ಕೆರೆ ಒತ್ತುವರಿ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆಯಲಾಗಿತ್ತು. ಆ ಪತ್ರ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ವರ್ಗಾವಣೆಯಾಗಿತ್ತು. ಅಗತ್ಯ ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಹಿರಿಯ ಅಧಿಕಾರಿಗಳು ಸೂಚಿಸಿದ್ದರೂ ಕ್ರಮ ವಹಿಸಿಲ್ಲ. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಕಚೇರಿ, ಸಣ್ಣ ನೀರಾವರಿ ಇಲಾಖೆ, ತಹಶೀಲ್ದಾರ್ ಕಚೇರಿ ನಡುವೆ ಈ ಅರ್ಜಿ ಓಡಾಡುತ್ತಿದೆ. ಈ ಕೆರೆಯಲ್ಲಿ 35 ಗುಂಟೆ ಜಾಗ ರಸ್ತೆಗಾಗಿ ಒತ್ತುವರಿ ಮಾಡಲಾಗಿದೆ ಎಂದು ಸರ್ವೆ ಅಧಿಕಾರಿಗಳು ತಹಶೀಲ್ದಾರ್ಗೆ ವರದಿ ನೀಡಿದ್ದಾರೆ. ಗ್ರಾಮಲೆಕ್ಕಿಗ, ಕಂದಾಯ ಅಧಿಕಾರಿ ಸಹ ಕೆರೆ ಅಂಗಳವನ್ನು ರಸ್ತೆಗಾಗಿ ಒತ್ತುವರಿ ಮಾಡಿರುವುದನ್ನು ಲಿಖಿತವಾಗಿ ದೃಢಪಡಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ
ಎಂದು ಬೆಳಗುಂಬ ಗ್ರಾ.ಪಂ ಮಾಜಿ ಸದಸ್ಯ ಬಿ.ಎಸ್.ವೆಂಕಟೇಶ್ ದೂರಿದ್ದಾರೆ.