ಮಧುಗಿರಿ: ಅನೈತಿಕ ಸಂಬಂಧ ಹೊಂದಿರಬಹುದೆಂದು ಅನುಮಾನಗೊಂಡ ಪತಿ ತನ್ನ ಪತ್ನಿ, ಮೂವರು ಹೆಣ್ಣು ಮಕ್ಕಳು ಮಲಗಿದ್ದ ವೇಳೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಮನೆಗೆ ಬೀಗ ಹಾಕಿ ಪರಾರಿಯಾಗಿರುವ ಘಟನೆ ಸೋಮವಾರ ಮುಂಜಾನೆ ತಾಲ್ಲೂಕಿನ ಮುದ್ದನೇರಳೆಕೆರೆ ಗ್ರಾಮದಲ್ಲಿ ನಡೆದಿದೆ.
ಪತ್ನಿ ಶಾಂತಮ್ಮ (49) ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಹೆಣ್ಣು ಮಕ್ಕಳಿಗೆ ಸುಟ್ಟು ಗಾಯಗಳಾಗಿವೆ. ಎಲ್ಲರೂ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದ ರಾಮಾಂಜನಪ್ಪ ಕೃತ್ಯ ಎಸಗಿದ ಆರೋಪಿ. ಮಿಡಿಗೇಶಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.