ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಳಿಯಾರು: ತುಂಬಿ ಹರಿದ ಕೆರೆ, ಕಟ್ಟೆ

Last Updated 11 ಸೆಪ್ಟೆಂಬರ್ 2020, 3:09 IST
ಅಕ್ಷರ ಗಾತ್ರ

ಹುಳಿಯಾರು: ಹೋಬಳಿ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಉತ್ತಮ ಮಳೆಯಾಗಿದ್ದು ಅಲ್ಲಲ್ಲಿ ಕೆರೆ- ಕಟ್ಟೆಗಳಿಗೆ ನೀರು ಬಂದಿದೆ. ಕೆಲವೆಡೆ ಬೆಳೆ ನಷ್ಟವಾಗಿದೆ.

ಹುಳಿಯಾರು ಸೇರಿದಂತೆ ಹೋಬಳಿ ವ್ಯಾಪ್ತಿಯ ಕೆಲ ಗ್ರಾಮ ಪಂಚಾಯಿತಿಗಳಲ್ಲಿ ಮಳೆಯಾಗಿದೆ. ದಸೂಡಿ ಭಾಗದ ಸುತ್ತಮುತ್ತ ಒಂದೂವರೆ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ಕೆರೆ ಕಟ್ಟೆಗಳಿಗೆ ನೀರು ಬಂದಿದೆ. ದಸೂಡಿ- ರಂಗನಕೆರೆ ನಡುವಿನ ಕಟ್ಟೆ ಒಂದೇ ರಾತ್ರಿಗೆ ಕೋಡಿ ಹರಿದಿದೆ.

ಬುಕ್ಕಾಪಟ್ಟಣ ಅರಣ್ಯ ಪ್ರದೇಶಕ್ಕೆ ಸೇರಿದ ಸಂತೆಕಣಿವೆ ಕೆರೆ, ರಾಮಪ್ಪನ ಕೆರೆಗಳಿಗೆ ನೀರು ಬಂದಿದೆ. ನುಲೇನೂರು ಹಾಗೂ ರಂಗನಕೆರೆ ಭಾಗದಲ್ಲಿ ಉತ್ತಮ ಮಳೆಯಾಗಿ ರೈತರ ಹೊಲಗಳಲ್ಲಿ ನಿರ್ಮಿಸಿರುವ ಏರಿ- ಬದುಗಳು ಕೊಚ್ಚಿಹೋಗಿವೆ. ಸೋಮನಹಳ್ಳಿ ಗ್ರಾಮದಲ್ಲಿ ಜೋರು ಮಳೆಗೆ ಚರಂಡಿ ಕಟ್ಟಿ, ಹಲವು ಮನೆಗಳಿಗೆ ನೀರು ನುಗ್ಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT