<p><strong>ತುಮಕೂರು</strong>: ತುಮಕೂರು ವಿಶ್ವವಿದ್ಯಾಲಯ ಈ ಬಾರಿ ಸಾಹಿತಿ ಹಂಪನಾ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದೆ. ಸಾಹಿತಿ ಹಂ.ಪ.ನಾಗರಾಜಯ್ಯ, ಉದ್ಯಮಿ, ಮೈಕ್ರೋ ಲ್ಯಾಬ್ಸ್ ಕಂಪನಿ ಮುಖ್ಯಸ್ಥ ದಿಲೀಪ್ ಸುರಾನ ಹಾಗೂ ಪತ್ರಿಕೋದ್ಯಮಿ ಎಸ್.ನಾಗಣ್ಣ ಅವರನ್ನು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಲಾಗಿದೆ.</p>.<p>ವಿಶ್ವವಿದ್ಯಾಲಯದಲ್ಲಿ ಜುಲೈ 8ರಂದು ನಡೆಯುವ 18ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪದವಿ ಪ್ರದಾನ ಮಾಡಲಿದ್ದಾರೆ ಎಂದು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದರು.</p>.<p>ಸಮಿತಿ ರಚನೆ: ಗೌರವ ಡಾಕ್ಟರೇಟ್ಗೆ ಆಯ್ಕೆಯಾಗಿರುವ ಎಸ್.ನಾಗಣ್ಣ ವಿರುದ್ಧ ನ್ಯಾಯಾಲಯಗಳಲ್ಲಿ ಕೆಲವು ಪ್ರಕರಣಗಳು ವಿಚಾರಣೆ ಹಂತದಲ್ಲಿವೆ ಎಂಬ ಬಗ್ಗೆ ಮಾಹಿತಿ ಗೊತ್ತಾಗಿದೆ. ಈ ಬಗ್ಗೆ ವರದಿ ಸಲ್ಲಿಸಲು ಸಮಿತಿ ರಚಿಸಲಾಗುವುದು. ಈ ಸಮಿತಿ ನೀಡುವ ವರದಿಯನ್ನು ತಕ್ಷಣವೇ ರಾಜ್ಯಪಾಲರಿಗೆ ಕಳುಹಿಸಲಾಗುವುದು. ಅವರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.</p>.<p>ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವವರಿಗೆ ಗೌರವ ಡಾಕ್ಟರೇಟ್ ನೀಡುವುದಿಲ್ಲ. ನಾಗಣ್ಣ ವಿರುದ್ಧ ಪ್ರಕರಣಗಳು ಇರುವುದು ಗಮನಕ್ಕೆ ಬಂದಿರಲಿಲ್ಲ. ಆಯ್ಕೆ ಸಮಿತಿ ಕಳುಹಿಸಿದ್ದ ಪಟ್ಟಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ತಕ್ಷಣವೇ ವರದಿ ಸಲ್ಲಿಸಲಾಗುವುದು. ಪ್ರಕರಣಗಳು ಇದ್ದರೆ ಗೌರವ ಡಾಕ್ಟರೇಟ್ಗೆ ಮಾಡಿರುವ ಆಯ್ಕೆ ರದ್ದುಪಡಿಸುವ ಅಧಿಕಾರ ರಾಜ್ಯಪಾಲರಿಗೆ ಇದೆ. ಪದವಿ ಪ್ರದಾನ ಮಾಡಿದ ನಂತರವೂ ವಾಪಸ್ ಪಡೆಯುವ ಅವಕಾಶ ಇದೆ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ತುಮಕೂರು ವಿಶ್ವವಿದ್ಯಾಲಯ ಈ ಬಾರಿ ಸಾಹಿತಿ ಹಂಪನಾ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದೆ. ಸಾಹಿತಿ ಹಂ.ಪ.ನಾಗರಾಜಯ್ಯ, ಉದ್ಯಮಿ, ಮೈಕ್ರೋ ಲ್ಯಾಬ್ಸ್ ಕಂಪನಿ ಮುಖ್ಯಸ್ಥ ದಿಲೀಪ್ ಸುರಾನ ಹಾಗೂ ಪತ್ರಿಕೋದ್ಯಮಿ ಎಸ್.ನಾಗಣ್ಣ ಅವರನ್ನು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಲಾಗಿದೆ.</p>.<p>ವಿಶ್ವವಿದ್ಯಾಲಯದಲ್ಲಿ ಜುಲೈ 8ರಂದು ನಡೆಯುವ 18ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪದವಿ ಪ್ರದಾನ ಮಾಡಲಿದ್ದಾರೆ ಎಂದು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದರು.</p>.<p>ಸಮಿತಿ ರಚನೆ: ಗೌರವ ಡಾಕ್ಟರೇಟ್ಗೆ ಆಯ್ಕೆಯಾಗಿರುವ ಎಸ್.ನಾಗಣ್ಣ ವಿರುದ್ಧ ನ್ಯಾಯಾಲಯಗಳಲ್ಲಿ ಕೆಲವು ಪ್ರಕರಣಗಳು ವಿಚಾರಣೆ ಹಂತದಲ್ಲಿವೆ ಎಂಬ ಬಗ್ಗೆ ಮಾಹಿತಿ ಗೊತ್ತಾಗಿದೆ. ಈ ಬಗ್ಗೆ ವರದಿ ಸಲ್ಲಿಸಲು ಸಮಿತಿ ರಚಿಸಲಾಗುವುದು. ಈ ಸಮಿತಿ ನೀಡುವ ವರದಿಯನ್ನು ತಕ್ಷಣವೇ ರಾಜ್ಯಪಾಲರಿಗೆ ಕಳುಹಿಸಲಾಗುವುದು. ಅವರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.</p>.<p>ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವವರಿಗೆ ಗೌರವ ಡಾಕ್ಟರೇಟ್ ನೀಡುವುದಿಲ್ಲ. ನಾಗಣ್ಣ ವಿರುದ್ಧ ಪ್ರಕರಣಗಳು ಇರುವುದು ಗಮನಕ್ಕೆ ಬಂದಿರಲಿಲ್ಲ. ಆಯ್ಕೆ ಸಮಿತಿ ಕಳುಹಿಸಿದ್ದ ಪಟ್ಟಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ತಕ್ಷಣವೇ ವರದಿ ಸಲ್ಲಿಸಲಾಗುವುದು. ಪ್ರಕರಣಗಳು ಇದ್ದರೆ ಗೌರವ ಡಾಕ್ಟರೇಟ್ಗೆ ಮಾಡಿರುವ ಆಯ್ಕೆ ರದ್ದುಪಡಿಸುವ ಅಧಿಕಾರ ರಾಜ್ಯಪಾಲರಿಗೆ ಇದೆ. ಪದವಿ ಪ್ರದಾನ ಮಾಡಿದ ನಂತರವೂ ವಾಪಸ್ ಪಡೆಯುವ ಅವಕಾಶ ಇದೆ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>