<p><strong>ಶಿರಾ:</strong> ತಾಲ್ಲೂಕಿಗೆ ಹೇಮಾವತಿ ನೀರು ಹರಿಸುವ ವಿಚಾರದಲ್ಲಿ ಅಡ್ಡಿಪಡಿಸಿದ ಜಿಲ್ಲೆಯ ಬಿಜೆಪಿ ಮುಖಂಡರು ಇಂದು ರಾಜಕೀಯ ಲಾಭಕ್ಕಾಗಿ ಮದಲೂರು ಕೆರೆಗೆ ನೀರು ಹರಿಸಲು ಮುಂದಾಗಿರುವುದು ನಾಚಿಕೆಗೇಡು ಎಂದು ಜೆಡಿಎಸ್ಮುಖಂಡ ಸಿ.ಆರ್.ಉಮೇಶ್ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ವರ್ಷವಾದರೂ ಮದಲೂರು ಕೆರೆಗೆ ನೀರು ಹರಿಸುವ ಬಗ್ಗೆ ಕಾಳಜಿ ತೋರಿರಲಿಲ್ಲ. ಈಗ ಉಪಚುನಾವಣೆ ಹೊಸ್ತಿಲಿನಲ್ಲಿ ರಾಜಕೀಯ ಲಾಭಕ್ಕಾಗಿ ನೀರು ಹರಿಸಲು ಮುಂದಾಗಿದ್ದಾರೆ’ ಎಂದರು.</p>.<p>2002ರಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದ ಸೊಗಡು ಶಿವಣ್ಣ ಅವರು ತಾಲ್ಲೂಕಿಗೆ ಹೇಮೆ ಹರಿಸಲು ವಿರೋಧ ವ್ಯಕ್ತಪಡಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. 2010ರಲ್ಲಿ ಮದಲೂರು ಕೆರೆ ಯೋಜನೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು ಎಂದು ಹೇಳಿದರು.</p>.<p>ಬಿಜೆಪಿ ಹಣದ ಹೊಳೆ ಹರಿಸಿ ಚುನಾವಣೆಯಲ್ಲಿ ಗೆಲ್ಲುವ ಹುಮ್ಮಸ್ಸಿನಲ್ಲಿದೆ. ಆದರೆ ಜನರ ಪ್ರೀತಿ, ಅಭಿಮಾನ ಕುಮಾರಸ್ವಾಮಿ ಮೇಲಿದೆ ಎಂದರು.</p>.<p>ಜೆಡಿಎಸ್ನಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ. ಸ್ಥಳೀಯ ಅಭ್ಯರ್ಥಿ ಯಾರೇ ಇದ್ದರೂ ನಮಗೆ ಎಚ್.ಡಿ. ಕುಮಾರಸ್ವಾಮಿಯೇ ಅಭ್ಯರ್ಥಿ ಎಂದು ಕೆಲಸ ಮಾಡುತ್ತೇವೆ ಎಂದರು.</p>.<p>ಶಾಸಕರಾಗಿದ್ದ ಬಿ.ಸತ್ಯನಾರಾಯಣ ಅವರಿಗೆ ಗಾಯಿತ್ರಿ ಜಲಾಶಯದಿಂದ ಶಿರಾಕ್ಕೆ ನೀರು ತರುವ ಕನಸಿತ್ತು. ಈಗ ಭದ್ರಾ ಜಲಾಶಯದ ನೀರು ಬರುವುದರಿಂದ ಶಿರಾಕ್ಕೆ ಪೈಪ್ಲೈನ್ ಮೂಲಕ ನೀರು ತಂದು ಯೋಜನೆಗೆ ಬಿ.ಸತ್ಯನಾರಾಯಣ ಅವರ ಹೆಸರು ಇಡಬೇಕು ಎಂದರು.</p>.