<p><strong>ಗುಬ್ಬಿ:</strong> ಗುಡಿ-ಗೋಪುರಗಳ ನಿರ್ಮಾಣ ಸಮಾಜದಲ್ಲಿ ಸಾಮರಸ್ಯ ಹಾಗೂ ಒಗ್ಗಟ್ಟನ್ನು ಮೂಡಿಸಲು ಪೂರಕವಾಗಿದೆ ಎಂದು ಕೆರಗೋಡಿ ರಂಗಾಪುರ ಮಠದ ಗುರುಪರದೇಶಿಕೇಂದ್ರ ಸ್ವಾಮೀಜಿ ಹೇಳಿದರು.</p>.<p>ನಿಟ್ಟೂರು ಹೋಬಳಿ ಇಡಕನಹಳ್ಳಿಯಲ್ಲಿ ಮಲ್ಲಿಕಾರ್ಜುನ ದೇವಾಲಯ ಲೋಕಾರ್ಪಣೆ, ಸ್ಥಿರಬಿಂಬ ಪ್ರಾಣ ಪ್ರತಿಷ್ಠಾಪನೆಗೊಳಿಸಿ ಮಾತನಾಡಿದರು.</p>.<p>ದೇವಾಲಯಗಳು ಧಾರ್ಮಿಕ ಜ್ಞಾನ ಹೆಚ್ಚಿಸಿದರೆ, ವಿದ್ಯಾಸಂಸ್ಥೆಗಳು ಭೌತಿಕ ಜ್ಞಾನ ಹೆಚ್ಚಿಸಲು ಸಹಕಾರಿ. ಹಾಗಾಗಿ ಶಿಕ್ಷಣ ಸಂಸ್ಥೆಗಳ ಸ್ಥಾಪನೆಗೂ ಆದ್ಯತೆ ನೀಡಬೇಕಿದೆ ಎಂದರು.</p>.<p>ತೇವಡಿಹಳ್ಳಿ ಮಠದ ಗೋಸಲ ಚನ್ನಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಭಾರತೀಯ ಧರ್ಮ ಪರಂಪರೆ ವಿಶ್ವ ಶ್ರೇಷ್ಠದ್ದಾಗಿದೆ. ಎಲ್ಲ ತಾರತಮ್ಯ ಬದಿಗೊತ್ತಿ ಎಲ್ಲರೂ ಒಂದೇ ಎಂಬ ಮನೋಭಾವನೆಯಿಂದ ಮುಂದುವರೆದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.</p>.<p>ದೇವಾಲಯ ಲೋಕಾರ್ಪಣೆ ಅಂಗವಾಗಿ ಎರಡು ದಿನಗಳು ಮಹಾದಾಸೋಹ ವ್ಯವಸ್ಥೆ ಮಾಡಲಾಗಿತ್ತು.</p>.<p>ಬೆಟ್ಟದಹಳ್ಳಿ ಮಠದ ಚಂದ್ರಶೇಖರ ಸ್ವಾಮೀಜಿ, ಗೊಲ್ಲಹಳ್ಳಿ ಮಠದ ವಿಭವ ವಿದ್ಯಾಶಂಕರ ಸ್ವಾಮೀಜಿ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ಗುಡಿ-ಗೋಪುರಗಳ ನಿರ್ಮಾಣ ಸಮಾಜದಲ್ಲಿ ಸಾಮರಸ್ಯ ಹಾಗೂ ಒಗ್ಗಟ್ಟನ್ನು ಮೂಡಿಸಲು ಪೂರಕವಾಗಿದೆ ಎಂದು ಕೆರಗೋಡಿ ರಂಗಾಪುರ ಮಠದ ಗುರುಪರದೇಶಿಕೇಂದ್ರ ಸ್ವಾಮೀಜಿ ಹೇಳಿದರು.</p>.<p>ನಿಟ್ಟೂರು ಹೋಬಳಿ ಇಡಕನಹಳ್ಳಿಯಲ್ಲಿ ಮಲ್ಲಿಕಾರ್ಜುನ ದೇವಾಲಯ ಲೋಕಾರ್ಪಣೆ, ಸ್ಥಿರಬಿಂಬ ಪ್ರಾಣ ಪ್ರತಿಷ್ಠಾಪನೆಗೊಳಿಸಿ ಮಾತನಾಡಿದರು.</p>.<p>ದೇವಾಲಯಗಳು ಧಾರ್ಮಿಕ ಜ್ಞಾನ ಹೆಚ್ಚಿಸಿದರೆ, ವಿದ್ಯಾಸಂಸ್ಥೆಗಳು ಭೌತಿಕ ಜ್ಞಾನ ಹೆಚ್ಚಿಸಲು ಸಹಕಾರಿ. ಹಾಗಾಗಿ ಶಿಕ್ಷಣ ಸಂಸ್ಥೆಗಳ ಸ್ಥಾಪನೆಗೂ ಆದ್ಯತೆ ನೀಡಬೇಕಿದೆ ಎಂದರು.</p>.<p>ತೇವಡಿಹಳ್ಳಿ ಮಠದ ಗೋಸಲ ಚನ್ನಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಭಾರತೀಯ ಧರ್ಮ ಪರಂಪರೆ ವಿಶ್ವ ಶ್ರೇಷ್ಠದ್ದಾಗಿದೆ. ಎಲ್ಲ ತಾರತಮ್ಯ ಬದಿಗೊತ್ತಿ ಎಲ್ಲರೂ ಒಂದೇ ಎಂಬ ಮನೋಭಾವನೆಯಿಂದ ಮುಂದುವರೆದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.</p>.<p>ದೇವಾಲಯ ಲೋಕಾರ್ಪಣೆ ಅಂಗವಾಗಿ ಎರಡು ದಿನಗಳು ಮಹಾದಾಸೋಹ ವ್ಯವಸ್ಥೆ ಮಾಡಲಾಗಿತ್ತು.</p>.<p>ಬೆಟ್ಟದಹಳ್ಳಿ ಮಠದ ಚಂದ್ರಶೇಖರ ಸ್ವಾಮೀಜಿ, ಗೊಲ್ಲಹಳ್ಳಿ ಮಠದ ವಿಭವ ವಿದ್ಯಾಶಂಕರ ಸ್ವಾಮೀಜಿ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>