<p><strong>ತಿಪಟೂರು</strong>: ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಜನತೆಗೆ ಅಗತ್ಯ ನೆರವು, ಮಾಹಿತಿ ನೀಡುವ ಸಲುವಾಗಿ ತಾಲ್ಲೂಕು ಆಡಳಿತದಿಂದ ಸಹಾಯವಾಣಿ (ಹೆಲ್ತ್ವಾರ್ ರೂಂ) ಪ್ರಾರಂಭಿಸಲಾಗಿದೆ.</p>.<p>ಸಹಾಯವಾಣಿ ಸಂಖ್ಯೆ ‘08134-251039’ಗೆ ಕರೆಮಾಡಿ ಸಾರ್ವಜನಿಕರು ಕೊರೊನಾ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ. ಅಲ್ಲದೇ, ಹೆಲ್ತ್ವಾರ್ ರೂಂನಲ್ಲಿ 4 ಜನ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದು, ಅದರಲ್ಲಿ ಒಬ್ಬರು ಮುಖ್ಯ ವೈದ್ಯರಿರುತ್ತಾರೆ. ವಾರ್ರೂಂಗೆ ಬರುವ ಕರೆ ಸ್ವೀಕರಿಸಿ ಮಾತನಾಡುವ ಜೊತೆಗೆ ಕೊರೊನಾ ಸೋಂಕಿತರಾಗಿ ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿರುವವರಿಗೆ ನಿತ್ಯವೂ ಕರೆ ಮಾಡಿ ಅಗತ್ಯ ಮಾಹಿತಿ ಒದಗಿಸುವ ಜೊತೆಗೆ ಚಿಕಿತ್ಸೆ ಬಗ್ಗೆ ಮನವರಿಕೆ ಮಾಡಿಕೊಡುತ್ತಿದ್ದಾರೆ.</p>.<p>ಕೋವಿಡ್ ಲಕ್ಷಣಗಳ ಬಗ್ಗೆ ತಾತ್ಸಾರ ಮನೋಭಾವ ಹೊಂದಿರುವ ಅನೇಕ ಸಾರ್ವಜನಿಕರು ಆಸ್ಪತ್ರೆಗೆ ಬಂದು ಪರೀಕ್ಷೆಗೆ ಒಳಗಾಗುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಾಗ ಅವರ ಮನಸ್ಸು ಪರಿವರ್ತಿಸಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಕರೆ ತಂದಿರುವ ನಿದರ್ಶನ ನೂರಾರಿವೆ.</p>.<p>ಹೆಲ್ತ್ವಾರ್ರೂಂಗೆ ಶಾಸಕ ಬಿ.ಸಿ.ನಾಗೇಶ್ ದಿಢೀರ್ ಭೇಟಿ ನೀಡಿ ಕಾರ್ಯವೈಕರಿ ಪರಿಶೀಲಿಸಿದರು. ಹಲವು ರೋಗಿಗಳೊಂದಿಗೆ ಸಂಭಾಷಣೆ ನಡೆಸಿ ಧೈರ್ಯತುಂಬಿದರು. ಅಧಿಕಾರಿಗಳಿಗೆ ಗುಣಮಟ್ಟವನ್ನು ಇದೇ ರೀತಿ ಕಾಪಾಡಿಕೊಂಡು ಹೋಗುವಂತೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು</strong>: ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಜನತೆಗೆ ಅಗತ್ಯ ನೆರವು, ಮಾಹಿತಿ ನೀಡುವ ಸಲುವಾಗಿ ತಾಲ್ಲೂಕು ಆಡಳಿತದಿಂದ ಸಹಾಯವಾಣಿ (ಹೆಲ್ತ್ವಾರ್ ರೂಂ) ಪ್ರಾರಂಭಿಸಲಾಗಿದೆ.</p>.<p>ಸಹಾಯವಾಣಿ ಸಂಖ್ಯೆ ‘08134-251039’ಗೆ ಕರೆಮಾಡಿ ಸಾರ್ವಜನಿಕರು ಕೊರೊನಾ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ. ಅಲ್ಲದೇ, ಹೆಲ್ತ್ವಾರ್ ರೂಂನಲ್ಲಿ 4 ಜನ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದು, ಅದರಲ್ಲಿ ಒಬ್ಬರು ಮುಖ್ಯ ವೈದ್ಯರಿರುತ್ತಾರೆ. ವಾರ್ರೂಂಗೆ ಬರುವ ಕರೆ ಸ್ವೀಕರಿಸಿ ಮಾತನಾಡುವ ಜೊತೆಗೆ ಕೊರೊನಾ ಸೋಂಕಿತರಾಗಿ ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿರುವವರಿಗೆ ನಿತ್ಯವೂ ಕರೆ ಮಾಡಿ ಅಗತ್ಯ ಮಾಹಿತಿ ಒದಗಿಸುವ ಜೊತೆಗೆ ಚಿಕಿತ್ಸೆ ಬಗ್ಗೆ ಮನವರಿಕೆ ಮಾಡಿಕೊಡುತ್ತಿದ್ದಾರೆ.</p>.<p>ಕೋವಿಡ್ ಲಕ್ಷಣಗಳ ಬಗ್ಗೆ ತಾತ್ಸಾರ ಮನೋಭಾವ ಹೊಂದಿರುವ ಅನೇಕ ಸಾರ್ವಜನಿಕರು ಆಸ್ಪತ್ರೆಗೆ ಬಂದು ಪರೀಕ್ಷೆಗೆ ಒಳಗಾಗುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಾಗ ಅವರ ಮನಸ್ಸು ಪರಿವರ್ತಿಸಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಕರೆ ತಂದಿರುವ ನಿದರ್ಶನ ನೂರಾರಿವೆ.</p>.<p>ಹೆಲ್ತ್ವಾರ್ರೂಂಗೆ ಶಾಸಕ ಬಿ.ಸಿ.ನಾಗೇಶ್ ದಿಢೀರ್ ಭೇಟಿ ನೀಡಿ ಕಾರ್ಯವೈಕರಿ ಪರಿಶೀಲಿಸಿದರು. ಹಲವು ರೋಗಿಗಳೊಂದಿಗೆ ಸಂಭಾಷಣೆ ನಡೆಸಿ ಧೈರ್ಯತುಂಬಿದರು. ಅಧಿಕಾರಿಗಳಿಗೆ ಗುಣಮಟ್ಟವನ್ನು ಇದೇ ರೀತಿ ಕಾಪಾಡಿಕೊಂಡು ಹೋಗುವಂತೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>