<p><strong>ಹುಳಿಯಾರು:</strong> ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರು ನೀಡಿದ ಬಲಿದಾನವನ್ನು ಇಂದಿನ ಪೀಳಿಗೆ ಮರೆಯಬಾರದು ಮತ್ತು ಯುವಜನರನಲ್ಲಿ ದೇಶಪ್ರೇಮ ಬೆಳೆಸಲು ಒತ್ತು ನೀಡಲಾಗುವುದು ಎಂದು ದಕ್ಷಿಣ ಪ್ರಾಂತ್ಯ ಬಾಲಗೋಕುಲ ಸಂಯೋಜಕ ಉಮೇಶ್ ತಿಳಿಸಿದರು. </p>.<p>ಪಟ್ಟಣದ ಪ್ರಸನ್ನ ಗಣಪತಿ ದೇಗುಲದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಮತ್ತು ವಿಜಯದಶಮಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಘದ ನೂರು ವರ್ಷಗಳ ಪ್ರಯಾಣವು ದೇಶದ ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಚಿತ್ರಣವನ್ನು ಬದಲಾಯಿಸಿದೆ ಎಂದು ನುಡಿದರು.</p>.<p>ಡಾ.ಕೇಶವ ಬಲಿರಾಂ ಹೆಡಗೇವಾರ್ ಅವರು 1925 ವಿಜಯದಶಮಿ ದಿನ ಸಂಘವನ್ನು ಸ್ಥಾಪಿಸಿದರು. ಹಿಂದೂ ಸಮಾಜವನ್ನು ಬಲಿಷ್ಠಗೊಳಿಸಿ, ಸಂಘಟಿತ ಶಕ್ತಿಯಿಂದ ಸಮಾಜ ರಕ್ಷಣೆ ಕಾರ್ಯ ಮಾಡುವುದು ಅವರ ಉದ್ದೇಶವಾಗಿತ್ತು ಎಂದು ವಿವರಿಸಿದರು.</p>.<p>ಸ್ವಾತಂತ್ರ್ಯ ಹೋರಾಟ, ದೇಶ ವಿಭಜನೆ ಮತ್ತು ತುರ್ತು ಪರಿಸ್ಥಿತಿ ಸಮಯದಲ್ಲಿ ಸಾವಿರಾರು ಸ್ವಯಂ ಸೇವಕರು ಪ್ರಾಣತ್ಯಾಗ ಮಾಡಿದ್ದಾರೆ ಎಂದು ಸ್ಮರಿಸಿದರು.</p>.<p>ಶಾಖೆಗಳು ಕೇವಲ ದೈಹಿಕ ವ್ಯಾಯಾಮದ ಕೇಂದ್ರಗಳಲ್ಲ. ಶ್ಲೋಕ, ದೇಶಭಕ್ತಿ ಗೀತೆಗಳು ಮತ್ತು ಮಹಾಪುರುಷರ ಕಥೆಗಳ ಮೂಲಕ ವ್ಯಕ್ತಿತ್ವ ನಿರ್ಮಾಣದ ಕೇಂದ್ರಗಳು ಎಂದು ಅಭಿಪ್ರಾಯಪಟ್ಟರು.</p>.<p>ಶತಮಾನೋತ್ಸವ ಸಂದರ್ಭದಲ್ಲಿ ಸಂಘ ‘ಪಂಚ ಪರಿವರ್ತನೆ’ ಸಂಕಲ್ಪವನ್ನು ಘೋಷಿಸಿದೆ. ಸ್ವದೇಶಿ ಎಂದರೆ ಕೇವಲ ಸ್ಥಳೀಯ ವಸ್ತುಗಳ ಬಳಕೆ ಮಾತ್ರವಲ್ಲ. ಜೀವನ ಶೈಲಿಯಲ್ಲೂ ಬದಲಾವಣೆ ತರುವುದು. ಮಕ್ಕಳಿಗೆ ಇಂಗ್ಲಿಷ್ ಕಲಿಸುವುದು ತಪ್ಪಿಲ್ಲ. ಆದರೆ, ಮಾತೃಭಾಷೆ ಗೌರವ ಮರೆಯಬಾರದು ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಸನ್ನ ಗಣಪತಿ ಸೇವಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಿ.ಎಸ್.