<p><strong>ತಿಪಟೂರು:</strong> ತಾಲ್ಲೂಕಿನಲ್ಲಿ ನಡೆಯುತ್ತಿರುವ ಹೇಮಾವತಿ ನಾಲೆ ಅಭಿವೃದ್ಧಿ ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ. ಈ ನಡುವೆಯೇ ತಡರಾತ್ರಿ ತುಮಕೂರಿನತ್ತ ಹೇಮಾವತಿ ನೀರು ಹರಿದಿದೆ.</p>.<p>ತುಮಕೂರು ನಾಲಾ ವ್ಯಾಪ್ತಿಯ 72 ಕಿ.ಮೀ ನಾಲೆ ಆಧುನೀಕರಣ ಕಾಮಗಾರಿಗೆ 2019ರ ಡಿಸೆಂಬರ್ನಲ್ಲಿ ₹ 475 ಕೋಟಿ ಮಂಜೂರಾಗಿತ್ತು. 2020ರ ಜನವರಿಯಲ್ಲಿ ಆಧುನೀಕರಣ ಕಾಮಗಾರಿಗೆ ಭೂಮಿಪೂಜೆ ನಡೆದಿತ್ತು.</p>.<p>70ರಿಂದ 166 ಕಿ.ಮೀ ವರೆಗಿನ ನಾಲೆ ಆಧುನೀಕರಣ ಕಾಮಗಾರಿಗೆ ₹ 550 ಕೋಟಿ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಹ ಸಲ್ಲಿಸಲಾಗಿದೆ.</p>.<p>ನಾಲೆಯಲ್ಲಿ ಹೂಳು ತುಂಬಿತ್ತು. ಸುತ್ತಮುತ್ತ ಗಿಡಗಂಟಿಗಳು ಬೆಳೆದಿದ್ದವು. ಇವುಗಳನ್ನು ತೆರವುಗೊಳಿಸಿ ನಾಲೆ ಅಭಿವೃದ್ಧಿಗೊಳಿಸಿದರೆ ನೀರು ಸರಾಗವಾಗಿ ಹರಿಯುತ್ತದೆ. ಪೋಲಾಗುವುದಿಲ್ಲ ಎನ್ನುವ ಉದ್ದೇಶದಿಂದ ನಾಲೆ ಆಧುನೀಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು.</p>.<p>ಮಳೆಗಾಲದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುತ್ತದೆ ಎಂದುಕೊಂಡಿದ್ದರು. ಕಾಮಗಾರಿ ಪೂರ್ಣಗೊಳ್ಳದ ಕಾರಣ ಹಲವು ಗ್ರಾಮಗಳ ಬಳಿ ನಾಲೆ ಸೋರಿಕೆ ಆರಂಭವಾಗಿದೆ. ಬಿರುಕುಬಿಡುವ ಸಾಧ್ಯತೆ ಹೆಚ್ಚಾಗಿದೆ. ಇದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.</p>.<p>ತಾಲ್ಲೂಕಿನ ಕಲ್ಲಯ್ಯನಪಾಳ್ಯ, ನಾರಸೀಕಟ್ಟೆ (ನಾಸೀಕಟ್ಟ್ಟೆ), ಹೋಗವನಘಟ್ಟ, ರಾಮಡಿಹಳ್ಳಿ, ಹುಚ್ಚನಹಳ್ಳಿ ಗ್ರಾಮದ ಬಳಿ ಕಾಮಗಾರಿ ಅಪೂರ್ಣವಾಗಿದೆ. ಈಗಾಗಲೇ ನಾಲೆಯಲ್ಲಿ ನೀರು ಹರಿಯಲು ಪ್ರಾರಂಭಿಸಿದೆ. ನೀರಿನ ಸೋರಿಕೆಯೂ ಹೆಚ್ಚಾಗಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.</p>.<p>ಗುತ್ತಿಗೆದಾರರು ಮತ್ತು ಎಂಜಿನಿಯರ್ಗಳ ನಿರ್ಲಕ್ಷ್ಯದಿಂದ ನಾಲೆ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದೆ. ನಾಲೆಯ ಹಲವು ಕಡೆ ಹೂಳು ತೆಗೆದಿಲ್ಲ. ಹೋಗವನಘಟ್ಟದಿಂದ ದಾಸಿಹಳ್ಳಿ ರಸ್ತೆ ಮಧ್ಯದಲ್ಲಿರುವ ಸೇತುವೆಯ ಬಲಭಾಗದಲ್ಲಿ 200 ಮೀಟರ್ ಕಾಮಗಾರಿ ಅಪೂರ್ಣಗೊಂಡಿದೆ ಎನ್ನುತ್ತಾರೆ ಸ್ಥಳೀಯರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ತಾಲ್ಲೂಕಿನಲ್ಲಿ ನಡೆಯುತ್ತಿರುವ ಹೇಮಾವತಿ ನಾಲೆ ಅಭಿವೃದ್ಧಿ ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ. ಈ ನಡುವೆಯೇ ತಡರಾತ್ರಿ ತುಮಕೂರಿನತ್ತ ಹೇಮಾವತಿ ನೀರು ಹರಿದಿದೆ.