<p><strong>ತುಮಕೂರು: </strong>ತುಮಕೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಲಯದಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು.</p>.<p>ವಸತಿ ನಿಲಯದಲ್ಲಿ 120ಕ್ಕೂ ಅಧಿಕ ವಿದ್ಯಾರ್ಥಿಗಳು ವಾಸವಿದ್ದಾರೆ. ಮುಂಚಿತವಾಗಿಯೇ ಈ ನಿಲಯದಲ್ಲಿ ಇರುವ ಸಮಸ್ಯೆ ಕುರಿತು ಮನವಿ ಸಲ್ಲಿಸಲಾಗಿತ್ತು. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಈ ವಿದ್ಯಾರ್ಥಿನಿಲಯಕ್ಕೆ ಪ್ರತಿ ವಿದ್ಯಾರ್ಥಿಯೂ ವರ್ಷಕ್ಕೆ ₹16 ಸಾವಿರ ಪಾವತಿಸುತ್ತಿದ್ದಾರೆ. ಆದರೂ ಸಂಬಂಧಿಸಿದ ಅಧಿಕಾರಿಗಳು ಮೂಲ ಸೌಕರ್ಯ ಕಲ್ಪಿಸುವಲ್ಲಿ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಇಲ್ಲಿ ಸ್ನಾನಕ್ಕೆ ಹಾಗೂ ಶೌಚಾಲಯಕ್ಕೆ ಬಳಸುವ ನೀರನ್ನು ಅಡುಗೆಗೆ ಬಳಸಲಾಗುತ್ತಿದೆ. ಈ ಹಿಂದೆ ಇದ್ದ ಕೆಲವೊಂದು ಊಟದ ಸೌಲಭ್ಯಗಳನ್ನು ಕಡಿತಗೊಳಿಸಿದ್ದಾರೆ.<br />ಶೌಚಾಲಯದ ಅವ್ಯವಸ್ಥೆಯಿಂದ ಕೂಡಿದೆ. ಕೊಳಾಯಿಗಳು ಹಾಳಾಗಿವೆ. ಸೋಲಾರ್ ಸರಿಯಿಲ್ಲ. ನೀರಿನ ಕೊಳದಲ್ಲಿ ಕ್ರಿಮಿಕೀಟಗಳು ಬಿದ್ದು ನೀರು ಮಲಿನಗೊಳ್ಳುತ್ತಿದೆ ಎಂದು ಆರೋಪಿಸಿದರು.</p>.<p>ಈ ವಿದ್ಯಾರ್ಥಿನಿಲಯದ ಆವರಣದಲ್ಲಿ ಸ್ಥಳೀಯ ಪುಂಡ ಪೋಕರಿಗಳು ಮಾದಕ ವಸ್ತುಗಳನ್ನು ಬಳಸಿ ಬಿಸಾಡಿದ್ದಾರೆ. ಇದನ್ನು ಕುಲಸಚಿವರ ಗಮನಕ್ಕೆ ತಂದರು ಕ್ರಮವನ್ನು ಕೈಗೊಂಡಿಲ್ಲ. ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ನೀಡಿಲ್ಲ. ಅಡುಗೆ ಸಿಬ್ಬಂದಿಗೆ ಅಗತ್ಯವಾದ ಸಾಮಾಗ್ರಿಗಳನ್ನು ನೀಡುತ್ತಿಲ್ಲ. ಈ ವರ್ಷದಲ್ಲಿ ₹14 ಸಾವಿರ ಇದ್ದ ಶುಲ್ಕವನ್ನು ₹16 ಸಾವಿರಕ್ಕೆ ಹೆಚ್ಚಿಸಿದ್ದರೂ ಯಾವುದೇ ಸೌಲಭ್ಯ ನೀಡುತ್ತಿಲ್ಲ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ತುಮಕೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಲಯದಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು.</p>.<p>ವಸತಿ ನಿಲಯದಲ್ಲಿ 120ಕ್ಕೂ ಅಧಿಕ ವಿದ್ಯಾರ್ಥಿಗಳು ವಾಸವಿದ್ದಾರೆ. ಮುಂಚಿತವಾಗಿಯೇ ಈ ನಿಲಯದಲ್ಲಿ ಇರುವ ಸಮಸ್ಯೆ ಕುರಿತು ಮನವಿ ಸಲ್ಲಿಸಲಾಗಿತ್ತು. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಈ ವಿದ್ಯಾರ್ಥಿನಿಲಯಕ್ಕೆ ಪ್ರತಿ ವಿದ್ಯಾರ್ಥಿಯೂ ವರ್ಷಕ್ಕೆ ₹16 ಸಾವಿರ ಪಾವತಿಸುತ್ತಿದ್ದಾರೆ. ಆದರೂ ಸಂಬಂಧಿಸಿದ ಅಧಿಕಾರಿಗಳು ಮೂಲ ಸೌಕರ್ಯ ಕಲ್ಪಿಸುವಲ್ಲಿ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಇಲ್ಲಿ ಸ್ನಾನಕ್ಕೆ ಹಾಗೂ ಶೌಚಾಲಯಕ್ಕೆ ಬಳಸುವ ನೀರನ್ನು ಅಡುಗೆಗೆ ಬಳಸಲಾಗುತ್ತಿದೆ. ಈ ಹಿಂದೆ ಇದ್ದ ಕೆಲವೊಂದು ಊಟದ ಸೌಲಭ್ಯಗಳನ್ನು ಕಡಿತಗೊಳಿಸಿದ್ದಾರೆ.<br />ಶೌಚಾಲಯದ ಅವ್ಯವಸ್ಥೆಯಿಂದ ಕೂಡಿದೆ. ಕೊಳಾಯಿಗಳು ಹಾಳಾಗಿವೆ. ಸೋಲಾರ್ ಸರಿಯಿಲ್ಲ. ನೀರಿನ ಕೊಳದಲ್ಲಿ ಕ್ರಿಮಿಕೀಟಗಳು ಬಿದ್ದು ನೀರು ಮಲಿನಗೊಳ್ಳುತ್ತಿದೆ ಎಂದು ಆರೋಪಿಸಿದರು.</p>.<p>ಈ ವಿದ್ಯಾರ್ಥಿನಿಲಯದ ಆವರಣದಲ್ಲಿ ಸ್ಥಳೀಯ ಪುಂಡ ಪೋಕರಿಗಳು ಮಾದಕ ವಸ್ತುಗಳನ್ನು ಬಳಸಿ ಬಿಸಾಡಿದ್ದಾರೆ. ಇದನ್ನು ಕುಲಸಚಿವರ ಗಮನಕ್ಕೆ ತಂದರು ಕ್ರಮವನ್ನು ಕೈಗೊಂಡಿಲ್ಲ. ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ನೀಡಿಲ್ಲ. ಅಡುಗೆ ಸಿಬ್ಬಂದಿಗೆ ಅಗತ್ಯವಾದ ಸಾಮಾಗ್ರಿಗಳನ್ನು ನೀಡುತ್ತಿಲ್ಲ. ಈ ವರ್ಷದಲ್ಲಿ ₹14 ಸಾವಿರ ಇದ್ದ ಶುಲ್ಕವನ್ನು ₹16 ಸಾವಿರಕ್ಕೆ ಹೆಚ್ಚಿಸಿದ್ದರೂ ಯಾವುದೇ ಸೌಲಭ್ಯ ನೀಡುತ್ತಿಲ್ಲ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>