ಪಟ್ಟನಾಯಕನಹಳ್ಳಿ: ಕೇಂದ್ರ ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ ನಡೆಸಿದ ಕೃಷಿ ಸಂಶೋಧನಾ ಸೇವೆ (ಎಆರ್ಎಸ್) ಪರೀಕ್ಷೆಯಲ್ಲಿ ಶಿರಾ ತಾಲ್ಲೂಕಿನ ಗೌಡಗೆರೆ ಹೋಬಳಿ ಹೆಂದೊರೆ ಗ್ರಾಮದ ಎಚ್.ಆರ್. ರಾಘವೇಂದ್ರ ಆಯ್ಕೆಯಾಗಿದ್ದಾರೆ.
ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿರುವ ಅವರು ಜೂನಿಯರ್ ರಿಸರ್ಚ್ ಫೆಲೋಶಿಪ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಬಳಿಕ ಕೊಯ್ಲೋತ್ತರ ತಂತ್ರಜ್ಞಾನ ವಿಭಾಗದಲ್ಲಿ ಸಾತ್ನಕೋತ್ತರ ಪದವಿ ಪಡೆದು, ಈಗ ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಕೇಂದ್ರದಲ್ಲಿ ಪಿಎಚ್.ಡಿ ಮಾಡುತ್ತಿದ್ದಾರೆ.