<p>ಹುಳಿಯಾರು: ಪಟ್ಟಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಪ್ರತಿ ಗುರುವಾರ ಗಾಂಧಿಪೇಟೆ ರಸ್ತೆಯಲ್ಲಿ ನಡೆಯುತ್ತಿದ್ದ ತರಕಾರಿ ಸಂತೆಯನ್ನು ಏ. 23ರಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಸಮಿತಿ ಕಾರ್ಯದರ್ಶಿ ಎಂ.ನಾಗೇಂದ್ರಕುಮಾರ್ ತಿಳಿಸಿದರು.</p>.<p>ಗುರುವಾರ ಸಂತೆ ಮೈದಾನಕ್ಕೆ ಭೇಟಿ ನೀಡಿ ಪರಿಶೀಲಿಸಿ ಸ್ಥಳಾಂತರದ ಕುರಿತು ಸಾರ್ವಜನಿಕರು ಹಾಗೂ ರೈತರು ಸಹಕರಿಸಬೇಕೆಂದು ಮನವಿ ಮಾಡಿದರು.</p>.<p>ಪ್ರಥಮ ಹಂತದಲ್ಲಿ 32 ಜನ ತರಕಾರಿ ವ್ಯಾಪಾರಸ್ಥರನ್ನು ಗುರುತಿಸಲಾಗಿದೆ. ಅವರಿಗೆ ಎಪಿಎಂಸಿ ಆವರಣದಲ್ಲಿ ಬಾಕ್ಸ್ ಶೈಲಿಯಲ್ಲಿ ಜಾಗ ಗುರುತು ಮಾಡಿ ಅವಕಾಶ ಕಲ್ಪಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರಸ್ಥರು ಬಂದಲ್ಲಿ ಮುಂದಿನ ದಿನಗಳಲ್ಲಿ ಅವರಿಗೂ ವ್ಯವಸ್ಥೆ ಮಾಡಲಾಗುವುದು ಎಂದರು.</p>.<p>ಸಂತೆ ವ್ಯಾಪಾರಸ್ಥರಿಗೆ ಪ್ರತಿ ತಿಂಗಳು ನಿಗದಿತ ನೆಲ ಬಾಡಿಗೆ ಹಾಗೂ ಶೇಕಡಾ 0.60 ಪೈಸೆಯಂತೆ ಬಳಕೆದಾರರ ಶುಲ್ಕವನ್ನು ಕಡ್ಡಾಯವಾಗಿ ವಿಧಿಸಲಾಗುತ್ತದೆ ಎಂದರು.</p>.<p>ಸದ್ಯಕ್ಕೆ ಕೇವಲ ತರಕಾರಿ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ತರಕಾರಿ ಹೊರತುಪಡಿಸಿ ಇತರ ಯಾವುದೇ ಕೃಷಿಯೇತರ ವ್ಯಾಪಾರಸ್ಥರಿಗೆ ಪ್ರಾಂಗಣದ ಒಳಭಾಗದಲ್ಲಿ ವ್ಯಾಪಾರ ಮಾಡಲು ಕಡ್ಡಾಯವಾಗಿ ನಿಷೇಧ ಹೇರಲಾಗಿದೆ ಎಂದು ತಿಳಿಸಿದರು.</p>.<p>ಮಾರುಕಟ್ಟೆಗೆ ಬರುವ ರೈತರು ಮತ್ತು ಸಾರ್ವಜನಿಕರಿಗಾಗಿ ಈಗಾಗಲೇ ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಪ್ಲಾಟ್ಫಾರ್ಮ್ ಸೇರಿದಂತೆ ಸೌಲಭ್ಯ ಒದಗಿಸಲಾಗುವುದು ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-17-80929574</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಳಿಯಾರು: ಪಟ್ಟಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಪ್ರತಿ ಗುರುವಾರ ಗಾಂಧಿಪೇಟೆ ರಸ್ತೆಯಲ್ಲಿ ನಡೆಯುತ್ತಿದ್ದ ತರಕಾರಿ ಸಂತೆಯನ್ನು ಏ. 23ರಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಸಮಿತಿ ಕಾರ್ಯದರ್ಶಿ ಎಂ.ನಾಗೇಂದ್ರಕುಮಾರ್ ತಿಳಿಸಿದರು.</p>.<p>ಗುರುವಾರ ಸಂತೆ ಮೈದಾನಕ್ಕೆ ಭೇಟಿ ನೀಡಿ ಪರಿಶೀಲಿಸಿ ಸ್ಥಳಾಂತರದ ಕುರಿತು ಸಾರ್ವಜನಿಕರು ಹಾಗೂ ರೈತರು ಸಹಕರಿಸಬೇಕೆಂದು ಮನವಿ ಮಾಡಿದರು.</p>.<p>ಪ್ರಥಮ ಹಂತದಲ್ಲಿ 32 ಜನ ತರಕಾರಿ ವ್ಯಾಪಾರಸ್ಥರನ್ನು ಗುರುತಿಸಲಾಗಿದೆ. ಅವರಿಗೆ ಎಪಿಎಂಸಿ ಆವರಣದಲ್ಲಿ ಬಾಕ್ಸ್ ಶೈಲಿಯಲ್ಲಿ ಜಾಗ ಗುರುತು ಮಾಡಿ ಅವಕಾಶ ಕಲ್ಪಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರಸ್ಥರು ಬಂದಲ್ಲಿ ಮುಂದಿನ ದಿನಗಳಲ್ಲಿ ಅವರಿಗೂ ವ್ಯವಸ್ಥೆ ಮಾಡಲಾಗುವುದು ಎಂದರು.</p>.<p>ಸಂತೆ ವ್ಯಾಪಾರಸ್ಥರಿಗೆ ಪ್ರತಿ ತಿಂಗಳು ನಿಗದಿತ ನೆಲ ಬಾಡಿಗೆ ಹಾಗೂ ಶೇಕಡಾ 0.60 ಪೈಸೆಯಂತೆ ಬಳಕೆದಾರರ ಶುಲ್ಕವನ್ನು ಕಡ್ಡಾಯವಾಗಿ ವಿಧಿಸಲಾಗುತ್ತದೆ ಎಂದರು.</p>.<p>ಸದ್ಯಕ್ಕೆ ಕೇವಲ ತರಕಾರಿ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ತರಕಾರಿ ಹೊರತುಪಡಿಸಿ ಇತರ ಯಾವುದೇ ಕೃಷಿಯೇತರ ವ್ಯಾಪಾರಸ್ಥರಿಗೆ ಪ್ರಾಂಗಣದ ಒಳಭಾಗದಲ್ಲಿ ವ್ಯಾಪಾರ ಮಾಡಲು ಕಡ್ಡಾಯವಾಗಿ ನಿಷೇಧ ಹೇರಲಾಗಿದೆ ಎಂದು ತಿಳಿಸಿದರು.</p>.<p>ಮಾರುಕಟ್ಟೆಗೆ ಬರುವ ರೈತರು ಮತ್ತು ಸಾರ್ವಜನಿಕರಿಗಾಗಿ ಈಗಾಗಲೇ ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಪ್ಲಾಟ್ಫಾರ್ಮ್ ಸೇರಿದಂತೆ ಸೌಲಭ್ಯ ಒದಗಿಸಲಾಗುವುದು ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-17-80929574</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>