ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಣಿಗಲ್: ನಾನೇ ಬಿಜೆಪಿ ಅಭ್ಯರ್ಥಿ ಕೃಷ್ಣಕುಮಾರ್ ಹೇಳಿಕೆ

Last Updated 3 ಮಾರ್ಚ್ 2023, 4:36 IST
ಅಕ್ಷರ ಗಾತ್ರ

ಕುಣಿಗಲ್: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಣಿಗಲ್ ಕ್ಷೇತ್ರದಿಂದ ನಾನೇ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತೇನೆ’ ಎಂದು ಪಿಎಲ್‌ಡಿ ಬ್ಯಾಂಕ್ ರಾಜ್ಯ ಘಟಕದ ಅಧ್ಯಕ್ಷ ಡಿ. ಕೃಷ್ಣಕುಮಾರ್ ತಿಳಿಸಿದರು.

ಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಚುನಾವಣಾ ಪೂರ್ವದಲ್ಲಿ ಎಲ್ಲಾ ಪಕ್ಷದಲ್ಲೂ ಟಿಕೆಟ್‌ಗಾಗಿ ತೀವ್ರ ಪೈಪೋಟಿ ಇರುವಂತೆ ಬಿಜೆಪಿಯಲ್ಲೂ ಪೈಪೋಟಿ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ವಿಚಾರದಲ್ಲಿ ಜೆಡಿಎಸ್ ಗೊಂದಲ ಸೃಷ್ಟಿಸುತ್ತಿದೆ ಎಂದರು.

ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಬಿಜೆಪಿಗೆ ಬಂದಿದ್ದಾರೆ. ಅವರನ್ನು ವಿಶ್ವಾಸದಿಂದ ಸ್ವಾಗತಿಸಲಾಗಿದೆ. ಅವರಿಗೆ ಪಕ್ಷವು ಯಾವುದೇ ಭರವಸೆ ನೀಡಿಲ್ಲ. ಕೆಲವೆಡೆ ಪಕ್ಷದ ನಿರ್ಧಾರಗಳು, ನೀಡುವ ಜವಾಬ್ದಾರಿಯನ್ನು ಸ್ವಾಗತಿಸುವೆ ಎಂದು ಅವರು ಹೇಳುತ್ತಿದ್ದಾರೆ. ಆದರೂ, ಕ್ಷೇತ್ರದಲ್ಲಿ ತೀವ್ರವಾಗಿ ಸಂಚರಿಸಿ ಎಲ್ಲರೊಂದಿಗೆ ವಿಶ್ವಾಸದಿಂದ ನಡೆದುಕೊಳ್ಳುತ್ತಿದ್ದಾರೆ ಎಂದರು.

‘ಇನ್ನೂ ರಾಜೇಶ್ ಗೌಡ ಅವರಿಗೆ ಪಕ್ಷ ಯಾವುದೇ ಜವಾಬ್ದಾರಿ ನೀಡದಿದ್ದರೂ ಸ್ವಯಂ ಘೋಷಿತ ಬಿಜೆಪಿ ನಾಯಕರಾಗಿ ಹೋಬಳಿವಾರು ಸಭೆಗಳನ್ನು ನಡೆಸುತ್ತಿದ್ದಾರೆ. ಪಕ್ಷದ ಕಾರ್ಯಕ್ರಮ ರೂಪಿಸಲು ವರಿಷ್ಠರು ಸಲಹೆ ಮತ್ತು ಸೂಚನೆ ನೀಡುತ್ತಿದ್ದಾರೆ. ಅದರಂತೆ ನಡೆದುಕೊಂಡು ಪಕ್ಷ ಸಂಘಟಿಸುತ್ತಿರುವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT