ವ್ಯಾಪಾರಿಗಳು ಹಾಗೂ ರೈತರನ್ನೂ ಸಂಪರ್ಕಿಸುವ ಕೆಲಸವನ್ನು ಮಾಡಲಾಗುವುದು. ಇದಕ್ಕಾಗಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಅಗತ್ಯವಿರುವಷ್ಟು ತರಕಾರಿ, ಹಣ್ಣನ್ನು ಜಿಲ್ಲೆಯಲ್ಲೇ ಮಾರಾಟ ಮಾಡಲಾಗುವುದು. ಉಳಿದಂತೆ ಚಿತ್ರದುರ್ಗ, ಬೆಂಗಳೂರು ಜಿಲ್ಲೆಗಳಿಗೆ ಕಳುಹಿಸಲಾಗುವುದು.