<p>ನಿವೃತ್ತ ಪ್ರಾಧ್ಯಾಪಕ ಕಟಾವೀರನಹಳ್ಳಿ ನಾಗರಾಜು, ಗೋಮಾರದಹಳ್ಳಿ ಮಂಜುನಾಥ್, ಮಾರುತಿ, ನಾಗರಾಜು ಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ತಾಲ್ಲೂಕಿಗೆ ಹೇಮಾವತಿ ನೀರು ಹರಿಸುವ ವಿಚಾರದಲ್ಲಿ ಅಡ್ಡಿಪಡಿಸಿದ ಜಿಲ್ಲೆಯ ಬಿಜೆಪಿ ಮುಖಂಡರು ಇಂದು ರಾಜಕೀಯ ಲಾಭಕ್ಕಾಗಿ ಮದಲೂರು ಕೆರೆಗೆ ನೀರು ಹರಿಸಲು ಮುಂದಾಗಿರುವುದು ನಾಚಿಕೆಗೇಡು ಎಂದು ಜೆಡಿಎಸ್ಮುಖಂಡ ಸಿ.ಆರ್.ಉಮೇಶ್ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ವರ್ಷವಾದರೂ ಮದಲೂರು ಕೆರೆಗೆ ನೀರು ಹರಿಸುವ ಬಗ್ಗೆ ಕಾಳಜಿ ತೋರಿರಲಿಲ್ಲ. ಈಗ ಉಪಚುನಾವಣೆ ಹೊಸ್ತಿಲಿನಲ್ಲಿ ರಾಜಕೀಯ ಲಾಭಕ್ಕಾಗಿ ನೀರು ಹರಿಸಲು ಮುಂದಾಗಿದ್ದಾರೆ’ ಎಂದರು.</p>.<p>2002ರಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದ ಸೊಗಡು ಶಿವಣ್ಣ ಅವರು ತಾಲ್ಲೂಕಿಗೆ ಹೇಮೆ ಹರಿಸಲು ವಿರೋಧ ವ್ಯಕ್ತಪಡಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. 2010ರಲ್ಲಿ ಮದಲೂರು ಕೆರೆ ಯೋಜನೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು ಎಂದು ಹೇಳಿದರು.</p>.<p>ಬಿಜೆಪಿ ಹಣದ ಹೊಳೆ ಹರಿಸಿ ಚುನಾವಣೆಯಲ್ಲಿ ಗೆಲ್ಲುವ ಹುಮ್ಮಸ್ಸಿನಲ್ಲಿದೆ. ಆದರೆ ಜನರ ಪ್ರೀತಿ, ಅಭಿಮಾನ ಕುಮಾರಸ್ವಾಮಿ ಮೇಲಿದೆ ಎಂದರು.</p>.<p>ಜೆಡಿಎಸ್ನಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ. ಸ್ಥಳೀಯ ಅಭ್ಯರ್ಥಿ ಯಾರೇ ಇದ್ದರೂ ನಮಗೆ ಎಚ್.ಡಿ. ಕುಮಾರಸ್ವಾಮಿಯೇ ಅಭ್ಯರ್ಥಿ ಎಂದು ಕೆಲಸ ಮಾಡುತ್ತೇವೆ ಎಂದರು.</p>.<p>ಶಾಸಕರಾಗಿದ್ದ ಬಿ.ಸತ್ಯನಾರಾಯಣ ಅವರಿಗೆ ಗಾಯಿತ್ರಿ ಜಲಾಶಯದಿಂದ ಶಿರಾಕ್ಕೆ ನೀರು ತರುವ ಕನಸಿತ್ತು. ಈಗ ಭದ್ರಾ ಜಲಾಶಯದ ನೀರು ಬರುವುದರಿಂದ ಶಿರಾಕ್ಕೆ ಪೈಪ್ಲೈನ್ ಮೂಲಕ ನೀರು ತಂದು ಯೋಜನೆಗೆ ಬಿ.ಸತ್ಯನಾರಾಯಣ ಅವರ ಹೆಸರು ಇಡಬೇಕು ಎಂದರು.</p>.<p>ನಿವೃತ್ತ ಪ್ರಾಧ್ಯಾಪಕ ಕಟಾವೀರನಹಳ್ಳಿ ನಾಗರಾಜು, ಗೋಮಾರದಹಳ್ಳಿ ಮಂಜುನಾಥ್, ಮಾರುತಿ, ನಾಗರಾಜು ಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>