<p><strong>ತುಮಕೂರು:</strong> ಮಧುಬಲೆ (ಹನಿಟ್ರ್ಯಾಪ್) ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಸೇರಿದಂತೆ ಯಾವುದೇ ತನಿಖೆ ನಡೆಸುವುದು ಮುಖ್ಯಮಂತ್ರಿ, ಗೃಹ ಸಚಿವರಿಗೆ ಬಿಟ್ಟ ವಿಚಾರ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಪ್ರಕರಣದ ತನಿಖೆ ನಡೆಯುತ್ತಿದೆ. ಈಗ ಏನು ಮಾತನಾಡುವುದು. ನೋಟಿಸ್ ಕೊಟ್ಟರೆ ಕೊಡಲಿ, ಯಾವ ತನಿಖೆ ಆಗುತ್ತದೋ ಆಗಲಿ. ಕೆಲವು ವಿಚಾರ ಹೇಳಲು ಆಗುವುದಿಲ್ಲ ಎಂದರು.</p>. <p>ನಮ್ನ ಪಕ್ಷ, ಬೇರೆ ಪಕ್ಷದವರು ಪ್ರಯತ್ನ ಮಾಡಿರಬಹುದು. ಬೆಂಗಳೂರು, ಮುಂಬೈನವರೂ ಇರಬಹುದು. ರಾಜಕೀಯೇತರ ವ್ಯಕ್ತಿಗಳು ಮಾಡಿರಬಹುದು. ಯಾರೇ ಮಾಡಿದರೂ ಇದು ಖಂಡನಾರ್ಹ. ಕಾನೂನು ಬಾಹಿರ ಕ್ರಮಕ್ಕೆ ಕುಮ್ಮಕ್ಕು ನೀಡಿದವರಿಗೆ, ಪ್ರಯತ್ನಿಸಿದವರಿಗೆ ದೇವರು ಒಳ್ಳೆಯದು ಮಾಡಲ್ಲ. ಅಂತವರು ಸಾರ್ವಜನಿಕ ಜೀವನದಲ್ಲಿ ಇರಬಾರದು ಎಂದರು.</p>.Karnataka Honey Trap Case | ಮಧುಬಲೆ: ರಾಜ್ಯಸಭೆಯಲ್ಲಿ ಪ್ರಸ್ತಾಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಮಧುಬಲೆ (ಹನಿಟ್ರ್ಯಾಪ್) ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಸೇರಿದಂತೆ ಯಾವುದೇ ತನಿಖೆ ನಡೆಸುವುದು ಮುಖ್ಯಮಂತ್ರಿ, ಗೃಹ ಸಚಿವರಿಗೆ ಬಿಟ್ಟ ವಿಚಾರ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಪ್ರಕರಣದ ತನಿಖೆ ನಡೆಯುತ್ತಿದೆ. ಈಗ ಏನು ಮಾತನಾಡುವುದು. ನೋಟಿಸ್ ಕೊಟ್ಟರೆ ಕೊಡಲಿ, ಯಾವ ತನಿಖೆ ಆಗುತ್ತದೋ ಆಗಲಿ. ಕೆಲವು ವಿಚಾರ ಹೇಳಲು ಆಗುವುದಿಲ್ಲ ಎಂದರು.</p>. <p>ನಮ್ನ ಪಕ್ಷ, ಬೇರೆ ಪಕ್ಷದವರು ಪ್ರಯತ್ನ ಮಾಡಿರಬಹುದು. ಬೆಂಗಳೂರು, ಮುಂಬೈನವರೂ ಇರಬಹುದು. ರಾಜಕೀಯೇತರ ವ್ಯಕ್ತಿಗಳು ಮಾಡಿರಬಹುದು. ಯಾರೇ ಮಾಡಿದರೂ ಇದು ಖಂಡನಾರ್ಹ. ಕಾನೂನು ಬಾಹಿರ ಕ್ರಮಕ್ಕೆ ಕುಮ್ಮಕ್ಕು ನೀಡಿದವರಿಗೆ, ಪ್ರಯತ್ನಿಸಿದವರಿಗೆ ದೇವರು ಒಳ್ಳೆಯದು ಮಾಡಲ್ಲ. ಅಂತವರು ಸಾರ್ವಜನಿಕ ಜೀವನದಲ್ಲಿ ಇರಬಾರದು ಎಂದರು.</p>.Karnataka Honey Trap Case | ಮಧುಬಲೆ: ರಾಜ್ಯಸಭೆಯಲ್ಲಿ ಪ್ರಸ್ತಾಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>