<p><strong>ಹುಳಿಯಾರು</strong>: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಸಮುದಾಯ ಭವನಗಳ ನಿರ್ಮಾಣಕ್ಕೆ ₹50 ಲಕ್ಷ ಹಣ ನೀಡಲಾಗಿದೆ. ಇನ್ನುಳಿದ ವೀರಶೈವ ಹಾಗೂ ಒಕ್ಕಲಿಗ ಸಮುದಾಯಕ್ಕೂ ಹಣ ನೀಡಲಾಗುವುದು ಎಂದು ಶಾಸಕ ಸಿ.ಬಿ.ಸುರೇಶ್ಬಾಬು ಹೇಳಿದರು.</p>.<p>ಸಮೀಪದ ದೊಡ್ಡಎಣ್ಣೆಗೆರೆ ಗ್ರಾಮದ ಬಳಿಯ ಬಂಜಾರ ಸಮುದಾಯದ ಭೀಮಾಸತಿ ದೇಗುಲ ಆವರಣದಲ್ಲಿ ಭಾನುವಾರ ಯಾತ್ರಿ ನಿವಾಸ ಕಟ್ಟಡದ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ಭೀಮಾಸತಿ ಕ್ಷೇತ್ರ ರಾಜ್ಯದ ಬಂಜಾರ ಸಮುದಾಯದ ಶಕ್ತಿ ಕೇಂದ್ರವಾಗಿದ್ದು ಮುಂದಿನ ದಿನಗಳಲ್ಲಿ ಧಾರ್ಮಿಕ ಕ್ಷೇತ್ರವಾಗಿ ಪ್ರಬುದ್ಧಮಾನಗೊಳಿಸಲು ತೀರ್ಮಾನಿಸಲಾಗಿದೆ. ಯಾವ ತಾಂಡಾಗಳಿಗೆ ಚರಂಡಿ, ಅಂಗನವಾಡಿ ಸೇರಿದಂತೆ ಯಾವ ಸೌಕರ್ಯಗಳು ಬೇಕು ಎಂಬುದನ್ನು ಪಟ್ಟಿಮಾಡಿ ನೀಡುವಂತೆ ಲಂಬಾಣಿ ಮುಖಂಡರಿಗೆ ತಿಳಿಸಿದರು.</p>.<p>ತಾಲ್ಲೂಕು ಲಂಬಾಣಿ ಸಂಘದ ಮುಖಂಡ ರಘುನಾಥ್ ಮಾತನಾಡಿ, ಭೀಮಾಸತಿ ಕ್ಷೇತ್ರದ ಅಭಿವೃದ್ಧಿಗೆ ಶಾಸಕರು ಒತ್ತು ನೀಡಿದ್ದಾರೆ ಎಂದರು.</p>.<p>ಜಿ.ಪಂ ಮಾಜಿ ಸದಸ್ಯೆ ಲೋಹಿತಾಬಾಯಿ ಮಾತನಾಡಿ, ಶಾವಿಗೆಹಳ್ಳಿ ಬಳಿ ಗುರುತಿಸಿರುವ ಲಂಬಾಣಿ ಸಮುದಾಯದ ಜಾಗದ ಅಭಿವೃದ್ಧಿಗೆ ಶಾಸಕರು ಒತ್ತು ನೀಡಬೇಕು ಎಂದರು.</p>.<p>ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಚೇತನಾ, ರಾಜನಾಯ್ಕ, ತಿಮ್ಮಾನಾಯ್ಕ, ಕರಿಯಾನಾಯ್ಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-17-1210693880</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಳಿಯಾರು</strong>: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಸಮುದಾಯ ಭವನಗಳ ನಿರ್ಮಾಣಕ್ಕೆ ₹50 ಲಕ್ಷ ಹಣ ನೀಡಲಾಗಿದೆ. ಇನ್ನುಳಿದ ವೀರಶೈವ ಹಾಗೂ ಒಕ್ಕಲಿಗ ಸಮುದಾಯಕ್ಕೂ ಹಣ ನೀಡಲಾಗುವುದು ಎಂದು ಶಾಸಕ ಸಿ.ಬಿ.ಸುರೇಶ್ಬಾಬು ಹೇಳಿದರು.</p>.<p>ಸಮೀಪದ ದೊಡ್ಡಎಣ್ಣೆಗೆರೆ ಗ್ರಾಮದ ಬಳಿಯ ಬಂಜಾರ ಸಮುದಾಯದ ಭೀಮಾಸತಿ ದೇಗುಲ ಆವರಣದಲ್ಲಿ ಭಾನುವಾರ ಯಾತ್ರಿ ನಿವಾಸ ಕಟ್ಟಡದ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ಭೀಮಾಸತಿ ಕ್ಷೇತ್ರ ರಾಜ್ಯದ ಬಂಜಾರ ಸಮುದಾಯದ ಶಕ್ತಿ ಕೇಂದ್ರವಾಗಿದ್ದು ಮುಂದಿನ ದಿನಗಳಲ್ಲಿ ಧಾರ್ಮಿಕ ಕ್ಷೇತ್ರವಾಗಿ ಪ್ರಬುದ್ಧಮಾನಗೊಳಿಸಲು ತೀರ್ಮಾನಿಸಲಾಗಿದೆ. ಯಾವ ತಾಂಡಾಗಳಿಗೆ ಚರಂಡಿ, ಅಂಗನವಾಡಿ ಸೇರಿದಂತೆ ಯಾವ ಸೌಕರ್ಯಗಳು ಬೇಕು ಎಂಬುದನ್ನು ಪಟ್ಟಿಮಾಡಿ ನೀಡುವಂತೆ ಲಂಬಾಣಿ ಮುಖಂಡರಿಗೆ ತಿಳಿಸಿದರು.</p>.<p>ತಾಲ್ಲೂಕು ಲಂಬಾಣಿ ಸಂಘದ ಮುಖಂಡ ರಘುನಾಥ್ ಮಾತನಾಡಿ, ಭೀಮಾಸತಿ ಕ್ಷೇತ್ರದ ಅಭಿವೃದ್ಧಿಗೆ ಶಾಸಕರು ಒತ್ತು ನೀಡಿದ್ದಾರೆ ಎಂದರು.</p>.<p>ಜಿ.ಪಂ ಮಾಜಿ ಸದಸ್ಯೆ ಲೋಹಿತಾಬಾಯಿ ಮಾತನಾಡಿ, ಶಾವಿಗೆಹಳ್ಳಿ ಬಳಿ ಗುರುತಿಸಿರುವ ಲಂಬಾಣಿ ಸಮುದಾಯದ ಜಾಗದ ಅಭಿವೃದ್ಧಿಗೆ ಶಾಸಕರು ಒತ್ತು ನೀಡಬೇಕು ಎಂದರು.</p>.<p>ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಚೇತನಾ, ರಾಜನಾಯ್ಕ, ತಿಮ್ಮಾನಾಯ್ಕ, ಕರಿಯಾನಾಯ್ಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-17-1210693880</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>