ನಗರದ ಕಂದಾಯ ವಿಭಾಗದಲ್ಲಿ ಸಾರ್ವಜನಿಕರು ತಮ್ಮ ಸ್ವತ್ತುಗಳಿಗೆ ಪ್ರತಿವರ್ಷವೂ ಕಂದಾಯ ಸಂದಾಯ ಮಾಡಿದ್ದರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಂದಾಯ ಪುಸ್ತಕಕ್ಕೆ ನಮೂದಿಸದೆ ಎರಡೆರಡು ಬಾರಿ ಕಂದಾಯ ಕಟ್ಟುವಂತಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕಂದಾಯ ವಸೂಲಿಯಲ್ಲಿ ದೊಡ್ಡ ಮಟ್ಟದ ಹಗರಣ ನಡೆದಿದ್ದು, ತನಿಖೆ ನಡೆಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.