<p><strong>ತಿಪಟೂರು:</strong> ಕಾಲ ಬದಲಾಗುವಂತೆ ಮನುಷ್ಯನ ಜೀವನ ಶೈಲಿ ಮತ್ತು ಆಹಾರ ಪದ್ಧತಿ ಬದಲಾಗುತ್ತಿದೆ. ಆರೋಗ್ಯದ ಬಗ್ಗೆ ಅರಿವು ಅಗತ್ಯ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.</p>.<p>ನಗರಸಭೆಯಲ್ಲಿ ಕೃಷಿ ವಿಜ್ಞಾನ ಕೇಂದ್ರ ಕೊನೇಹಳ್ಳಿ ಹಾಗೂ ನಗರಸಭೆಯಿಂದ ವಿಶ್ವ ಆಹಾರ ದಿನದ ಅಂಗವಾಗಿ ಪೌರ ಕಾರ್ಮಿಕರು ಹಾಗೂ ನೀರು ವಿತರಕರಿಗೆ ಕಾರ್ಯಾಗಾರ ನಡೆಯಿತು.</p>.<p>ಮಾನವ ಪೌಷ್ಟಿಕತೆ, ವಿಜ್ಞಾನ ಮತ್ತು ಆರೋಗ್ಯದ ಆಧಾರದಲ್ಲಿ ಆಹಾರ ಆಯ್ಕೆಮಾಡುತ್ತಿದ್ದಾನೆ. ಉತ್ತಮ ಆಹಾರ ಮತ್ತು ಭವಿಷ್ಯಕ್ಕಾಗಿ ಕೈ ಜೋಡಿಸಿ ಎಂಬ ಘೋಷವಾಕ್ಯದಲ್ಲಿ ವಿಶ್ವ ಆಹಾರ ದಿನ ಆಯೋಜಿಸಲಾಗಿದೆ ಎಂದರು.</p>.<p>ನಗರಸಭೆ ಪ್ರಭಾರ ಅಧ್ಯಕ್ಷೆ ಮೇಘಶ್ರೀ ಭೂಷಣ್ ಮಾತನಾಡಿ, ಆಧುನಿಕ ಜೀವನ ಶೈಲಿ ವೇಗವಾಗಿ ಬದಲಾಗುತ್ತಿದ್ದು, ನಮ್ಮ ಆಹಾರ ಪದ್ಧತಿ ಆರೋಗ್ಯವನ್ನು ನಿರ್ಧರಿಸುತ್ತದೆ ಎಂದು ಹೇಳಿದರು.</p>.<p>ಜಿಕೆವಿಕೆ ವಿಸ್ತರಣಾ ನಿರ್ದೇಶಕ ವೈ.ಎನ್.ಶಿವಲಿಂಗಯ್ಯ ಮಾತನಾಡಿ, ಪೌಷ್ಟಿಕ ಆಹಾರದ ಅಗತ್ಯತೆ, ಆಹಾರದ ಗುಣಮಟ್ಟ ಮತ್ತು ಪೌಷ್ಟಿಕ ಬೆಳೆಗಳ ಬೆಳವಣಿಗೆ ಕುರಿತು ಉಪನ್ಯಾಸ ನೀಡಿದರು. ಮನುಷ್ಯನ ಬೆಳವಣಿಗೆಯ ಹಾದಿಯಲ್ಲಿ ಆಹಾರದ ಗುಣಮಟ್ಟವೇ ಅವನ ಬುದ್ಧಿ ಮತ್ತು ಆರೋಗ್ಯವನ್ನು ನಿರ್ಧರಿಸಿದೆ ಎಂದರು.</p>.<p>ಜಿಕೆವಿಕೆಯ ವಿಸ್ತರಣಾಧಿಕಾರಿ ವೈ.ಎನ್.ಶಿವಲಿಂಗಯ್ಯ, ಕೆವಿಕೆ ಮುಖ್ಯಸ್ಥ ಎಂ.ಎಚ್.ಶಂಕರ್, ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಮ್.ಎಸ್.ಯೋಗೀಶ್, ಪೌರಯುಕ್ತ ವಿಶ್ವೇಶ್ವರ ಬದರಗಡೆ, ವಿಜ್ಞಾನಿ ದರ್ಶನ್ ಎಂ.