ್ಡಗೆರೆ ಸಮೀಪದ ಕೊಳವೆಬಾವಿಯೊಂದರಲ್ಲಿ ಈಚೆಗೆ ಕೇಬಲ್ ಕಳ್ಳತನ ಮಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದರ ಜಾಡು ಹಿಡಿದ ಸಿಪಿಐ ಆರ್.ಪಿ. ಅನಿಲ್, ಪಿಎಸ್ಐ ಬಿ.ಮಂಜುನಾಥ ಹಾಗೂ ಸಿಬ್ಬಂದಿ ಬೆಂಗಳೂರಿನ ಕಾಮಾಕ್ಷಿ ಪಾಳ್ಯದಲ್ಲಿ ಆರೋಪಿಗಳನ್ನು ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ. ಕಳ್ಳತನಕ್ಕೆ ಬಳಸುತ್ತಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.  

ರಾಘವೇಂದ್ರ
ರಾಘವೇಂದ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT