<p><strong>ತುಮಕೂರು</strong>: ತಾಲ್ಲೂಕಿನ ಹೆಬ್ಬೂರು ಕೆರೆಯನ್ನು ಒತ್ತುವರಿ ಮಾಡಿಕೊಂಡು ಖಾಸಗಿ ಲೇಔಟ್ಗೆ ಸಂಪರ್ಕ ಕಲ್ಪಿಸಲು ರಸ್ತೆ ನಿರ್ಮಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.</p>.<p>ಹೆಬ್ಬೂರು ಗ್ರಾಮದ ಸರ್ವೆ ನಂ 158ರಲ್ಲಿರುವ ಕೆರೆಗೆ ಸೇರಿದ 35 ಗುಂಟೆ ಜಾಗವನ್ನು ಒತ್ತುವರಿ ಮಾಡಿಕೊಂಡು ರಸ್ತೆ ನಿರ್ಮಿಸಲಾಗುತ್ತಿದೆ. ಆದರೆ ಕಂದಾಯ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ತೆರವುಮಾಡಿಸಿ, ಕೆರೆ ಉಳಿಸುವ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಲಾಗಿದೆ.</p>.<p>ಕೆರೆ ಒತ್ತುವರಿ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆಯಲಾಗಿತ್ತು. ಆ ಪತ್ರ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ವರ್ಗಾವಣೆಯಾಗಿತ್ತು. ಅಗತ್ಯ ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಹಿರಿಯ ಅಧಿಕಾರಿಗಳು ಸೂಚಿಸಿದ್ದರೂ ಕ್ರಮ ವಹಿಸಿಲ್ಲ. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಕಚೇರಿ, ಸಣ್ಣ ನೀರಾವರಿ ಇಲಾಖೆ, ತಹಶೀಲ್ದಾರ್ ಕಚೇರಿ ನಡುವೆ ಈ ಅರ್ಜಿ ಓಡಾಡುತ್ತಿದೆ. ಈ ಕೆರೆಯಲ್ಲಿ 35 ಗುಂಟೆ ಜಾಗ ರಸ್ತೆಗಾಗಿ ಒತ್ತುವರಿ ಮಾಡಲಾಗಿದೆ ಎಂದು ಸರ್ವೆ ಅಧಿಕಾರಿಗಳು ತಹಶೀಲ್ದಾರ್ಗೆ ವರದಿ ನೀಡಿದ್ದಾರೆ. ಗ್ರಾಮಲೆಕ್ಕಿಗ, ಕಂದಾಯ ಅಧಿಕಾರಿ ಸಹ ಕೆರೆ ಅಂಗಳವನ್ನು ರಸ್ತೆಗಾಗಿ ಒತ್ತುವರಿ ಮಾಡಿರುವುದನ್ನು ಲಿಖಿತವಾಗಿ ದೃಢಪಡಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ<br />ಎಂದು ಬೆಳಗುಂಬ ಗ್ರಾ.ಪಂ ಮಾಜಿ ಸದಸ್ಯ ಬಿ.ಎಸ್.ವೆಂಕಟೇಶ್ ದೂರಿದ್ದಾರೆ.</p>.<p>ಕಳೆದ ಒಂದುವರೆ ವರ್ಷದಿಂದಲೂ ಕ್ರಮ ಕೈಗೊಂಡಿಲ್ಲ. ಯಾರ ಒತ್ತಡಕ್ಕೆ ಸಿಲುಕಿ ಕ್ರಮ ತೆಗೆದುಕೊಂಡಿಲ್ಲ ಎಂಬು<br />ದನ್ನು ತಿಳಿಸುವಂತೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ತಾಲ್ಲೂಕಿನ ಹೆಬ್ಬೂರು ಕೆರೆಯನ್ನು ಒತ್ತುವರಿ ಮಾಡಿಕೊಂಡು ಖಾಸಗಿ ಲೇಔಟ್ಗೆ ಸಂಪರ್ಕ ಕಲ್ಪಿಸಲು ರಸ್ತೆ ನಿರ್ಮಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.</p>.<p>ಹೆಬ್ಬೂರು ಗ್ರಾಮದ ಸರ್ವೆ ನಂ 158ರಲ್ಲಿರುವ ಕೆರೆಗೆ ಸೇರಿದ 35 ಗುಂಟೆ ಜಾಗವನ್ನು ಒತ್ತುವರಿ ಮಾಡಿಕೊಂಡು ರಸ್ತೆ ನಿರ್ಮಿಸಲಾಗುತ್ತಿದೆ. ಆದರೆ ಕಂದಾಯ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ತೆರವುಮಾಡಿಸಿ, ಕೆರೆ ಉಳಿಸುವ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಲಾಗಿದೆ.</p>.<p>ಕೆರೆ ಒತ್ತುವರಿ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆಯಲಾಗಿತ್ತು. ಆ ಪತ್ರ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ವರ್ಗಾವಣೆಯಾಗಿತ್ತು. ಅಗತ್ಯ ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಹಿರಿಯ ಅಧಿಕಾರಿಗಳು ಸೂಚಿಸಿದ್ದರೂ ಕ್ರಮ ವಹಿಸಿಲ್ಲ. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಕಚೇರಿ, ಸಣ್ಣ ನೀರಾವರಿ ಇಲಾಖೆ, ತಹಶೀಲ್ದಾರ್ ಕಚೇರಿ ನಡುವೆ ಈ ಅರ್ಜಿ ಓಡಾಡುತ್ತಿದೆ. ಈ ಕೆರೆಯಲ್ಲಿ 35 ಗುಂಟೆ ಜಾಗ ರಸ್ತೆಗಾಗಿ ಒತ್ತುವರಿ ಮಾಡಲಾಗಿದೆ ಎಂದು ಸರ್ವೆ ಅಧಿಕಾರಿಗಳು ತಹಶೀಲ್ದಾರ್ಗೆ ವರದಿ ನೀಡಿದ್ದಾರೆ. ಗ್ರಾಮಲೆಕ್ಕಿಗ, ಕಂದಾಯ ಅಧಿಕಾರಿ ಸಹ ಕೆರೆ ಅಂಗಳವನ್ನು ರಸ್ತೆಗಾಗಿ ಒತ್ತುವರಿ ಮಾಡಿರುವುದನ್ನು ಲಿಖಿತವಾಗಿ ದೃಢಪಡಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ<br />ಎಂದು ಬೆಳಗುಂಬ ಗ್ರಾ.ಪಂ ಮಾಜಿ ಸದಸ್ಯ ಬಿ.ಎಸ್.ವೆಂಕಟೇಶ್ ದೂರಿದ್ದಾರೆ.</p>.<p>ಕಳೆದ ಒಂದುವರೆ ವರ್ಷದಿಂದಲೂ ಕ್ರಮ ಕೈಗೊಂಡಿಲ್ಲ. ಯಾರ ಒತ್ತಡಕ್ಕೆ ಸಿಲುಕಿ ಕ್ರಮ ತೆಗೆದುಕೊಂಡಿಲ್ಲ ಎಂಬು<br />ದನ್ನು ತಿಳಿಸುವಂತೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>