<p><strong>ತುರುವೇಕೆರೆ: ‘</strong>ತಾಲ್ಲೂಕಿನ ದೊಡ್ಡೇನಹಳ್ಳಿ ಬಾರೆಯಿಂದ ಮಾಚೇನಹಳ್ಳಿವರೆಗಿನ ಡಾಂಬರ್ ರಸ್ತೆ ಕಾಮಗಾರಿಯಲ್ಲಿ ಲೋಕೋಪಯೋಗಿ ಇಲಾಖೆಯ ಮೂವರು ಎಂಜಿನಿಯರ್ಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಕಳಪೆ ಕಾಮಗಾರಿ ಮಾಡಿದ್ದಾರೆ ಎಂದು ಮುಖಂಡ ಜಿ. ಮಂಚೇನಹಳ್ಳಿ ಕೃಷ್ಣಮೂರ್ತಿ ಆರೋಪಿಸಿದರು.</p>.<p>ತುರುವೇಕೆರೆ- ಹುಲ್ಲೇಕೆರೆ ರಸ್ತೆ ಸರಪಳಿಯ 4.5 ಕಿ.ಮೀ ರಸ್ತೆಯನ್ನು ಎಸ್ಇಪಿ ಯೋಜನೆಯಡಿ ₹ 1.42 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ಮಾಡಿದ್ದು, ಕಳಪೆಯಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಶಾಸಕರು ಭೇಟಿ ನೀಡಿ ಕಾಮಗಾರಿ ಪರಿಶೀಲಿಸಬೇಕು. ಈ ಡಾಂಬರ್ ಕಿತ್ತು ಹೊಸದಾಗಿ ಕಾಮಗಾರಿ ನಡೆಸಬೇಕು ಎಂದು ಒತ್ತಾಯಿಸಿದರು.</p>.<p>‘ಕಳಪೆ ಕಾಮಗಾರಿಯನ್ನು ಪ್ರಶ್ನಿಸಿದ್ದಕ್ಕಾಗಿ ನನಗೆ ಕೊಲೆ ಬೆದರಿಕೆ ಬಂದಿದೆ. ಈ ಬಗ್ಗೆ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಎಂಜಿನಿಯರ್ಗಳಾದ ಸಂಜೀವರಾಜು, ಗುರುಸಿದ್ದಪ್ಪ, ಕಣ್ಮಣಿ, ಕಾಳಂಜಿಹಳ್ಳಿ ಸೋಮಶೇಖರ್, ಹಂಬಲದೇವನಹಳ್ಳಿ ತಿಮ್ಮೇಗೌಡ ವಿರುದ್ಧ ದೂರು ನೀಡಿದ್ದೇನೆ’ ಎಂದು ಅವರು ತಿಳಿಸಿದರು.</p>.<p>ಈ ಸಂದರ್ಭದಲ್ಲಿ ಡಾ. ಚೌದ್ರಿನಾಗೇಶ್, ಅರಳೀಕೆರೆ ರವಿ, ಬೋರೇಗೌಡ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ: ‘</strong>ತಾಲ್ಲೂಕಿನ ದೊಡ್ಡೇನಹಳ್ಳಿ ಬಾರೆಯಿಂದ ಮಾಚೇನಹಳ್ಳಿವರೆಗಿನ ಡಾಂಬರ್ ರಸ್ತೆ ಕಾಮಗಾರಿಯಲ್ಲಿ ಲೋಕೋಪಯೋಗಿ ಇಲಾಖೆಯ ಮೂವರು ಎಂಜಿನಿಯರ್ಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಕಳಪೆ ಕಾಮಗಾರಿ ಮಾಡಿದ್ದಾರೆ ಎಂದು ಮುಖಂಡ ಜಿ. ಮಂಚೇನಹಳ್ಳಿ ಕೃಷ್ಣಮೂರ್ತಿ ಆರೋಪಿಸಿದರು.</p>.<p>ತುರುವೇಕೆರೆ- ಹುಲ್ಲೇಕೆರೆ ರಸ್ತೆ ಸರಪಳಿಯ 4.5 ಕಿ.ಮೀ ರಸ್ತೆಯನ್ನು ಎಸ್ಇಪಿ ಯೋಜನೆಯಡಿ ₹ 1.42 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ಮಾಡಿದ್ದು, ಕಳಪೆಯಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಶಾಸಕರು ಭೇಟಿ ನೀಡಿ ಕಾಮಗಾರಿ ಪರಿಶೀಲಿಸಬೇಕು. ಈ ಡಾಂಬರ್ ಕಿತ್ತು ಹೊಸದಾಗಿ ಕಾಮಗಾರಿ ನಡೆಸಬೇಕು ಎಂದು ಒತ್ತಾಯಿಸಿದರು.</p>.<p>‘ಕಳಪೆ ಕಾಮಗಾರಿಯನ್ನು ಪ್ರಶ್ನಿಸಿದ್ದಕ್ಕಾಗಿ ನನಗೆ ಕೊಲೆ ಬೆದರಿಕೆ ಬಂದಿದೆ. ಈ ಬಗ್ಗೆ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಎಂಜಿನಿಯರ್ಗಳಾದ ಸಂಜೀವರಾಜು, ಗುರುಸಿದ್ದಪ್ಪ, ಕಣ್ಮಣಿ, ಕಾಳಂಜಿಹಳ್ಳಿ ಸೋಮಶೇಖರ್, ಹಂಬಲದೇವನಹಳ್ಳಿ ತಿಮ್ಮೇಗೌಡ ವಿರುದ್ಧ ದೂರು ನೀಡಿದ್ದೇನೆ’ ಎಂದು ಅವರು ತಿಳಿಸಿದರು.</p>.<p>ಈ ಸಂದರ್ಭದಲ್ಲಿ ಡಾ. ಚೌದ್ರಿನಾಗೇಶ್, ಅರಳೀಕೆರೆ ರವಿ, ಬೋರೇಗೌಡ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>