<p><strong>ತುಮಕೂರು:</strong> ಗಂಡನೇ ಹೆಂಡತಿಯನ್ನು ಕೊಲೆ ಮಾಡಿರುವ ಘಟನೆ ನಗರದ ಸರಸ್ವತಿಪುರದಲ್ಲಿ ಬುಧವಾರ ರಾತ್ರಿ ನಡೆದಿದೆ.</p>.<p>ಪತ್ನಿ ಐಶ್ವರ್ಯ (19) ಅವರನ್ನು ಕೊಲೆಮಾಡಿ ಪತಿ ನಾಗರಾಜು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಂಪತಿ ನಡುವೆ ಬುಧವಾರ ತಡರಾತ್ರಿ ಜಗಳ ನಡೆದಿದ್ದು, ಗಲಾಟೆ ವಿಕೋಪಕ್ಕೆ ಹೋಗಿದೆ. ಪತ್ನಿಯನ್ನು ಹೊಡೆದು ಸಾಯಿಸಿ ನಂತರ ಮನೆಗೆ ಬೀಜ ಹಾಕಿಕೊಂಡು ತೆರಳಿದ್ದಾರೆ ಎನ್ನಲಾಗಿದೆ.</p>.<p>ಮಾರಿಯಮ್ಮನಪಾಳ್ಯದ ನಾಗರಾಜು ಜತೆಗೆ ಸಕಲೇಶಪುರ ತಾಲ್ಲೂಕು ಗೊಳಗೊಂಡೆ ಗ್ರಾಮದ ಐಶ್ವರ್ಯ ವಿವಾಹ 2019ರಲ್ಲಿ ನಡೆದಿತ್ತು. ತಾಲ್ಲೂಕಿನ ಹೊನ್ನುಡಿಕೆ ಹ್ಯಾಂಡ್ಪೋಸ್ಟ್ ಬಳಿಯಪೆಟ್ರೋಲ್ ಬಂಕ್ನಲ್ಲಿ ಮ್ಯಾನೇಜರಾಗಿ ಕೆಲಸ ನಿರ್ವಹಿಸುತ್ತಿದ್ದು, ಸರಸ್ವತಿಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.</p>.<p>ಮದುವೆ ಸಮಯದಲ್ಲಿ ಒಡವೆ ಹಾಗೂ ₹50 ಸಾವಿರ ನಗದು ಕೊಡಲಾಗಿತ್ತು. ನಂತರ ಹೆಚ್ಚಿನ ವರದಕ್ಷಿಣೆ ತರುವಂತೆ ಒತ್ತಾಯಿಸಿ ಐಶ್ವರ್ಯ ಜತೆಗೆ ಜಗಳ ಮಾಡುತ್ತಿದ್ದರು. ಕಾರು ತೆಗೆದುಕೊಳ್ಳಲು ₹1 ಲಕ್ಷ, ಬೈಕ್ ಖರೀದಿಗೆ ₹20 ಸಾವಿರ ನೀಡಲಾಗಿತ್ತು. ಗಂಡ ಹಾಗೂ ಅವರ ಮನೆಯವರು ಸೇರಿಕೊಂಡು ಮಗಳಿಗೆ ಕಿರುಕುಳ ನೀಡುತ್ತಿದ್ದರು ಎಂದು ಮೃತಳ ತಂದೆ ಉದಯ್ ದೂರು ನೀಡಿದ್ದಾರೆ.</p>.<p>ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಗಂಡನೇ ಹೆಂಡತಿಯನ್ನು ಕೊಲೆ ಮಾಡಿರುವ ಘಟನೆ ನಗರದ ಸರಸ್ವತಿಪುರದಲ್ಲಿ ಬುಧವಾರ ರಾತ್ರಿ ನಡೆದಿದೆ.</p>.<p>ಪತ್ನಿ ಐಶ್ವರ್ಯ (19) ಅವರನ್ನು ಕೊಲೆಮಾಡಿ ಪತಿ ನಾಗರಾಜು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಂಪತಿ ನಡುವೆ ಬುಧವಾರ ತಡರಾತ್ರಿ ಜಗಳ ನಡೆದಿದ್ದು, ಗಲಾಟೆ ವಿಕೋಪಕ್ಕೆ ಹೋಗಿದೆ. ಪತ್ನಿಯನ್ನು ಹೊಡೆದು ಸಾಯಿಸಿ ನಂತರ ಮನೆಗೆ ಬೀಜ ಹಾಕಿಕೊಂಡು ತೆರಳಿದ್ದಾರೆ ಎನ್ನಲಾಗಿದೆ.</p>.<p>ಮಾರಿಯಮ್ಮನಪಾಳ್ಯದ ನಾಗರಾಜು ಜತೆಗೆ ಸಕಲೇಶಪುರ ತಾಲ್ಲೂಕು ಗೊಳಗೊಂಡೆ ಗ್ರಾಮದ ಐಶ್ವರ್ಯ ವಿವಾಹ 2019ರಲ್ಲಿ ನಡೆದಿತ್ತು. ತಾಲ್ಲೂಕಿನ ಹೊನ್ನುಡಿಕೆ ಹ್ಯಾಂಡ್ಪೋಸ್ಟ್ ಬಳಿಯಪೆಟ್ರೋಲ್ ಬಂಕ್ನಲ್ಲಿ ಮ್ಯಾನೇಜರಾಗಿ ಕೆಲಸ ನಿರ್ವಹಿಸುತ್ತಿದ್ದು, ಸರಸ್ವತಿಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.</p>.<p>ಮದುವೆ ಸಮಯದಲ್ಲಿ ಒಡವೆ ಹಾಗೂ ₹50 ಸಾವಿರ ನಗದು ಕೊಡಲಾಗಿತ್ತು. ನಂತರ ಹೆಚ್ಚಿನ ವರದಕ್ಷಿಣೆ ತರುವಂತೆ ಒತ್ತಾಯಿಸಿ ಐಶ್ವರ್ಯ ಜತೆಗೆ ಜಗಳ ಮಾಡುತ್ತಿದ್ದರು. ಕಾರು ತೆಗೆದುಕೊಳ್ಳಲು ₹1 ಲಕ್ಷ, ಬೈಕ್ ಖರೀದಿಗೆ ₹20 ಸಾವಿರ ನೀಡಲಾಗಿತ್ತು. ಗಂಡ ಹಾಗೂ ಅವರ ಮನೆಯವರು ಸೇರಿಕೊಂಡು ಮಗಳಿಗೆ ಕಿರುಕುಳ ನೀಡುತ್ತಿದ್ದರು ಎಂದು ಮೃತಳ ತಂದೆ ಉದಯ್ ದೂರು ನೀಡಿದ್ದಾರೆ.</p>.<p>ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>