ತಿಪಟೂರು: ರಾಷ್ಟ್ರೀಯ ಹೆದ್ದಾರಿ–206( ತುಮಕೂರು–ಹೊನ್ನಾವರ ವಿಭಾಗ) ಚತುಷ್ಪಥ ರಸ್ತೆ ಮತ್ತು ಬೈಪಾಸ್ ರಸ್ತೆ ನಿರ್ಮಾಣಕ್ಕೆ ಭೂಸ್ವಾಧೀನಪಡಿಸಿಕೊಂಡಿದ್ದು, ನ್ಯಾಯಯುತ ಪರಿಹಾರಕ್ಕೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರೂ ಸ್ಪಂದಿಸದೇ ತೆರಳಿದ್ದಾರೆ ಎಂದು ಆರೋಪಿಸಿ ರಾಷ್ಟ್ರೀಯ ಹೆದ್ದಾರಿ–206 ಸಂತ್ರಸ್ತರ ಹೋರಾಟ ಸಮಿತಿ, ರೈತ ಕೃಷಿ ಕಾರ್ಮಿಕರ ಸಂಘಟನೆ, ರೈತ ಸಂಘಟನೆ ಮುಖಂಡರು, ರೈತರು ಆಕ್ರೋಶ ವ್ಯಕ್ತಪಡಿಸಿದರು.