ಈ, ಆರ್ಥಿಕ ಸಾಕ್ಷರತಾ ಸಮಾಲೋಚಕಿ ರೇಖಾ, ನಗರಸಭೆ ಅಧಿಕಾರಿಗಳು, ಪೌರಕಾರ್ಮಿಕರು, ಜಿಕೆವಿಕೆ ವಿದ್ಯಾರ್ಥಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ಕಾಲ ಬದಲಾಗುವಂತೆ ಮನುಷ್ಯನ ಜೀವನ ಶೈಲಿ ಮತ್ತು ಆಹಾರ ಪದ್ಧತಿ ಬದಲಾಗುತ್ತಿದೆ. ಆರೋಗ್ಯದ ಬಗ್ಗೆ ಅರಿವು ಅಗತ್ಯ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.</p>.<p>ನಗರಸಭೆಯಲ್ಲಿ ಕೃಷಿ ವಿಜ್ಞಾನ ಕೇಂದ್ರ ಕೊನೇಹಳ್ಳಿ ಹಾಗೂ ನಗರಸಭೆಯಿಂದ ವಿಶ್ವ ಆಹಾರ ದಿನದ ಅಂಗವಾಗಿ ಪೌರ ಕಾರ್ಮಿಕರು ಹಾಗೂ ನೀರು ವಿತರಕರಿಗೆ ಕಾರ್ಯಾಗಾರ ನಡೆಯಿತು.</p>.<p>ಮಾನವ ಪೌಷ್ಟಿಕತೆ, ವಿಜ್ಞಾನ ಮತ್ತು ಆರೋಗ್ಯದ ಆಧಾರದಲ್ಲಿ ಆಹಾರ ಆಯ್ಕೆಮಾಡುತ್ತಿದ್ದಾನೆ. ಉತ್ತಮ ಆಹಾರ ಮತ್ತು ಭವಿಷ್ಯಕ್ಕಾಗಿ ಕೈ ಜೋಡಿಸಿ ಎಂಬ ಘೋಷವಾಕ್ಯದಲ್ಲಿ ವಿಶ್ವ ಆಹಾರ ದಿನ ಆಯೋಜಿಸಲಾಗಿದೆ ಎಂದರು.</p>.<p>ನಗರಸಭೆ ಪ್ರಭಾರ ಅಧ್ಯಕ್ಷೆ ಮೇಘಶ್ರೀ ಭೂಷಣ್ ಮಾತನಾಡಿ, ಆಧುನಿಕ ಜೀವನ ಶೈಲಿ ವೇಗವಾಗಿ ಬದಲಾಗುತ್ತಿದ್ದು, ನಮ್ಮ ಆಹಾರ ಪದ್ಧತಿ ಆರೋಗ್ಯವನ್ನು ನಿರ್ಧರಿಸುತ್ತದೆ ಎಂದು ಹೇಳಿದರು.</p>.<p>ಜಿಕೆವಿಕೆ ವಿಸ್ತರಣಾ ನಿರ್ದೇಶಕ ವೈ.ಎನ್.ಶಿವಲಿಂಗಯ್ಯ ಮಾತನಾಡಿ, ಪೌಷ್ಟಿಕ ಆಹಾರದ ಅಗತ್ಯತೆ, ಆಹಾರದ ಗುಣಮಟ್ಟ ಮತ್ತು ಪೌಷ್ಟಿಕ ಬೆಳೆಗಳ ಬೆಳವಣಿಗೆ ಕುರಿತು ಉಪನ್ಯಾಸ ನೀಡಿದರು. ಮನುಷ್ಯನ ಬೆಳವಣಿಗೆಯ ಹಾದಿಯಲ್ಲಿ ಆಹಾರದ ಗುಣಮಟ್ಟವೇ ಅವನ ಬುದ್ಧಿ ಮತ್ತು ಆರೋಗ್ಯವನ್ನು ನಿರ್ಧರಿಸಿದೆ ಎಂದರು.</p>.<p>ಜಿಕೆವಿಕೆಯ ವಿಸ್ತರಣಾಧಿಕಾರಿ ವೈ.ಎನ್.ಶಿವಲಿಂಗಯ್ಯ, ಕೆವಿಕೆ ಮುಖ್ಯಸ್ಥ ಎಂ.ಎಚ್.ಶಂಕರ್, ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಮ್.ಎಸ್.ಯೋಗೀಶ್, ಪೌರಯುಕ್ತ ವಿಶ್ವೇಶ್ವರ ಬದರಗಡೆ, ವಿಜ್ಞಾನಿ ದರ್ಶನ್ ಎಂ.ಈ, ಆರ್ಥಿಕ ಸಾಕ್ಷರತಾ ಸಮಾಲೋಚಕಿ ರೇಖಾ, ನಗರಸಭೆ ಅಧಿಕಾರಿಗಳು, ಪೌರಕಾರ್ಮಿಕರು, ಜಿಕೆವಿಕೆ ವಿದ್ಯಾರ್ಥಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>