<p>ತುಮಕೂರು: ಪೊಲೀಸರಿಗೆ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿರುವ ಗೃಹರಕ್ಷಕ ದಳದ ಕಾರ್ಯ ಶ್ಲಾಘನೀಯ ಎಂದು ಏಳನೇ ಅಧಿಕ ಜಿಲ್ಲಾ ನ್ಯಾಯಾಧೀಶರಾದ ಎಸ್.ಸುಧೀಂದ್ರನಾಥ್ ಅಭಿಪ್ರಾಯಪಟ್ಟರು.</p>.<p>ಜಿಲ್ಲಾ ಗೃಹರಕ್ಷಕ ದಳದಿಂದ ಹಮ್ಮಿಕೊಂಡಿದ್ದ ಗೃಹರಕ್ಷಕ ದಳದದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಸಮಾಜದಲ್ಲಿ ಫಲಾಪೇಕ್ಷೆ ಹಾಗೂ ದಬ್ಬಾಳಿಕೆ ಇಲ್ಲದೆ ಸ್ವಯಂ ಪ್ರೇರಿತರಾಗಿ ಸಮಾಜ ಸೇವೆ ಮಾಡುತ್ತಿದ್ದು, ಇತರರಿಗೆ ಮಾದರಿ<br />ಯಾಗಿದ್ದಾರೆ’ ಎಂದು ಸ್ಮರಿಸಿದರು.</p>.<p>ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ್, ‘ಶಿರಾ ಉಪಚುನಾವಣೆ, ಕೋವಿಡ್-19 ಲಾಕ್ಡೌನ್, ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ಪೊಲೀಸರಿಗೆ ಹೆಗಲುಕೊಟ್ಟು ಗೃಹರಕ್ಷಕರು ಕೆಲಸ ನಿರ್ವಹಿಸಿದ್ದಾರೆ’ ಎಂದು ನೆನಪಿಸಿಕೊಂಡರು.</p>.<p>ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಹಾಲಿಂಗಪ್ಪ ಎಸ್.ಲಂಗೋಟಿ, ‘ಗೃಹರಕ್ಷಕ ದಳ, ಅಗ್ನಿಶಾಮಕ, ಪೊಲೀಸರು ಕೂಡಿ ಕರ್ತವ್ಯ ನಿರ್ವಹಿಸಿದರೆ ಸಮಾಜದಲ್ಲಿ ಉತ್ತಮ ಫಲಿತಾಂಶ ಕಾಣಬಹುದು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಆರ್.ಪಾತಣ್ಣ, ‘ಪೊಲೀಸರ ಜತೆಯಲ್ಲಿ ಗೃಹರಕ್ಷಕರೂ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಸಮಾಜದಲ್ಲಿ ಶಿಸ್ತು ಕಾಪಾಡಲು ಶ್ರಮಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>ಪ್ರಭಾರ ಘಟಕಾಧಿಕಾರಿ ಪ್ರಕಾಶ್ ಮೂರ್ತಿ ಗೃಹರಕ್ಷಕ ದಳದ ವಾರ್ಷಿಕ ಕಾರ್ಯನಿರ್ವಹಣೆಯ ವರದಿ ಮಂಡಿಸಿದರು. ಸಹಾಯಕ ಬೋಧಕ ವೈ.ಎನ್.ಸುರೇಶ್ ಪ್ರತಿಜ್ಞಾ ವಿಧಿ ಬೋಧಿಸಿದರು.</p>.<p>ಡಿವೈಎಸ್ಪಿ ತಿಪ್ಪೇಸ್ವಾಮಿ, ನಿವೃತ್ತ ಅಧೀಕ್ಷಕಿ ಎಂ.ಚಂದ್ರಕಲಾ, ಡಿಎಆರ್ ಸಹಾಯಕ ಸಬ್ಇನ್ಸ್ಪೆಕ್ಟರ್ ಸೈಯದ್ ಜಂಷೀರ್, ನಿವೃತ್ತ ಗೃಹರಕ್ಷಕರಾದ ರಂಗಸ್ವಾಮಿಗೌಡ, ಎಚ್.