<p><strong>ತುಮಕೂರು:</strong> ಹಿಂದೂ ಮಹಾಗಣಪತಿ ಸ್ವಾಗತ ಸಮಿತಿಯಿಂದ ನಗರದ ಬಿಜಿಎಸ್ ವೃತ್ತದ ಬಳಿಯ ನಾಗರಕಟ್ಟೆ ಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ದಿನ ಸೆ. 7ರಂದು ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ.</p>.<p>‘6 ವರ್ಷದಿಂದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಗಣಪತಿ ಉತ್ಸವ ಆಚರಿಸಲಾಗುತ್ತಿದೆ. ಹಿಂದೂಗಳಲ್ಲಿ ಸಾಮರಸ್ಯ ಹಾಗೂ ರಾಷ್ಟ್ರೀಯ ಭಾವನೆ ಮೂಡಿಸಲು ಹಬ್ಬ ಆಚರಿಸಲಾಗುತ್ತಿದೆ’ ಎಂದು ಮಹಾಗಣಪತಿ ಸ್ವಾಗತ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್ ಇಲ್ಲಿ ಗುರುವಾರ ತಿಳಿಸಿದರು.</p>.<p>15 ದಿನಗಳ ಕಾಲ ಗಣೇಶ ಉತ್ಸವ ನಡೆಯಲಿದೆ. ಪ್ರತಿ ದಿನ ವಿಶೇಷ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ. ಸೆ. 21ರಂದು ವಿಸರ್ಜನಾ ಮೆರವಣಿಗೆ ಅದ್ದೂರಿಯಾಗಿ ನೆರವೇರಲಿದೆ. ಜಿಲ್ಲೆಯ ಸಮಸ್ತ ಹಿಂದೂ ಸಮಾಜದವರ ಸಹಭಾಗಿತ್ವದಲ್ಲಿ ಹಲವು ಕಾರ್ಯಗಳು ನಡೆಯಲಿವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ಮುಖಂಡರಾದ ಕೋರಿ ಮಂಜುನಾಥ್, ಜಿ.ಕೆ.ಶ್ರೀನಿವಾಸ್, ಆರ್.ಎಲ್.ರಮೇಶ್ಬಾಬು, ಡಿ.ಸಿ.ನರಸಿಂಹಮೂರ್ತಿ, ಪುರುಷೋತ್ತಮ್, ಮಾರಣ್ಣ ಪಾಳೇಗಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಹಿಂದೂ ಮಹಾಗಣಪತಿ ಸ್ವಾಗತ ಸಮಿತಿಯಿಂದ ನಗರದ ಬಿಜಿಎಸ್ ವೃತ್ತದ ಬಳಿಯ ನಾಗರಕಟ್ಟೆ ಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ದಿನ ಸೆ. 7ರಂದು ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ.</p>.<p>‘6 ವರ್ಷದಿಂದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಗಣಪತಿ ಉತ್ಸವ ಆಚರಿಸಲಾಗುತ್ತಿದೆ. ಹಿಂದೂಗಳಲ್ಲಿ ಸಾಮರಸ್ಯ ಹಾಗೂ ರಾಷ್ಟ್ರೀಯ ಭಾವನೆ ಮೂಡಿಸಲು ಹಬ್ಬ ಆಚರಿಸಲಾಗುತ್ತಿದೆ’ ಎಂದು ಮಹಾಗಣಪತಿ ಸ್ವಾಗತ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್ ಇಲ್ಲಿ ಗುರುವಾರ ತಿಳಿಸಿದರು.</p>.<p>15 ದಿನಗಳ ಕಾಲ ಗಣೇಶ ಉತ್ಸವ ನಡೆಯಲಿದೆ. ಪ್ರತಿ ದಿನ ವಿಶೇಷ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ. ಸೆ. 21ರಂದು ವಿಸರ್ಜನಾ ಮೆರವಣಿಗೆ ಅದ್ದೂರಿಯಾಗಿ ನೆರವೇರಲಿದೆ. ಜಿಲ್ಲೆಯ ಸಮಸ್ತ ಹಿಂದೂ ಸಮಾಜದವರ ಸಹಭಾಗಿತ್ವದಲ್ಲಿ ಹಲವು ಕಾರ್ಯಗಳು ನಡೆಯಲಿವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ಮುಖಂಡರಾದ ಕೋರಿ ಮಂಜುನಾಥ್, ಜಿ.ಕೆ.ಶ್ರೀನಿವಾಸ್, ಆರ್.ಎಲ್.ರಮೇಶ್ಬಾಬು, ಡಿ.ಸಿ.ನರಸಿಂಹಮೂರ್ತಿ, ಪುರುಷೋತ್ತಮ್, ಮಾರಣ್ಣ ಪಾಳೇಗಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>