ಮೋಹನ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಳಿಯಾರು:</strong> ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರು ನೀಡಿದ ಬಲಿದಾನವನ್ನು ಇಂದಿನ ಪೀಳಿಗೆ ಮರೆಯಬಾರದು ಮತ್ತು ಯುವಜನರನಲ್ಲಿ ದೇಶಪ್ರೇಮ ಬೆಳೆಸಲು ಒತ್ತು ನೀಡಲಾಗುವುದು ಎಂದು ದಕ್ಷಿಣ ಪ್ರಾಂತ್ಯ ಬಾಲಗೋಕುಲ ಸಂಯೋಜಕ ಉಮೇಶ್ ತಿಳಿಸಿದರು. </p>.<p>ಪಟ್ಟಣದ ಪ್ರಸನ್ನ ಗಣಪತಿ ದೇಗುಲದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಮತ್ತು ವಿಜಯದಶಮಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಘದ ನೂರು ವರ್ಷಗಳ ಪ್ರಯಾಣವು ದೇಶದ ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಚಿತ್ರಣವನ್ನು ಬದಲಾಯಿಸಿದೆ ಎಂದು ನುಡಿದರು.</p>.<p>ಡಾ.ಕೇಶವ ಬಲಿರಾಂ ಹೆಡಗೇವಾರ್ ಅವರು 1925 ವಿಜಯದಶಮಿ ದಿನ ಸಂಘವನ್ನು ಸ್ಥಾಪಿಸಿದರು. ಹಿಂದೂ ಸಮಾಜವನ್ನು ಬಲಿಷ್ಠಗೊಳಿಸಿ, ಸಂಘಟಿತ ಶಕ್ತಿಯಿಂದ ಸಮಾಜ ರಕ್ಷಣೆ ಕಾರ್ಯ ಮಾಡುವುದು ಅವರ ಉದ್ದೇಶವಾಗಿತ್ತು ಎಂದು ವಿವರಿಸಿದರು.</p>.<p>ಸ್ವಾತಂತ್ರ್ಯ ಹೋರಾಟ, ದೇಶ ವಿಭಜನೆ ಮತ್ತು ತುರ್ತು ಪರಿಸ್ಥಿತಿ ಸಮಯದಲ್ಲಿ ಸಾವಿರಾರು ಸ್ವಯಂ ಸೇವಕರು ಪ್ರಾಣತ್ಯಾಗ ಮಾಡಿದ್ದಾರೆ ಎಂದು ಸ್ಮರಿಸಿದರು.</p>.<p>ಶಾಖೆಗಳು ಕೇವಲ ದೈಹಿಕ ವ್ಯಾಯಾಮದ ಕೇಂದ್ರಗಳಲ್ಲ. ಶ್ಲೋಕ, ದೇಶಭಕ್ತಿ ಗೀತೆಗಳು ಮತ್ತು ಮಹಾಪುರುಷರ ಕಥೆಗಳ ಮೂಲಕ ವ್ಯಕ್ತಿತ್ವ ನಿರ್ಮಾಣದ ಕೇಂದ್ರಗಳು ಎಂದು ಅಭಿಪ್ರಾಯಪಟ್ಟರು.</p>.<p>ಶತಮಾನೋತ್ಸವ ಸಂದರ್ಭದಲ್ಲಿ ಸಂಘ ‘ಪಂಚ ಪರಿವರ್ತನೆ’ ಸಂಕಲ್ಪವನ್ನು ಘೋಷಿಸಿದೆ. ಸ್ವದೇಶಿ ಎಂದರೆ ಕೇವಲ ಸ್ಥಳೀಯ ವಸ್ತುಗಳ ಬಳಕೆ ಮಾತ್ರವಲ್ಲ. ಜೀವನ ಶೈಲಿಯಲ್ಲೂ ಬದಲಾವಣೆ ತರುವುದು. ಮಕ್ಕಳಿಗೆ ಇಂಗ್ಲಿಷ್ ಕಲಿಸುವುದು ತಪ್ಪಿಲ್ಲ. ಆದರೆ, ಮಾತೃಭಾಷೆ ಗೌರವ ಮರೆಯಬಾರದು ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಸನ್ನ ಗಣಪತಿ ಸೇವಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಿ.ಎಸ್.ಮೋಹನ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>