ಮುದ್ದಯ್ಯ, ಚಂದ್ರಪ್ಪ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಪೊಲೀಸರಿಗೆ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿರುವ ಗೃಹರಕ್ಷಕ ದಳದ ಕಾರ್ಯ ಶ್ಲಾಘನೀಯ ಎಂದು ಏಳನೇ ಅಧಿಕ ಜಿಲ್ಲಾ ನ್ಯಾಯಾಧೀಶರಾದ ಎಸ್.ಸುಧೀಂದ್ರನಾಥ್ ಅಭಿಪ್ರಾಯಪಟ್ಟರು.</p>.<p>ಜಿಲ್ಲಾ ಗೃಹರಕ್ಷಕ ದಳದಿಂದ ಹಮ್ಮಿಕೊಂಡಿದ್ದ ಗೃಹರಕ್ಷಕ ದಳದದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಸಮಾಜದಲ್ಲಿ ಫಲಾಪೇಕ್ಷೆ ಹಾಗೂ ದಬ್ಬಾಳಿಕೆ ಇಲ್ಲದೆ ಸ್ವಯಂ ಪ್ರೇರಿತರಾಗಿ ಸಮಾಜ ಸೇವೆ ಮಾಡುತ್ತಿದ್ದು, ಇತರರಿಗೆ ಮಾದರಿ<br />ಯಾಗಿದ್ದಾರೆ’ ಎಂದು ಸ್ಮರಿಸಿದರು.</p>.<p>ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ್, ‘ಶಿರಾ ಉಪಚುನಾವಣೆ, ಕೋವಿಡ್-19 ಲಾಕ್ಡೌನ್, ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ಪೊಲೀಸರಿಗೆ ಹೆಗಲುಕೊಟ್ಟು ಗೃಹರಕ್ಷಕರು ಕೆಲಸ ನಿರ್ವಹಿಸಿದ್ದಾರೆ’ ಎಂದು ನೆನಪಿಸಿಕೊಂಡರು.</p>.<p>ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಹಾಲಿಂಗಪ್ಪ ಎಸ್.ಲಂಗೋಟಿ, ‘ಗೃಹರಕ್ಷಕ ದಳ, ಅಗ್ನಿಶಾಮಕ, ಪೊಲೀಸರು ಕೂಡಿ ಕರ್ತವ್ಯ ನಿರ್ವಹಿಸಿದರೆ ಸಮಾಜದಲ್ಲಿ ಉತ್ತಮ ಫಲಿತಾಂಶ ಕಾಣಬಹುದು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಆರ್.ಪಾತಣ್ಣ, ‘ಪೊಲೀಸರ ಜತೆಯಲ್ಲಿ ಗೃಹರಕ್ಷಕರೂ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಸಮಾಜದಲ್ಲಿ ಶಿಸ್ತು ಕಾಪಾಡಲು ಶ್ರಮಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>ಪ್ರಭಾರ ಘಟಕಾಧಿಕಾರಿ ಪ್ರಕಾಶ್ ಮೂರ್ತಿ ಗೃಹರಕ್ಷಕ ದಳದ ವಾರ್ಷಿಕ ಕಾರ್ಯನಿರ್ವಹಣೆಯ ವರದಿ ಮಂಡಿಸಿದರು. ಸಹಾಯಕ ಬೋಧಕ ವೈ.ಎನ್.ಸುರೇಶ್ ಪ್ರತಿಜ್ಞಾ ವಿಧಿ ಬೋಧಿಸಿದರು.</p>.<p>ಡಿವೈಎಸ್ಪಿ ತಿಪ್ಪೇಸ್ವಾಮಿ, ನಿವೃತ್ತ ಅಧೀಕ್ಷಕಿ ಎಂ.ಚಂದ್ರಕಲಾ, ಡಿಎಆರ್ ಸಹಾಯಕ ಸಬ್ಇನ್ಸ್ಪೆಕ್ಟರ್ ಸೈಯದ್ ಜಂಷೀರ್, ನಿವೃತ್ತ ಗೃಹರಕ್ಷಕರಾದ ರಂಗಸ್ವಾಮಿಗೌಡ, ಎಚ್.ಮುದ್ದಯ್ಯ, ಚಂದ್ರಪ್ಪ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>