<p><strong>ತುಮಕೂರು:</strong> ಪಾರ್ಟ್ ಟೈಮ್ ಕೆಲಸದ ಆಮಿಷಕ್ಕೆ ಒಳಗಾಗಿ ಶಿರಾ ತಾಲ್ಲೂಕಿನ ಬೆಂಚಿ ಬಸವನಹಳ್ಳಿಯ ಸಮುದಾಯ ಆರೋಗ್ಯಾಧಿಕಾರಿ ಬಿ.ವಿ.ಮುರಳೀಧರ್ ₹7.60 ಲಕ್ಷ ಕಳೆದುಕೊಂಡಿದ್ದಾರೆ.</p>.<p>ಸೈಬರ್ ಆರೋಪಿಗಳು ವಾಟ್ಸ್ ಆ್ಯಪ್ ಮುಖಾಂತರ ಪಾರ್ಟ್ಟೈಮ್ ಕೆಲಸ ಆಮಿಷ ಒಡ್ಡಿದ್ದಾರೆ. ಅವರು ಕಳುಹಿಸಿದ ಲಿಂಕ್ ಕ್ಲಿಕ್ ಮಾಡಿದ ನಂತರ R-4212 WILLIAMS SONOMA ಎಂಬ ಟೆಲಿಗ್ರಾಂ ಗ್ರೂಪ್ ತೆರೆದುಕೊಂಡಿದೆ. ಸದರಿ ಗ್ರೂಪ್ನಲ್ಲಿ ಕಳುಹಿಸಿದ ವೆಬ್ಪೇಜ್ ಲಿಂಕ್ನಲ್ಲಿ ಮುರಳೀಧರ್ ಅಗತ್ಯ ಮಾಹಿತಿ ಸಲ್ಲಿಸಿದ್ದಾರೆ.</p>.<p>‘ವಿವಿಧ ಉತ್ಪನ್ನಗಳ ಖರೀದಿ ಮತ್ತು ಮಾರಾಟದ ಟಾಸ್ಕ್ ಪೂರ್ಣಗೊಳಿಸಿದರೆ ಹೆಚ್ಚಿನ ಲಾಭ ನೀಡಲಾಗುವುದು’ ಎಂದು ತಿಳಿಸಿದ್ದಾರೆ. ಮೊದಲಿಗೆ ಬೋನಸ್ ₹11 ಸಾವಿರ, ಲಾಭಾಂಶ ಎಂದು ₹1,347ರಷ್ಟು ಹಣವನ್ನು ಮುರಳೀಧರ್ ಖಾತೆಗೆ ವರ್ಗಾಯಿಸಿದ್ದಾರೆ. ಹೆಚ್ಚಿನ ಹಣ ಹೂಡಿಕೆ ಮಾಡಿ, ಉತ್ಪನ್ನ ಖರೀದಿಸಿ ಮಾರಾಟ ಮಾಡುತ್ತಾ ಉತ್ತಮ ಲಾಭ ಪಡೆಯಬಹುದು ಎಂದು ನಂಬಿಸಿದ್ದಾರೆ. ಮುರಳೀಧರ್ ಹಂತ ಹಂತವಾಗಿ ಒಟ್ಟು ₹7,79,246 ಹಣವನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಇದರಲ್ಲಿ ಅವರಿಗೆ ₹18,741 ವಾಪಸ್ ಬಂದಿದೆ.</p>.<p>‘ಇನ್ನೂ ₹7 ಲಕ್ಷ ಕಟ್ಟಿದರೆ ಮಾತ್ರ ಹಣ ಮರಳಿಸುತ್ತೇವೆ ಎನ್ನುತ್ತಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಂಡು ಹಣ ವಾಪಸ್ ಕೊಡಿಸುವಂತೆ’ ನೀಡಿದ ದೂರಿನ ಮೇರೆಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಪಾರ್ಟ್ ಟೈಮ್ ಕೆಲಸದ ಆಮಿಷಕ್ಕೆ ಒಳಗಾಗಿ ಶಿರಾ ತಾಲ್ಲೂಕಿನ ಬೆಂಚಿ ಬಸವನಹಳ್ಳಿಯ ಸಮುದಾಯ ಆರೋಗ್ಯಾಧಿಕಾರಿ ಬಿ.ವಿ.ಮುರಳೀಧರ್ ₹7.60 ಲಕ್ಷ ಕಳೆದುಕೊಂಡಿದ್ದಾರೆ.</p>.<p>ಸೈಬರ್ ಆರೋಪಿಗಳು ವಾಟ್ಸ್ ಆ್ಯಪ್ ಮುಖಾಂತರ ಪಾರ್ಟ್ಟೈಮ್ ಕೆಲಸ ಆಮಿಷ ಒಡ್ಡಿದ್ದಾರೆ. ಅವರು ಕಳುಹಿಸಿದ ಲಿಂಕ್ ಕ್ಲಿಕ್ ಮಾಡಿದ ನಂತರ R-4212 WILLIAMS SONOMA ಎಂಬ ಟೆಲಿಗ್ರಾಂ ಗ್ರೂಪ್ ತೆರೆದುಕೊಂಡಿದೆ. ಸದರಿ ಗ್ರೂಪ್ನಲ್ಲಿ ಕಳುಹಿಸಿದ ವೆಬ್ಪೇಜ್ ಲಿಂಕ್ನಲ್ಲಿ ಮುರಳೀಧರ್ ಅಗತ್ಯ ಮಾಹಿತಿ ಸಲ್ಲಿಸಿದ್ದಾರೆ.</p>.<p>‘ವಿವಿಧ ಉತ್ಪನ್ನಗಳ ಖರೀದಿ ಮತ್ತು ಮಾರಾಟದ ಟಾಸ್ಕ್ ಪೂರ್ಣಗೊಳಿಸಿದರೆ ಹೆಚ್ಚಿನ ಲಾಭ ನೀಡಲಾಗುವುದು’ ಎಂದು ತಿಳಿಸಿದ್ದಾರೆ. ಮೊದಲಿಗೆ ಬೋನಸ್ ₹11 ಸಾವಿರ, ಲಾಭಾಂಶ ಎಂದು ₹1,347ರಷ್ಟು ಹಣವನ್ನು ಮುರಳೀಧರ್ ಖಾತೆಗೆ ವರ್ಗಾಯಿಸಿದ್ದಾರೆ. ಹೆಚ್ಚಿನ ಹಣ ಹೂಡಿಕೆ ಮಾಡಿ, ಉತ್ಪನ್ನ ಖರೀದಿಸಿ ಮಾರಾಟ ಮಾಡುತ್ತಾ ಉತ್ತಮ ಲಾಭ ಪಡೆಯಬಹುದು ಎಂದು ನಂಬಿಸಿದ್ದಾರೆ. ಮುರಳೀಧರ್ ಹಂತ ಹಂತವಾಗಿ ಒಟ್ಟು ₹7,79,246 ಹಣವನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಇದರಲ್ಲಿ ಅವರಿಗೆ ₹18,741 ವಾಪಸ್ ಬಂದಿದೆ.</p>.<p>‘ಇನ್ನೂ ₹7 ಲಕ್ಷ ಕಟ್ಟಿದರೆ ಮಾತ್ರ ಹಣ ಮರಳಿಸುತ್ತೇವೆ ಎನ್ನುತ್ತಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಂಡು ಹಣ ವಾಪಸ್ ಕೊಡಿಸುವಂತೆ’ ನೀಡಿದ ದೂರಿನ ಮೇರೆಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>