<p><strong>ಶಿರಾ:</strong> ತಾಲ್ಲೂಕಿನ ಕಳ್ಳಂಬೆಳ್ಳ ಕೆರೆಯಿಂದ ಮದಲೂರು ಕೆರೆಗೆ ನೀರು ಹರಿಸಲು ಶುಕ್ರವಾರ ಚಾಲನೆ ನೀಡಲಾಯಿತು.</p><p>ತಾಲ್ಲೂಕಿನಲ್ಲಿ ಈ ಬಾರಿ ಮಳೆ ಬರದಿದ್ದರೂ ಹೇಮಾವತಿ ನೀರಿನಿಂದ ಶಿರಾ ದೊಡ್ಡ ಕೆರೆ ಹಾಗೂ ಕಳ್ಳಂಬೆಳ್ಳ ಕೆರೆ ಭರ್ತಿಯಾದ ಹಿನ್ನಲೆಯಲ್ಲಿ ಮದಲೂರು ಹಾಗೂ ಮಾರ್ಗ ಮಧ್ಯದ 11 ಕೆರೆಗಳಿಗೆ ನೀರು ಹರಿಸಲು ಶುಕ್ರವಾರ ಶಾಸಕ ಟಿ.ಬಿ.ಜಯಚಂದ್ರ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಚಾಲನೆ ನೀಡಿದರು.</p><p>ಕಳ್ಳಂಬೆಳ್ಳ ಕೆರೆಯಿಂದ ಮದಲೂರು ಕೆರೆಗೆ ₹59.85 ಕೋಟಿ ವೆಚ್ಚದಲ್ಲಿ 32 ಕಿ.ಮೀ ಉದ್ದದ ನಾಲೆ ನಿರ್ಮಿಸಲಾಗಿದೆ.</p><p>ಕಳೆದ ನಾಲ್ಕು ಚುನಾವಣೆಯಲ್ಲಿ ಇದು ತಾಲ್ಲೂಕಿನ ಮಟ್ಟಿಗೆ ಪ್ರಮುಖ ಚುನಾವಣೆ ಅಸ್ತ್ರವಾಗಿತ್ತು. 2020ರಲ್ಲಿ ನಡೆದ ವಿಧಾನಸಭೆಯ ಉಪಚುನಾವಣೆಯಲ್ಲಿ ಮದಲೂರು ಕೆರೆಗೆ ಹೇಮಾವತಿ ಹರಿಸುವ ವಿಚಾರ ಹೆಚ್ಚು ಸದ್ದು ಮಾಡಿ ರಾಜ್ಯದ ಗಮನವನ್ನು ತನ್ನ ಕಡೆ ಸೆಳೆದಿತ್ತು.</p><p>ಕಳೆದ ವರ್ಷ ಮದಲೂರು ಕೆರೆ ಭರ್ತಿಯಾಗಿದ್ದು, ಈ ಬಾರಿ ಸಹ ಕೆರೆ ತುಂಬಿಸುವುದಾಗಿ ಶಾಸಕ ಟಿ.ಬಿ.ಜಯಚಂದ್ರ ಅವರು ಭರವಸೆ ನೀಡಿರುವುದು ಜನರಲ್ಲಿ ಸಂತಸ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ತಾಲ್ಲೂಕಿನ ಕಳ್ಳಂಬೆಳ್ಳ ಕೆರೆಯಿಂದ ಮದಲೂರು ಕೆರೆಗೆ ನೀರು ಹರಿಸಲು ಶುಕ್ರವಾರ ಚಾಲನೆ ನೀಡಲಾಯಿತು.</p><p>ತಾಲ್ಲೂಕಿನಲ್ಲಿ ಈ ಬಾರಿ ಮಳೆ ಬರದಿದ್ದರೂ ಹೇಮಾವತಿ ನೀರಿನಿಂದ ಶಿರಾ ದೊಡ್ಡ ಕೆರೆ ಹಾಗೂ ಕಳ್ಳಂಬೆಳ್ಳ ಕೆರೆ ಭರ್ತಿಯಾದ ಹಿನ್ನಲೆಯಲ್ಲಿ ಮದಲೂರು ಹಾಗೂ ಮಾರ್ಗ ಮಧ್ಯದ 11 ಕೆರೆಗಳಿಗೆ ನೀರು ಹರಿಸಲು ಶುಕ್ರವಾರ ಶಾಸಕ ಟಿ.ಬಿ.ಜಯಚಂದ್ರ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಚಾಲನೆ ನೀಡಿದರು.</p><p>ಕಳ್ಳಂಬೆಳ್ಳ ಕೆರೆಯಿಂದ ಮದಲೂರು ಕೆರೆಗೆ ₹59.85 ಕೋಟಿ ವೆಚ್ಚದಲ್ಲಿ 32 ಕಿ.ಮೀ ಉದ್ದದ ನಾಲೆ ನಿರ್ಮಿಸಲಾಗಿದೆ.</p><p>ಕಳೆದ ನಾಲ್ಕು ಚುನಾವಣೆಯಲ್ಲಿ ಇದು ತಾಲ್ಲೂಕಿನ ಮಟ್ಟಿಗೆ ಪ್ರಮುಖ ಚುನಾವಣೆ ಅಸ್ತ್ರವಾಗಿತ್ತು. 2020ರಲ್ಲಿ ನಡೆದ ವಿಧಾನಸಭೆಯ ಉಪಚುನಾವಣೆಯಲ್ಲಿ ಮದಲೂರು ಕೆರೆಗೆ ಹೇಮಾವತಿ ಹರಿಸುವ ವಿಚಾರ ಹೆಚ್ಚು ಸದ್ದು ಮಾಡಿ ರಾಜ್ಯದ ಗಮನವನ್ನು ತನ್ನ ಕಡೆ ಸೆಳೆದಿತ್ತು.</p><p>ಕಳೆದ ವರ್ಷ ಮದಲೂರು ಕೆರೆ ಭರ್ತಿಯಾಗಿದ್ದು, ಈ ಬಾರಿ ಸಹ ಕೆರೆ ತುಂಬಿಸುವುದಾಗಿ ಶಾಸಕ ಟಿ.ಬಿ.ಜಯಚಂದ್ರ ಅವರು ಭರವಸೆ ನೀಡಿರುವುದು ಜನರಲ್ಲಿ ಸಂತಸ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>