<p><strong>ಚಿಕ್ಕನಾಯಕನಹಳ್ಳಿ:</strong> ತಾಲ್ಲೂಕಿನ 22 ಕೆರೆಗಳಿಗೆ ಹೇಮಾವತಿ ಕುಡಿಯುವ ನೀರಿನ ಯೋಜನೆಯ ಚಾನಲ್ ರಕ್ಷಣೆಗಾಗಿ ‘ಕಟ್ ಆಂಡ್ ಕವರ್’ ಮಾಡಲು ಅಗತ್ಯವಿರುವ ₹150 ಕೋಟಿ ಅನುದಾನ ನೀಡುವಂತೆ ಶಾಸಕ ಸಿ.ಬಿ.ಸುರೇಶ್ಬಾಬು ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದರು.</p>.<p>ತಾಲ್ಲೂಕಿನ ಜೆ.ಸಿ. ಪುರ ವ್ಯಾಪ್ತಿಯ ಬಿ.ಪಾಳ್ಯದ ಸಿದ್ದರಾಮೇಶ್ವರ ವಾಕ್ ಮತ್ತು ಶ್ರವಣದೋಷ ಮಕ್ಕಳ ವಸತಿ ಶಾಲೆಗೆ ಗುರುವಾರ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ ನೀಡಿದಾಗ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆಸಿದರು.</p>.<p>ಶಾಸಕರ ಮನವಿ ಆಲಿಸಿದ ಸಚಿವ ಸೋಮಣ್ಣ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಅಭಿವೃದ್ಧಿಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು. ಅಂಗವಿಕಲರ ವಸತಿ ಶಾಲೆ ಅಭಿವೃದ್ಧಿಗೆ ₹50 ಲಕ್ಷ ಅನುದಾನ ನೀಡುತ್ತೇನೆ ಎಂದು ತಿಳಿಸಿದರು.</p>.<p>ತೆಂಗು ಹಾಗೂ ಅಡಿಕೆಗೆ ಪ್ರಧಾನ ಮಂತ್ರಿ ಫಸಲ್ ವಿಮೆ ಯೋಜನೆಯಡಿ ಹವಮಾನ ಆಧಾರಿತ ವಿಮೆ ಸೌಲಭ್ಯಕ್ಕೆ ರೈತರು ಮನವಿ ಮಾಡಿದರು.</p>.<p>ಉಪವಿಭಾಗಾಧಿಕಾರಿ ಸಪ್ತಶ್ರೀ, ಮಾಜಿ ಸಂಸದ ಜಿ.ಎಸ್. ಬಸವರಾಜು, ಪಿಎಲ್ಡಿ ಬ್ಯಾಂಕ್ ಅದ್ಯಕ್ಷ ಎಚ್.ಆರ್.ಶಶಿಧರ್, ಸಿದ್ದರಾಮೇಶ್ವರ ವಾಕ್ ಮತ್ತು ಶ್ರವಣದೋಷ ಮಕ್ಕಳ ವಸತಿ ಶಾಲೆಯ ಕಾರ್ಯದರ್ಶಿ ಸಿದ್ದೇಶ್ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕನಾಯಕನಹಳ್ಳಿ:</strong> ತಾಲ್ಲೂಕಿನ 22 ಕೆರೆಗಳಿಗೆ ಹೇಮಾವತಿ ಕುಡಿಯುವ ನೀರಿನ ಯೋಜನೆಯ ಚಾನಲ್ ರಕ್ಷಣೆಗಾಗಿ ‘ಕಟ್ ಆಂಡ್ ಕವರ್’ ಮಾಡಲು ಅಗತ್ಯವಿರುವ ₹150 ಕೋಟಿ ಅನುದಾನ ನೀಡುವಂತೆ ಶಾಸಕ ಸಿ.ಬಿ.ಸುರೇಶ್ಬಾಬು ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದರು.</p>.<p>ತಾಲ್ಲೂಕಿನ ಜೆ.ಸಿ. ಪುರ ವ್ಯಾಪ್ತಿಯ ಬಿ.ಪಾಳ್ಯದ ಸಿದ್ದರಾಮೇಶ್ವರ ವಾಕ್ ಮತ್ತು ಶ್ರವಣದೋಷ ಮಕ್ಕಳ ವಸತಿ ಶಾಲೆಗೆ ಗುರುವಾರ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ ನೀಡಿದಾಗ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆಸಿದರು.</p>.<p>ಶಾಸಕರ ಮನವಿ ಆಲಿಸಿದ ಸಚಿವ ಸೋಮಣ್ಣ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಅಭಿವೃದ್ಧಿಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು. ಅಂಗವಿಕಲರ ವಸತಿ ಶಾಲೆ ಅಭಿವೃದ್ಧಿಗೆ ₹50 ಲಕ್ಷ ಅನುದಾನ ನೀಡುತ್ತೇನೆ ಎಂದು ತಿಳಿಸಿದರು.</p>.<p>ತೆಂಗು ಹಾಗೂ ಅಡಿಕೆಗೆ ಪ್ರಧಾನ ಮಂತ್ರಿ ಫಸಲ್ ವಿಮೆ ಯೋಜನೆಯಡಿ ಹವಮಾನ ಆಧಾರಿತ ವಿಮೆ ಸೌಲಭ್ಯಕ್ಕೆ ರೈತರು ಮನವಿ ಮಾಡಿದರು.</p>.<p>ಉಪವಿಭಾಗಾಧಿಕಾರಿ ಸಪ್ತಶ್ರೀ, ಮಾಜಿ ಸಂಸದ ಜಿ.ಎಸ್. ಬಸವರಾಜು, ಪಿಎಲ್ಡಿ ಬ್ಯಾಂಕ್ ಅದ್ಯಕ್ಷ ಎಚ್.ಆರ್.ಶಶಿಧರ್, ಸಿದ್ದರಾಮೇಶ್ವರ ವಾಕ್ ಮತ್ತು ಶ್ರವಣದೋಷ ಮಕ್ಕಳ ವಸತಿ ಶಾಲೆಯ ಕಾರ್ಯದರ್ಶಿ ಸಿದ್ದೇಶ್ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>