ವಡ್ಡಗೆರೆ ಸಮೀಪದ ಕೊಳವೆಬಾವಿಯೊಂದರಲ್ಲಿ ಈಚೆಗೆ ಕೇಬಲ್ ಕಳ್ಳತನ ಮಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದರ ಜಾಡು ಹಿಡಿದ ಸಿಪಿಐ ಆರ್.ಪಿ. ಅನಿಲ್, ಪಿಎಸ್ಐ ಬಿ.ಮಂಜುನಾಥ ಹಾಗೂ ಸಿಬ್ಬಂದಿ ಬೆಂಗಳೂರಿನ ಕಾಮಾಕ್ಷಿ ಪಾಳ್ಯದಲ್ಲಿ ಆರೋಪಿಗಳನ್ನು ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ. ಕಳ್ಳತನಕ್ಕೆ ಬಳಸುತ್ತಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.