<p><strong>ಬೆಂಗಳೂರು</strong>: ‘ತುಮಕೂರು ನಗರದ ರಸ್ತೆಗಳಲ್ಲಿ ಉಂಟಾಗಿರುವ ಅಪಾಯಕಾರಿ ಗುಂಡಿಗಳನ್ನು ಮುಚ್ಚಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ’ ಎಂದು ತುಮಕೂರು ಮಹಾನಗರ ಪಾಲಿಕೆ ಹೈಕೋರ್ಟ್ಗೆ ತಿಳಿಸಿದೆ.</p>.<p>ಈ ಸಂಬಂಧ ವಕೀಲ ಎಲ್.ರಮೇಶ್ ನಾಯಕ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ತುಮಕೂರು ಪಾಲಿಕೆ ಪರ ಹಾಜರಿದ್ದ ಆರ್.ಸುಬ್ರಹ್ಮಣ್ಯ, ಸ್ಥಳ ಪರಿಶೀಲನೆ ನಡೆಸಿ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಈ ಹಿಂದೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಲಯ ನೀಡಿದ್ದ ನಿರ್ದೇಶನದ ಅನುಸಾರ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ನೀಡಿದರು.</p>.<p>‘ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಪಾಲಿಕೆಯ ಅಧಿಕಾರಿಗಳ ತಂಡದ ಜೊತೆಗೆ ಸ್ಥಳ ಪರಿಶೀಲನೆ ನಡೆಸಿದೆ. 38 ಕಡೆ ಭೇಟಿ ನೀಡಿ ಪರಿಶೀಲಿಸಲಾಗಿದ್ದು, ಆ ಪೈಕಿ 37 ಕಡೆ ರಸ್ತೆಗಳಲ್ಲಿ ಗುಂಡಿಗಳು ಕಂಡು ಬಂದಿವೆ’ ಎಂದು ವಿವರಿಸಿದರು.</p>.<p>ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಪಾಲಿಕೆ ವರದಿ ಆಧರಿಸಿ ಮತ್ತೊಮ್ಮೆ ಸ್ಥಳ ಪರಿಶೀಲನೆ ನಡೆಸಿ ಎರಡು ವಾರಗಳಲ್ಲಿ ಹೊಸದಾಗಿ ವರದಿ ಸಲ್ಲಿಸುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ಫೆಬ್ರುವರಿ 2ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ತುಮಕೂರು ನಗರದ ರಸ್ತೆಗಳಲ್ಲಿ ಉಂಟಾಗಿರುವ ಅಪಾಯಕಾರಿ ಗುಂಡಿಗಳನ್ನು ಮುಚ್ಚಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ’ ಎಂದು ತುಮಕೂರು ಮಹಾನಗರ ಪಾಲಿಕೆ ಹೈಕೋರ್ಟ್ಗೆ ತಿಳಿಸಿದೆ.</p>.<p>ಈ ಸಂಬಂಧ ವಕೀಲ ಎಲ್.ರಮೇಶ್ ನಾಯಕ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ತುಮಕೂರು ಪಾಲಿಕೆ ಪರ ಹಾಜರಿದ್ದ ಆರ್.ಸುಬ್ರಹ್ಮಣ್ಯ, ಸ್ಥಳ ಪರಿಶೀಲನೆ ನಡೆಸಿ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಈ ಹಿಂದೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಲಯ ನೀಡಿದ್ದ ನಿರ್ದೇಶನದ ಅನುಸಾರ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ನೀಡಿದರು.</p>.<p>‘ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಪಾಲಿಕೆಯ ಅಧಿಕಾರಿಗಳ ತಂಡದ ಜೊತೆಗೆ ಸ್ಥಳ ಪರಿಶೀಲನೆ ನಡೆಸಿದೆ. 38 ಕಡೆ ಭೇಟಿ ನೀಡಿ ಪರಿಶೀಲಿಸಲಾಗಿದ್ದು, ಆ ಪೈಕಿ 37 ಕಡೆ ರಸ್ತೆಗಳಲ್ಲಿ ಗುಂಡಿಗಳು ಕಂಡು ಬಂದಿವೆ’ ಎಂದು ವಿವರಿಸಿದರು.</p>.<p>ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಪಾಲಿಕೆ ವರದಿ ಆಧರಿಸಿ ಮತ್ತೊಮ್ಮೆ ಸ್ಥಳ ಪರಿಶೀಲನೆ ನಡೆಸಿ ಎರಡು ವಾರಗಳಲ್ಲಿ ಹೊಸದಾಗಿ ವರದಿ ಸಲ್ಲಿಸುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ಫೆಬ್ರುವರಿ 2ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>