<p><strong>ಹುಳಿಯಾರು (ಚಿಕ್ಕನಾಯಕನಹಳ್ಳಿ):</strong> ಹೋಬಳಿಯ ಕೆಂಕೆರೆ ಸಮೀಪದ ಗೊಲ್ಲರಹಟ್ಟಿ ಗೇಟ್ ಬಳಿ ಗುರುವಾರ ಮಾರುತಿ ಓಮ್ನಿ ಕಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.</p>.<p>ಆಂಧ್ರ ಪ್ರದೇಶದ ಅದೋನಿಯ ಗಂಗೇಶ್ವರ ರೆಡ್ಡಿ (68), ಪತ್ನಿ ಇಂದಿರಮ್ಮ(63) ಮಗಳು ಸೌಮ್ಯ(39) ಮೃತರು. ಅದೋನಿಯ ರವಿಕುಮಾರ್ (42) ಸಾಫ್ಟ್ವೇರ್ ಎಂಜಿನಿಯರ್. ಪತ್ನಿ, ಅತ್ತೆ, ಮಾವ, ಇಬ್ಬರು ಮಕ್ಕಳ ಜತೆಗೆ ಮೈಸೂರಿಗೆ ಹೋಗಿದ್ದರು.</p>.<p>ಮೈಸೂರಿನಿಂದ ಆದೋನಿ ಕಡೆಗೆ ತೆರಳುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ ಬದಿ ನಿಂತಿದ್ದ ಓಮ್ನಿ ಕಾರು ರಸ್ತೆಗೆ ಹೋಗುವಾಗ ಇದೇ ಮಾರ್ಗದಲ್ಲಿ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆಡಿದೆ. ಓಮ್ನಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಡಿಕ್ಕಿ ಹೊಡೆದ ನಂತರ ಕಾರು ಗುಂಡಿಗೆ ಉರುಳಿ ಬಿದ್ದಿದೆ. ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.</p>.<p>ರವಿಕುಮಾರ್, ಮಕ್ಕಳಾದ ಚಾರ್ವಿ ರೆಡ್ಡಿ (10), ಚರಿತ್ (ರೆಡ್ಡಿ) ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಓಮ್ನಿ ಚಾಲಕನಿಗೆ ಕಾಲು ಮುರಿದಿದೆ. ಹುಳಿಯಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಳಿಯಾರು (ಚಿಕ್ಕನಾಯಕನಹಳ್ಳಿ):</strong> ಹೋಬಳಿಯ ಕೆಂಕೆರೆ ಸಮೀಪದ ಗೊಲ್ಲರಹಟ್ಟಿ ಗೇಟ್ ಬಳಿ ಗುರುವಾರ ಮಾರುತಿ ಓಮ್ನಿ ಕಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.</p>.<p>ಆಂಧ್ರ ಪ್ರದೇಶದ ಅದೋನಿಯ ಗಂಗೇಶ್ವರ ರೆಡ್ಡಿ (68), ಪತ್ನಿ ಇಂದಿರಮ್ಮ(63) ಮಗಳು ಸೌಮ್ಯ(39) ಮೃತರು. ಅದೋನಿಯ ರವಿಕುಮಾರ್ (42) ಸಾಫ್ಟ್ವೇರ್ ಎಂಜಿನಿಯರ್. ಪತ್ನಿ, ಅತ್ತೆ, ಮಾವ, ಇಬ್ಬರು ಮಕ್ಕಳ ಜತೆಗೆ ಮೈಸೂರಿಗೆ ಹೋಗಿದ್ದರು.</p>.<p>ಮೈಸೂರಿನಿಂದ ಆದೋನಿ ಕಡೆಗೆ ತೆರಳುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ ಬದಿ ನಿಂತಿದ್ದ ಓಮ್ನಿ ಕಾರು ರಸ್ತೆಗೆ ಹೋಗುವಾಗ ಇದೇ ಮಾರ್ಗದಲ್ಲಿ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆಡಿದೆ. ಓಮ್ನಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಡಿಕ್ಕಿ ಹೊಡೆದ ನಂತರ ಕಾರು ಗುಂಡಿಗೆ ಉರುಳಿ ಬಿದ್ದಿದೆ. ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.</p>.<p>ರವಿಕುಮಾರ್, ಮಕ್ಕಳಾದ ಚಾರ್ವಿ ರೆಡ್ಡಿ (10), ಚರಿತ್ (ರೆಡ್ಡಿ) ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಓಮ್ನಿ ಚಾಲಕನಿಗೆ ಕಾಲು ಮುರಿದಿದೆ. ಹುಳಿಯಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>