</p>.<p>ತುಮಕೂರು ನಾಲಾ ವ್ಯಾಪ್ತಿಯ 72 ಕಿ.ಮೀ ನಾಲೆ ಆಧುನೀಕರಣ ಕಾಮಗಾರಿಗೆ 2019ರ ಡಿಸೆಂಬರ್ನಲ್ಲಿ ₹ 475 ಕೋಟಿ ಮಂಜೂರಾಗಿತ್ತು. 2020ರ ಜನವರಿಯಲ್ಲಿ ಆಧುನೀಕರಣ ಕಾಮಗಾರಿಗೆ ಭೂಮಿಪೂಜೆ ನಡೆದಿತ್ತು.</p>.<p>70ರಿಂದ 166 ಕಿ.ಮೀ ವರೆಗಿನ ನಾಲೆ ಆಧುನೀಕರಣ ಕಾಮಗಾರಿಗೆ ₹ 550 ಕೋಟಿ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಹ ಸಲ್ಲಿಸಲಾಗಿದೆ.</p>.<p>ನಾಲೆಯಲ್ಲಿ ಹೂಳು ತುಂಬಿತ್ತು. ಸುತ್ತಮುತ್ತ ಗಿಡಗಂಟಿಗಳು ಬೆಳೆದಿದ್ದವು. ಇವುಗಳನ್ನು ತೆರವುಗೊಳಿಸಿ ನಾಲೆ ಅಭಿವೃದ್ಧಿಗೊಳಿಸಿದರೆ ನೀರು ಸರಾಗವಾಗಿ ಹರಿಯುತ್ತದೆ. ಪೋಲಾಗುವುದಿಲ್ಲ ಎನ್ನುವ ಉದ್ದೇಶದಿಂದ ನಾಲೆ ಆಧುನೀಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು.</p>.<p>ಮಳೆಗಾಲದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುತ್ತದೆ ಎಂದುಕೊಂಡಿದ್ದರು. ಕಾಮಗಾರಿ ಪೂರ್ಣಗೊಳ್ಳದ ಕಾರಣ ಹಲವು ಗ್ರಾಮಗಳ ಬಳಿ ನಾಲೆ ಸೋರಿಕೆ ಆರಂಭವಾಗಿದೆ. ಬಿರುಕುಬಿಡುವ ಸಾಧ್ಯತೆ ಹೆಚ್ಚಾಗಿದೆ. ಇದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.</p>.<p>ತಾಲ್ಲೂಕಿನ ಕಲ್ಲಯ್ಯನಪಾಳ್ಯ, ನಾರಸೀಕಟ್ಟೆ (ನಾಸೀಕಟ್ಟ್ಟೆ), ಹೋಗವನಘಟ್ಟ, ರಾಮಡಿಹಳ್ಳಿ, ಹುಚ್ಚನಹಳ್ಳಿ ಗ್ರಾಮದ ಬಳಿ ಕಾಮಗಾರಿ ಅಪೂರ್ಣವಾಗಿದೆ. ಈಗಾಗಲೇ ನಾಲೆಯಲ್ಲಿ ನೀರು ಹರಿಯಲು ಪ್ರಾರಂಭಿಸಿದೆ. ನೀರಿನ ಸೋರಿಕೆಯೂ ಹೆಚ್ಚಾಗಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.</p>.<p>ಗುತ್ತಿಗೆದಾರರು ಮತ್ತು ಎಂಜಿನಿಯರ್ಗಳ ನಿರ್ಲಕ್ಷ್ಯದಿಂದ ನಾಲೆ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದೆ. ನಾಲೆಯ ಹಲವು ಕಡೆ ಹೂಳು ತೆಗೆದಿಲ್ಲ. ಹೋಗವನಘಟ್ಟದಿಂದ ದಾಸಿಹಳ್ಳಿ ರಸ್ತೆ ಮಧ್ಯದಲ್ಲಿರುವ ಸೇತುವೆಯ ಬಲಭಾಗದಲ್ಲಿ 200 ಮೀಟರ್ ಕಾಮಗಾರಿ ಅಪೂರ್ಣಗೊಂಡಿದೆ ಎನ್ನುತ್ತಾರೆ ಸ್ಥಳೀಯರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>