ಖಾತೆ ಬದಲಾವಣೆ ಬೆನ್ನಲ್ಲೇ ಮಾಧುಸ್ವಾಮಿ ಎಲ್ಲ ಕಾರ್ಯಕ್ರಮಗಳಿಂದ ದೂರವಿದ್ದು ಮನೆಯಲ್ಲಿಯೇ ಉಳಿದಿದ್ದರು. ಸಿದ್ದಗಂಗಾ ಮಠಧ ಶಿವಕುಮಾರ ಸ್ವಾಮೀಜಿ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೂ ಹೋಗಿರಲಿಲ್ಲ. ಇದೇವೇಳೆ, ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಉದ್ಯೋಗ ಭವನಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೂ ಸಚಿವ ಮಾಧುಸ್ವಾಮಿ ಗೈರಾಗಿದ್ದಾರೆ.